<p><strong>ನವದೆಹಲಿ(ಪಿಟಿಐ):</strong> ‘ಕೋವಿಡ್–19 ಸಂದರ್ಭದಲ್ಲಿ ಭಾರತ ಸದ್ಯ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.</p>.<p>ನಿಕ್ಕಿ ಗುರುವಾರ ಆಯೋಜಿಸಿದ್ದ ‘ಏಷ್ಯಾದ ಭವಿಷ್ಯ’ ಕುರಿತು ಆನ್ಲೈನ್ ವಿಚಾರಸಂಕಿರಣದಲ್ಲಿ ಮಾತನಾಡಿದ ಅವರು, ‘ಕೋವಿಡ್–19 ಪರಿಸ್ಥಿತಿಯನ್ನು ಒಂದು ಬಾರಿಯ ಸಮಸ್ಯೆ ಎಂದು ಪರಿಗಣಿಸಬಾರದು. ಇದು ಪದೇ ಪದೇ ಎದುರಾಗುವ ಸವಾಲು ಎನ್ನುವುದನ್ನು ಅರಿತುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಜಗತ್ತಿನ ಗಮನವೂ ಸಾರ್ವಜನಿಕ ಆರೋಗ್ಯದ ಮೇಲೆಯೇ ಗಮನಹರಿಸಿದೆ. ಕಳೆದ ಒಂದೂವರೆ ವರ್ಷದಿಂದ ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ಹಲವು ರೀತಿಯ ಸಮಸ್ಯೆಗಳು ಮತ್ತು ಸವಾಲುಗಳನ್ನು ಸೃಷ್ಟಿಸಿದೆ. ಈ ಕಾಯಿಲೆ ನಿಯಂತ್ರಿಸಲು ಅಂತರರಾಷ್ಟ್ರೀಯ ಸಹಕಾರ ಅಗತ್ಯ’ ಎಂದು ಪ್ರತಿಪಾದಿಸಿದರು.</p>.<p>‘ಆರೋಗ್ಯ ಮತ್ತು ವೈದ್ಯಕೀಯ ಅಗತ್ಯಗಳನ್ನು ಪರಿಣಾಮಕಾರಿಯಾಗಿ ನೀಗಿಸುವುದು ಜಾಗತಿಕಮಟ್ಟದಲ್ಲಿ ನಡೆಯಬೇಕು. ಕೇವಲ ಒಂದೇ ರಾಷ್ಟ್ರದಿಂದ ಎಲ್ಲ ಬೇಡಿಕೆಗಳನ್ನು ಪೂರೈಸಲು ಸಾದ್ಯವಿಲ್ಲ’ ಎಂದು ಹೇಳಿದರು.</p>.<p>’ಕೋವಿಡ್–19ನಿಂದ ವಿತರಣೆ ಸರಪಳಿ, ಜಾಗತಿಕ ಆಡಳಿತ, ಸಾಮಾಜಿಕ ಜವಾಬ್ದಾರಿ ಮತ್ತು ನೀತಿ ಸಂಹಿತೆಯ ವಿಷಯಗಳು ಚರ್ಚೆಗೆ ಮುನ್ನೆಲೆಗೆ ಬಂದಿವೆ. ಹೀಗಾಗಿ, ಪ್ರಸ್ತುತ ಜಗತ್ತಿನ ಪರಿಸ್ಥಿತಿಯನ್ನು ಅವಲೋಕಿಸಿ ಸವಾಲುಗಳನ್ನು ಎದುರಿಸುವ ಮೂಲಕ ನಾಳಿನ ಜಗತ್ತಿಗಾಗಿ ಸಿದ್ಧತೆಗಳನ್ನು ಕೈಗೊಳ್ಳಬೇಕಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ):</strong> ‘ಕೋವಿಡ್–19 ಸಂದರ್ಭದಲ್ಲಿ ಭಾರತ ಸದ್ಯ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.</p>.<p>ನಿಕ್ಕಿ ಗುರುವಾರ ಆಯೋಜಿಸಿದ್ದ ‘ಏಷ್ಯಾದ ಭವಿಷ್ಯ’ ಕುರಿತು ಆನ್ಲೈನ್ ವಿಚಾರಸಂಕಿರಣದಲ್ಲಿ ಮಾತನಾಡಿದ ಅವರು, ‘ಕೋವಿಡ್–19 ಪರಿಸ್ಥಿತಿಯನ್ನು ಒಂದು ಬಾರಿಯ ಸಮಸ್ಯೆ ಎಂದು ಪರಿಗಣಿಸಬಾರದು. ಇದು ಪದೇ ಪದೇ ಎದುರಾಗುವ ಸವಾಲು ಎನ್ನುವುದನ್ನು ಅರಿತುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಜಗತ್ತಿನ ಗಮನವೂ ಸಾರ್ವಜನಿಕ ಆರೋಗ್ಯದ ಮೇಲೆಯೇ ಗಮನಹರಿಸಿದೆ. ಕಳೆದ ಒಂದೂವರೆ ವರ್ಷದಿಂದ ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ಹಲವು ರೀತಿಯ ಸಮಸ್ಯೆಗಳು ಮತ್ತು ಸವಾಲುಗಳನ್ನು ಸೃಷ್ಟಿಸಿದೆ. ಈ ಕಾಯಿಲೆ ನಿಯಂತ್ರಿಸಲು ಅಂತರರಾಷ್ಟ್ರೀಯ ಸಹಕಾರ ಅಗತ್ಯ’ ಎಂದು ಪ್ರತಿಪಾದಿಸಿದರು.</p>.<p>‘ಆರೋಗ್ಯ ಮತ್ತು ವೈದ್ಯಕೀಯ ಅಗತ್ಯಗಳನ್ನು ಪರಿಣಾಮಕಾರಿಯಾಗಿ ನೀಗಿಸುವುದು ಜಾಗತಿಕಮಟ್ಟದಲ್ಲಿ ನಡೆಯಬೇಕು. ಕೇವಲ ಒಂದೇ ರಾಷ್ಟ್ರದಿಂದ ಎಲ್ಲ ಬೇಡಿಕೆಗಳನ್ನು ಪೂರೈಸಲು ಸಾದ್ಯವಿಲ್ಲ’ ಎಂದು ಹೇಳಿದರು.</p>.<p>’ಕೋವಿಡ್–19ನಿಂದ ವಿತರಣೆ ಸರಪಳಿ, ಜಾಗತಿಕ ಆಡಳಿತ, ಸಾಮಾಜಿಕ ಜವಾಬ್ದಾರಿ ಮತ್ತು ನೀತಿ ಸಂಹಿತೆಯ ವಿಷಯಗಳು ಚರ್ಚೆಗೆ ಮುನ್ನೆಲೆಗೆ ಬಂದಿವೆ. ಹೀಗಾಗಿ, ಪ್ರಸ್ತುತ ಜಗತ್ತಿನ ಪರಿಸ್ಥಿತಿಯನ್ನು ಅವಲೋಕಿಸಿ ಸವಾಲುಗಳನ್ನು ಎದುರಿಸುವ ಮೂಲಕ ನಾಳಿನ ಜಗತ್ತಿಗಾಗಿ ಸಿದ್ಧತೆಗಳನ್ನು ಕೈಗೊಳ್ಳಬೇಕಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>