<p><strong>ರಾಯಗಢ:</strong> ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಬದಲಾಗುತ್ತಿದ್ದು, ಆರ್ಥಿಕವಾಗಿ ಶಕ್ತಿಯಾಲಿಯಾಗುತ್ತಿದೆ. ಈ ಪರಿವರ್ತನೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.</p><p>ಅಗರವಾಲ್ ಸಮುದಾಯ ನಗರದಲ್ಲಿ ನಿರ್ಮಿಸಿರುವ 'ಆಗ್ರೋಹ ಧಾಮ' ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ವೇಳೆ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಉಪಸ್ಥಿತರಿದ್ದರು.</p><p>'ಭಾರತ ಇಂದು ಮೋದಿ ಅವರ ನಾಯಕತ್ವದಲ್ಲಿ ಬದಲಾಗುತ್ತಿದೆ. ಆರ್ಥಿಕವಾಗಿ ಅತ್ಯಂತ ಪ್ರಬಲ ರಾಷ್ಟ್ರವಾಗುವತ್ತ ಹೆಜ್ಜೆ ಇಟ್ಟಿದೆ. ಈ ಆರ್ಥಿಕ ಪರಿವರ್ತನೆಗೆ ನಾವೆಲ್ಲ ಸಹಕಾರ ನೀಡಬೇಕು. ನಮ್ಮ ಯುವಕರು, ನವೋದ್ಯೋಮಿಗಳಾಗಿ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಆರ್ಥಿಕ ವ್ಯವಸ್ಥೆಯನ್ನು ಬಲಪಡಿಸಬೇಕು' ಎಂದು ಬಿರ್ಲಾ ಕರೆ ನೀಡಿದ್ದಾರೆ.</p><p>ಸಮಾಜವು ಸರ್ಕಾರದೊಂದಿಗೆ ಸಾಮೂಹಿಕವಾಗಿ ಕೆಲಸ ಮಾಡಬೇಕಾಗುತ್ತದೆ. 140 ಕೋಟಿ ಜನರೂ ಒಟ್ಟಾಗಿ ಕೆಲಸ ಮಾಡಿದರೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಶಪಥ ಈಡೇರಿಸಲು ಸಾಧ್ಯ ಎಂದು ಪ್ರಧಾನಿಯವರು ಹೇಳಿದ್ದು ಆ ಕಾರಣಕ್ಕಾಗಿಯೇ ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಗಢ:</strong> ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಬದಲಾಗುತ್ತಿದ್ದು, ಆರ್ಥಿಕವಾಗಿ ಶಕ್ತಿಯಾಲಿಯಾಗುತ್ತಿದೆ. ಈ ಪರಿವರ್ತನೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.</p><p>ಅಗರವಾಲ್ ಸಮುದಾಯ ನಗರದಲ್ಲಿ ನಿರ್ಮಿಸಿರುವ 'ಆಗ್ರೋಹ ಧಾಮ' ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ವೇಳೆ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಉಪಸ್ಥಿತರಿದ್ದರು.</p><p>'ಭಾರತ ಇಂದು ಮೋದಿ ಅವರ ನಾಯಕತ್ವದಲ್ಲಿ ಬದಲಾಗುತ್ತಿದೆ. ಆರ್ಥಿಕವಾಗಿ ಅತ್ಯಂತ ಪ್ರಬಲ ರಾಷ್ಟ್ರವಾಗುವತ್ತ ಹೆಜ್ಜೆ ಇಟ್ಟಿದೆ. ಈ ಆರ್ಥಿಕ ಪರಿವರ್ತನೆಗೆ ನಾವೆಲ್ಲ ಸಹಕಾರ ನೀಡಬೇಕು. ನಮ್ಮ ಯುವಕರು, ನವೋದ್ಯೋಮಿಗಳಾಗಿ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಆರ್ಥಿಕ ವ್ಯವಸ್ಥೆಯನ್ನು ಬಲಪಡಿಸಬೇಕು' ಎಂದು ಬಿರ್ಲಾ ಕರೆ ನೀಡಿದ್ದಾರೆ.</p><p>ಸಮಾಜವು ಸರ್ಕಾರದೊಂದಿಗೆ ಸಾಮೂಹಿಕವಾಗಿ ಕೆಲಸ ಮಾಡಬೇಕಾಗುತ್ತದೆ. 140 ಕೋಟಿ ಜನರೂ ಒಟ್ಟಾಗಿ ಕೆಲಸ ಮಾಡಿದರೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಶಪಥ ಈಡೇರಿಸಲು ಸಾಧ್ಯ ಎಂದು ಪ್ರಧಾನಿಯವರು ಹೇಳಿದ್ದು ಆ ಕಾರಣಕ್ಕಾಗಿಯೇ ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>