<p><strong>ಕೋಲ್ಕತ್ತ:</strong> ಭಾರತವು ಕಳೆದ ಎರಡು ದಶಕಗಳಲ್ಲಿ ವೇಗವಾಗಿ ಬೆಳವಣಿಗೆ ಹೊಂದಿದೆ. ಮಹತ್ವಾಕಾಂಕ್ಷಿ ದೇಶದಿಂದ ಸ್ಪೂರ್ತಿದಾಯಕ ರಾಷ್ಟ್ರವಾಗಿ ಬೆಳೆದಿದೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೋಮವಾರ ಹೇಳಿದ್ದಾರೆ.</p><p>ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ 125ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ‘ಭಾರತ @ 2047; ಅಮೃತ ಕಾಲದಲ್ಲಿ ಆರ್ಥಿಕ ದೃಷ್ಟಿಕೋನ’ ಎನ್ನುವ ವಿಷಯದ ಕುರಿತು ಅವರು ಮಾತನಾಡಿದರು. </p><p>ಜಗತ್ತು ಕೋವಿಡ್ ಸಂಕ್ರಾಮಿಕ ಹಾಗೂ ಅಂತರರಾಷ್ಟ್ರೀಯ ರಾಜಕೀಯದ ಅಡಕತ್ತರಿಗೆ ಸಿಲುಕಿದ ಸಮಯದಲ್ಲೂ ಭಾರತವು ಬೆಳವಣಿಗೆ ಹೊಂದುತ್ತಿದೆ ಎಂದು ಹೇಳಿದ್ದಾರೆ.</p><p>ಕಳೆದ 10 ವರ್ಷಗಳಲ್ಲಿ ಭಾರತದ ಜಿಡಿಪಿ ಎರಡು ಪಟ್ಟು ಹೆಚ್ಚಾಗಿದೆ. ಈ ಸಾಧನೆ ಮಾಡಿದ ಏಕೈಕ ರಾಷ್ಟ್ರವಾಗಿದೆ. ಈ ಸಮಯದಲ್ಲಿ ದೇಶದ 25 ಕೋಟಿಗೂ ಅಧಿಕ ನಾಗರಿಕರನ್ನು ಬಡತನ ಮುಕ್ತ ಮಾಡಲಾಗಿದೆ. ಇದು ದೇಶದ ಇತಿಹಾಸದಲ್ಲಿ ನೆನಪಿಡಬೇಕಾದ ಸಾಧನೆಯಾಗಿದೆ ಎಂದು ಹೇಳಿದ್ದಾರೆ. </p><p>ಭಾರತವು ರಕ್ಷಣಾ ವಲಯದಲ್ಲಿ ಕೂಡ ಸ್ವಾವಲಂಬನೆ ಸಾಧಿಸುತ್ತಿದೆ. ಅತ್ಯಾಧುನಿಕ ಆಯುಧಗಳ ತಯಾರಿಕೆಯ ಜತೆಗೆ, 80ಕ್ಕೂ ಅಧಿಕ ದೇಶಗಳೊಂದಿಗೆ ರಕ್ಷಣಾ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ ಎಂದು ತಿಳಿಸಿದ್ದಾರೆ. </p><p>ದೇಶದ ಬೆಳವಣಿಗೆಯ ದೃಷ್ಟಿಯಲ್ಲಿ ಮುಂದಿನ ಎರಡು ದಶಕಗಳು ತುಂಬಾ ಮಹತ್ವದ್ದಾಗಿದೆ. ಭಾರತವು ಡಿಜಿಟಲ್ ಅಳವಡಿಕೆದಾರ ಸ್ಥಾನದಿಂದ ಡಿಜಿಟಲ್ ನಾಯಕನ ಪಟ್ಟ ಪಡೆಯಲಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಭಾರತವು ಕಳೆದ ಎರಡು ದಶಕಗಳಲ್ಲಿ ವೇಗವಾಗಿ ಬೆಳವಣಿಗೆ ಹೊಂದಿದೆ. ಮಹತ್ವಾಕಾಂಕ್ಷಿ ದೇಶದಿಂದ ಸ್ಪೂರ್ತಿದಾಯಕ ರಾಷ್ಟ್ರವಾಗಿ ಬೆಳೆದಿದೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೋಮವಾರ ಹೇಳಿದ್ದಾರೆ.</p><p>ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ 125ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ‘ಭಾರತ @ 2047; ಅಮೃತ ಕಾಲದಲ್ಲಿ ಆರ್ಥಿಕ ದೃಷ್ಟಿಕೋನ’ ಎನ್ನುವ ವಿಷಯದ ಕುರಿತು ಅವರು ಮಾತನಾಡಿದರು. </p><p>ಜಗತ್ತು ಕೋವಿಡ್ ಸಂಕ್ರಾಮಿಕ ಹಾಗೂ ಅಂತರರಾಷ್ಟ್ರೀಯ ರಾಜಕೀಯದ ಅಡಕತ್ತರಿಗೆ ಸಿಲುಕಿದ ಸಮಯದಲ್ಲೂ ಭಾರತವು ಬೆಳವಣಿಗೆ ಹೊಂದುತ್ತಿದೆ ಎಂದು ಹೇಳಿದ್ದಾರೆ.</p><p>ಕಳೆದ 10 ವರ್ಷಗಳಲ್ಲಿ ಭಾರತದ ಜಿಡಿಪಿ ಎರಡು ಪಟ್ಟು ಹೆಚ್ಚಾಗಿದೆ. ಈ ಸಾಧನೆ ಮಾಡಿದ ಏಕೈಕ ರಾಷ್ಟ್ರವಾಗಿದೆ. ಈ ಸಮಯದಲ್ಲಿ ದೇಶದ 25 ಕೋಟಿಗೂ ಅಧಿಕ ನಾಗರಿಕರನ್ನು ಬಡತನ ಮುಕ್ತ ಮಾಡಲಾಗಿದೆ. ಇದು ದೇಶದ ಇತಿಹಾಸದಲ್ಲಿ ನೆನಪಿಡಬೇಕಾದ ಸಾಧನೆಯಾಗಿದೆ ಎಂದು ಹೇಳಿದ್ದಾರೆ. </p><p>ಭಾರತವು ರಕ್ಷಣಾ ವಲಯದಲ್ಲಿ ಕೂಡ ಸ್ವಾವಲಂಬನೆ ಸಾಧಿಸುತ್ತಿದೆ. ಅತ್ಯಾಧುನಿಕ ಆಯುಧಗಳ ತಯಾರಿಕೆಯ ಜತೆಗೆ, 80ಕ್ಕೂ ಅಧಿಕ ದೇಶಗಳೊಂದಿಗೆ ರಕ್ಷಣಾ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ ಎಂದು ತಿಳಿಸಿದ್ದಾರೆ. </p><p>ದೇಶದ ಬೆಳವಣಿಗೆಯ ದೃಷ್ಟಿಯಲ್ಲಿ ಮುಂದಿನ ಎರಡು ದಶಕಗಳು ತುಂಬಾ ಮಹತ್ವದ್ದಾಗಿದೆ. ಭಾರತವು ಡಿಜಿಟಲ್ ಅಳವಡಿಕೆದಾರ ಸ್ಥಾನದಿಂದ ಡಿಜಿಟಲ್ ನಾಯಕನ ಪಟ್ಟ ಪಡೆಯಲಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>