<p><strong>ನವದೆಹಲಿ:</strong> ಇಂಧನವನ್ನು ತರುವುದಕ್ಕಾಗಿ ಹೊಸ ಹಡಗುಗಳನ್ನು ಕಳುಹಿಸುವುದಕ್ಕೂ ಮೊದಲು, ಈಗ ಕೊಲ್ಲಿಯಲ್ಲಿ ಸಿಲುಕಿಕೊಂಡಿರುವ ಹಡಗುಗಳನ್ನು ಸುರಕ್ಷಿತವಾಗಿ ವಾಪಸಾಗುವಂತೆ ಮಾಡಲು ಭಾರತ ಬಯಸುತ್ತದೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮುಕೇಶ್ ಮಂಗಲ್ ಗುರುವಾರ ತಿಳಿಸಿದರು. </p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಎಲ್ಲಾ ಹಡಗುಗಳನ್ನು ಹೊರ್ಮುಜ್ ಜಲಸಂಧಿಯಿಂದ ಹೊರತರುವುದು ಆದ್ಯತೆಯಾಗಿದೆ. ಪರಿಸ್ಥಿತಿಯು ಅನುಕೂಲಕರವಾಗಿರುವ ಎಲ್ಲಾ ಸಂದರ್ಭಗಳಲ್ಲಿ, ಭಾರತವು ಹಡಗುಗಳನ್ನು ಜಲಸಂಧಿಯ ಪಶ್ಚಿಮಕ್ಕೆ ಕಳುಹಿಸುತ್ತದೆ’ ಎಂದರು. </p>.<p>‘ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಕೊಲ್ಲಿಯಲ್ಲಿ ಸಿಲುಕಿರುವ ಎಲ್ಲಾ ಹಡಗುಗಳು ಮರಳಿದ ಬಳಿಕ, ಮತ್ತೆ ಹಡಗುಗಳನ್ನು ಕಳುಹಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು. </p>.<p>‘ಭಾರತದ ಧ್ವಜ ಹೊಂದಿರುವ 13 ಹಾಗೂ ಭಾರತೀಯರೊಬ್ಬರ ಒಡೆತನದ 1 ಹಡಗು ಸೇರಿ ಒಟ್ಟು 14 ಹಡಗು ಜಲಸಂಧಿಯ ಪಶ್ಚಿಮ ಭಾಗದಲ್ಲಿ ಸಿಲುಕಿವೆ’ ಎಂದು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಂಧನವನ್ನು ತರುವುದಕ್ಕಾಗಿ ಹೊಸ ಹಡಗುಗಳನ್ನು ಕಳುಹಿಸುವುದಕ್ಕೂ ಮೊದಲು, ಈಗ ಕೊಲ್ಲಿಯಲ್ಲಿ ಸಿಲುಕಿಕೊಂಡಿರುವ ಹಡಗುಗಳನ್ನು ಸುರಕ್ಷಿತವಾಗಿ ವಾಪಸಾಗುವಂತೆ ಮಾಡಲು ಭಾರತ ಬಯಸುತ್ತದೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮುಕೇಶ್ ಮಂಗಲ್ ಗುರುವಾರ ತಿಳಿಸಿದರು. </p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಎಲ್ಲಾ ಹಡಗುಗಳನ್ನು ಹೊರ್ಮುಜ್ ಜಲಸಂಧಿಯಿಂದ ಹೊರತರುವುದು ಆದ್ಯತೆಯಾಗಿದೆ. ಪರಿಸ್ಥಿತಿಯು ಅನುಕೂಲಕರವಾಗಿರುವ ಎಲ್ಲಾ ಸಂದರ್ಭಗಳಲ್ಲಿ, ಭಾರತವು ಹಡಗುಗಳನ್ನು ಜಲಸಂಧಿಯ ಪಶ್ಚಿಮಕ್ಕೆ ಕಳುಹಿಸುತ್ತದೆ’ ಎಂದರು. </p>.<p>‘ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಕೊಲ್ಲಿಯಲ್ಲಿ ಸಿಲುಕಿರುವ ಎಲ್ಲಾ ಹಡಗುಗಳು ಮರಳಿದ ಬಳಿಕ, ಮತ್ತೆ ಹಡಗುಗಳನ್ನು ಕಳುಹಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು. </p>.<p>‘ಭಾರತದ ಧ್ವಜ ಹೊಂದಿರುವ 13 ಹಾಗೂ ಭಾರತೀಯರೊಬ್ಬರ ಒಡೆತನದ 1 ಹಡಗು ಸೇರಿ ಒಟ್ಟು 14 ಹಡಗು ಜಲಸಂಧಿಯ ಪಶ್ಚಿಮ ಭಾಗದಲ್ಲಿ ಸಿಲುಕಿವೆ’ ಎಂದು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>