<p><strong>ನವದೆಹಲಿ:</strong> ಕಳೆದ 6 ವರ್ಷಗಳ ತೆರಿಗೆ ನೀತಿಗಳಿಂದಾಗಿ ಭಾರತೀಯರು ತೆರಿಗೆ ಭಯೋತ್ಪಾದನೆಯಿಂದ ಪಾರದರ್ಶಕ ತೆರಿಗೆಯತ್ತ ಹೊರಳಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ನಮ್ಮ ಸರ್ಕಾರವು ತೆರಿಗೆ ಸಂಗ್ರಹ ಮಾಡು ವವರು ಹಾಗೂ ತೆರಿಗೆ ಪಾವತಿಸುವವರ ನಡುವಿನ ವಿಶ್ವಾಸದ ಕೊರತೆಯನ್ನು ನಿವಾರಿಸಲು ಯತ್ನಿಸಿದೆ’ ಎಂದರು.</p>.<p>ಕಾರ್ಪೊರೇಟ್ ತೆರಿಗೆಯನ್ನು ಶೇಕಡ 22ಕ್ಕೆ ಇಳಿಸಿದ್ದು, ಲಾಭಾಂಶ ವಿತರಣಾ ತೆರಿಗೆಯನ್ನು ಇಲ್ಲವಾಗಿಸಿದ್ದು, ತೆರಿಗೆ ಮೊತ್ತವನ್ನು ತ್ವರಿತವಾಗಿ ಹಿಂದಿರುಗಿಸುತ್ತಿರುವುದು ಪಾರದರ್ಶಕತೆಯನ್ನು ತಂದಿವೆ, ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಿವೆ ಎಂದರು.</p>.<p>‘ತೆರಿಗೆ ಭಯೋತ್ಪಾದನೆಯ ಸ್ಥಿತಿಯಿಂದ ಪಾರದರ್ಶಕ ತೆರಿಗೆ ಸ್ಥಿತಿಯತ್ತ ಸಾಗಲು ಸಾಧ್ಯವಾಗಿದ್ದಕ್ಕೆ ಕಾರಣ ಸರ್ಕಾರ ಅನುಸರಿಸುತ್ತಿರುವ ಸುಧಾರಣೆ, ಸಾಧನೆ ಮತ್ತು ಪರಿವರ್ತನೆ ಎಂಬ ಮಾರ್ಗ’ ಎಂದು ಅವರು ಹೇಳಿದರು.</p>.<p>‘₹ 5 ಲಕ್ಷದವರೆಗಿನ ವಾರ್ಷಿಕ ಆದಾಯವು ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿದೆ. ಇದರ ಪ್ರಯೋಜನವು ಕೆಳ ಮಧ್ಯಮ ವರ್ಗದ ಯುವಕರಿಗೆ ಸಿಗುತ್ತಿದೆ. ಈ ವರ್ಷದ ಬಜೆಟ್ನಲ್ಲಿ ಹೊಸ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು ಅದು ಸರಳವಾಗಿದೆ’ ಎಂದರು.</p>.<p>ಆದಾಯ ತೆರಿಗೆ ಪಾವತಿ ಮಾಡುವವರ ವಿಚಾರದಲ್ಲಿ ಇರುವ ವಿಶ್ವಾಸವು ಹೆಚ್ಚಾಗಿದೆ. ಶೇಕಡ 99.75ರಷ್ಟು ಆದಾಯ ತೆರಿಗೆ ವಿವರಗಳನ್ನು ಜಗ್ಗಾಟ ಇಲ್ಲದೆಯೇ ಒಪ್ಪಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಳೆದ 6 ವರ್ಷಗಳ ತೆರಿಗೆ ನೀತಿಗಳಿಂದಾಗಿ ಭಾರತೀಯರು ತೆರಿಗೆ ಭಯೋತ್ಪಾದನೆಯಿಂದ ಪಾರದರ್ಶಕ ತೆರಿಗೆಯತ್ತ ಹೊರಳಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ನಮ್ಮ ಸರ್ಕಾರವು ತೆರಿಗೆ ಸಂಗ್ರಹ ಮಾಡು ವವರು ಹಾಗೂ ತೆರಿಗೆ ಪಾವತಿಸುವವರ ನಡುವಿನ ವಿಶ್ವಾಸದ ಕೊರತೆಯನ್ನು ನಿವಾರಿಸಲು ಯತ್ನಿಸಿದೆ’ ಎಂದರು.</p>.<p>ಕಾರ್ಪೊರೇಟ್ ತೆರಿಗೆಯನ್ನು ಶೇಕಡ 22ಕ್ಕೆ ಇಳಿಸಿದ್ದು, ಲಾಭಾಂಶ ವಿತರಣಾ ತೆರಿಗೆಯನ್ನು ಇಲ್ಲವಾಗಿಸಿದ್ದು, ತೆರಿಗೆ ಮೊತ್ತವನ್ನು ತ್ವರಿತವಾಗಿ ಹಿಂದಿರುಗಿಸುತ್ತಿರುವುದು ಪಾರದರ್ಶಕತೆಯನ್ನು ತಂದಿವೆ, ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಿವೆ ಎಂದರು.</p>.<p>‘ತೆರಿಗೆ ಭಯೋತ್ಪಾದನೆಯ ಸ್ಥಿತಿಯಿಂದ ಪಾರದರ್ಶಕ ತೆರಿಗೆ ಸ್ಥಿತಿಯತ್ತ ಸಾಗಲು ಸಾಧ್ಯವಾಗಿದ್ದಕ್ಕೆ ಕಾರಣ ಸರ್ಕಾರ ಅನುಸರಿಸುತ್ತಿರುವ ಸುಧಾರಣೆ, ಸಾಧನೆ ಮತ್ತು ಪರಿವರ್ತನೆ ಎಂಬ ಮಾರ್ಗ’ ಎಂದು ಅವರು ಹೇಳಿದರು.</p>.<p>‘₹ 5 ಲಕ್ಷದವರೆಗಿನ ವಾರ್ಷಿಕ ಆದಾಯವು ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿದೆ. ಇದರ ಪ್ರಯೋಜನವು ಕೆಳ ಮಧ್ಯಮ ವರ್ಗದ ಯುವಕರಿಗೆ ಸಿಗುತ್ತಿದೆ. ಈ ವರ್ಷದ ಬಜೆಟ್ನಲ್ಲಿ ಹೊಸ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು ಅದು ಸರಳವಾಗಿದೆ’ ಎಂದರು.</p>.<p>ಆದಾಯ ತೆರಿಗೆ ಪಾವತಿ ಮಾಡುವವರ ವಿಚಾರದಲ್ಲಿ ಇರುವ ವಿಶ್ವಾಸವು ಹೆಚ್ಚಾಗಿದೆ. ಶೇಕಡ 99.75ರಷ್ಟು ಆದಾಯ ತೆರಿಗೆ ವಿವರಗಳನ್ನು ಜಗ್ಗಾಟ ಇಲ್ಲದೆಯೇ ಒಪ್ಪಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>