<p class="title"><strong>ನವದೆಹಲಿ (ಪಿಟಿಐ):</strong> ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತಂತೆ ವಿಶ್ವಸಂಸ್ಥೆಯ ಮಾನವಹಕ್ಕುಗಳ ಹೈಕಮಿಷನರ್ ಕಚೇರಿಯು (ಒಎಚ್ಸಿಎಚ್ಆರ್) ನೀಡಿದ್ದ ಹೇಳಿಕೆಗೆ ಭಾರತ ತೀವ್ರ ಪ್ರತಿರೋಧ ವ್ಯಕ್ತಪಡಿಸಿದೆ.<br /><br />‘ಗಡಿರೇಖೆಯುದ್ದಕ್ಕೂ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯಗಳಿಂದಾಗಿ ಸುರಕ್ಷತೆ, ಭದ್ರತೆಗೆ ಎದುರಾಗಿರುವ ಸವಾಲುಗಳನ್ನು ಅರ್ಥಮಾಡಿಕೊಳ್ಳದೇ ಕಚೇರಿಯು ಹೇಳಿಕೆ ನೀಡಿದೆ’ ಎಂದು ಭಾರತ ಪ್ರತಿಕ್ರಿಯಿಸಿದೆ.</p>.<p class="title">ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು, ‘ಭಾರತ ಸರ್ಕಾರವು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮಜರುಗಿಸಲಿದೆ, ನ್ಯಾಯಬದ್ಧ ಹಕ್ಕುಗಳ ವಿರುದ್ಧ ಅಲ್ಲ’ ಎಂದು ಹೇಳಿದ್ದಾರೆ.</p>.<p class="title">ಜಮ್ಮು ಮತ್ತು ಕಾಶ್ಮೀರದ ನಿರ್ದಿಷ್ಟ ಘಟನೆ ಉಲ್ಲೇಖಿಸಿಒಎಚ್ಸಿಎಚ್ಆರ್ ಹೇಳಿಕೆ ನೀಡಿತ್ತು. ‘ಈ ಹೇಳಿಕೆ ಮೂಲಕ ಸಮಿತಿಯು ಭಾರತದ ಭದ್ರತಾ ಪಡೆ ಮತ್ತು ಸ್ಥಳೀಯ ಆಡಳಿತದ ವಿರುದ್ಧ ಆಧಾರರಹಿತವಾದ ಆರೋಪ ಮಾಡಿದೆ‘ ಎಂದು ಬಾಗ್ಚಿ ಹೇಳಿದ್ದಾರೆ.</p>.<p class="title">ಜವಾಬ್ದಾರಿಯುತ ದೇಶವಾಗಿ, ಮಾನವ ಹಕ್ಕುಗಳ ರಕ್ಷಣೆಗೆ ಬದ್ಧವಾಗಿ ಭಾರತ ಸರ್ಕಾರವು ಗಡಿಯಲ್ಲಿ ಭಯೋತ್ಪಾದನೆ ಚಟುವಟಿಕೆಗಳನ್ನು ಹತ್ತಿಕ್ಕಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ):</strong> ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತಂತೆ ವಿಶ್ವಸಂಸ್ಥೆಯ ಮಾನವಹಕ್ಕುಗಳ ಹೈಕಮಿಷನರ್ ಕಚೇರಿಯು (ಒಎಚ್ಸಿಎಚ್ಆರ್) ನೀಡಿದ್ದ ಹೇಳಿಕೆಗೆ ಭಾರತ ತೀವ್ರ ಪ್ರತಿರೋಧ ವ್ಯಕ್ತಪಡಿಸಿದೆ.<br /><br />‘ಗಡಿರೇಖೆಯುದ್ದಕ್ಕೂ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯಗಳಿಂದಾಗಿ ಸುರಕ್ಷತೆ, ಭದ್ರತೆಗೆ ಎದುರಾಗಿರುವ ಸವಾಲುಗಳನ್ನು ಅರ್ಥಮಾಡಿಕೊಳ್ಳದೇ ಕಚೇರಿಯು ಹೇಳಿಕೆ ನೀಡಿದೆ’ ಎಂದು ಭಾರತ ಪ್ರತಿಕ್ರಿಯಿಸಿದೆ.</p>.<p class="title">ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು, ‘ಭಾರತ ಸರ್ಕಾರವು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮಜರುಗಿಸಲಿದೆ, ನ್ಯಾಯಬದ್ಧ ಹಕ್ಕುಗಳ ವಿರುದ್ಧ ಅಲ್ಲ’ ಎಂದು ಹೇಳಿದ್ದಾರೆ.</p>.<p class="title">ಜಮ್ಮು ಮತ್ತು ಕಾಶ್ಮೀರದ ನಿರ್ದಿಷ್ಟ ಘಟನೆ ಉಲ್ಲೇಖಿಸಿಒಎಚ್ಸಿಎಚ್ಆರ್ ಹೇಳಿಕೆ ನೀಡಿತ್ತು. ‘ಈ ಹೇಳಿಕೆ ಮೂಲಕ ಸಮಿತಿಯು ಭಾರತದ ಭದ್ರತಾ ಪಡೆ ಮತ್ತು ಸ್ಥಳೀಯ ಆಡಳಿತದ ವಿರುದ್ಧ ಆಧಾರರಹಿತವಾದ ಆರೋಪ ಮಾಡಿದೆ‘ ಎಂದು ಬಾಗ್ಚಿ ಹೇಳಿದ್ದಾರೆ.</p>.<p class="title">ಜವಾಬ್ದಾರಿಯುತ ದೇಶವಾಗಿ, ಮಾನವ ಹಕ್ಕುಗಳ ರಕ್ಷಣೆಗೆ ಬದ್ಧವಾಗಿ ಭಾರತ ಸರ್ಕಾರವು ಗಡಿಯಲ್ಲಿ ಭಯೋತ್ಪಾದನೆ ಚಟುವಟಿಕೆಗಳನ್ನು ಹತ್ತಿಕ್ಕಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>