<p><strong>ನವದೆಹಲಿ:</strong> ‘ಭಾರತ ಮತ್ತು ಇಟಲಿ ನಡುವಿನ ಬಾಂಧವ್ಯ ಈಗ ನಿರ್ಣಾಯಕ ಹಂತ ತಲುಪಿದೆ. ಉಭಯ ದೇಶಗಳ ನಡುವಿನ ಸೌಹಾರ್ದಯುತ ಮೈತ್ರಿಯು ಈಗ ವಿಶೇಷವಾದ ರಕ್ಷಣಾತ್ಮಕ ಪಾಲುದಾರಿಕೆಯಾಗಿ ಹೊರಹೊಮ್ಮಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೊನಿ ಪ್ರತಿಪಾದಿಸಿದ್ದಾರೆ.</p>.<p>ಉಭಯ ನಾಯಕರು, ಭಾರತ ಮತ್ತು ಇಟಲಿ ಮಾಧ್ಯಮಗಳಿಗೆ ಜಂಟಿಯಾಗಿ ಬರೆದಿರುವ ಲೇಖನದಲ್ಲಿ ಈ ಕುರಿತು ಉಲ್ಲೇಖಿಸಿದ್ದಾರೆ.</p>.<p>‘ಇತ್ತೀಚಿನ ದಿನಗಳಲ್ಲಿ ಅಂತರರಾಷ್ಟ್ರೀಯ ಸಂಬಂಧಗಳು ಹಾಗೂ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬರುತ್ತಿವೆ. ಆದರೆ, ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿನಿರಂತರ ವಿನಿಮಯಗಳಿಂದಾಗಿ ಭಾರತ ಮತ್ತು ಇಟಲಿ ನಡುವಿನ ಪಾಲುದಾರಿಕೆ ಗಟ್ಟಿಗೊಂಡಿದೆ’ ಎಂದು ಮೋದಿ ಹಾಗೂ ಮೆಲೊನಿ ಹೇಳಿದ್ದಾರೆ.</p>.<p>‘ಕ್ರಿಯಾಶೀಲವಾದ ಆರ್ಥಿಕತೆ, ಸೃಜನಶೀಲತೆಯಿಂದ ಕೂಡಿದ ಸಾಮಾಜಿಕ ವ್ಯವಸ್ಥೆ ಹಾಗೂ ಶತಮಾನಗಳಷ್ಟು ಹಳೆಯದಾದ ನಮ್ಮ ನಾಗರಿಕತೆಗಳು ಹೊಂದಿರುವ ಜ್ಞಾನ ಮತ್ತು ಅನುಭವದಿಂದಾಗಿ ಉಭಯ ದೇಶಗಳ ನಡುವಿನ ಬಾಂಧವ್ಯ ಹೊಸ ಎತ್ತರಕ್ಕೆ ಏರಿದೆ’ ಎಂದು ಅವರು ಬರೆದಿದ್ದಾರೆ.</p>.<p>‘ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಸದೃಢಗೊಳಿಸಲು ನಾವು ಬದ್ಧರಾಗಿದ್ದೇವೆ. ವಿನ್ಯಾಸ ಹಾಗೂ ತಯಾರಿಕೆ ಕ್ಷೇತ್ರದಲ್ಲಿ ಇಟಲಿಯ ಸಾಮರ್ಥ್ಯ ಅಗಾಧವಾದುದು. ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾದ ಭಾರತದಲ್ಲಿ ಎಂಜಿನಿಯರಿಂಗ್ ಪ್ರತಿಭೆಗಳಿಗೆ ಕೊರತೆ ಇಲ್ಲ. ಉದ್ಯಮಶೀಲತೆಗೆ ಪೂರಕವಾದ ಪರಿಸರವೂ ಇದೆ. ಈ ಸಾಮರ್ಥ್ಯಗಳನ್ನು ಬಳಸಿಕೊಂಡು ಪ್ರಗತಿ ಸಾಧಿಸುವುದು ಎರಡೂ ದೇಶಗಳ ಗುರಿಯಾಗಿದೆ’ ಎಂದು ಅವರು ಲೇಖನದಲ್ಲಿ ವಿವರಿಸಿದ್ದಾರೆ.</p>.<h2> ಲೇಖನದ ಪ್ರಮುಖ ಅಂಶಗಳು</h2><ul><li><p>ಭಾರತ ಮತ್ತು ಇಟಲಿ ನಡುವಿನ ವ್ಯಾಪಾರದ ಪ್ರಮಾಣವನ್ನು 2029ರ ವೇಳೆಗೆ ₹2.24 ಲಕ್ಷ ಕೋಟಿಗೆ ತಲುಪಿಸುವ ಗುರಿ ಹೊಂದಲಾಗಿದೆ </p></li><li><p> ರಕ್ಷಣೆ ಏರೋಸ್ಪೇಸ್ ಶುದ್ಧ ತಂತ್ರಜ್ಞಾನಗಳು ಆಟೊಮೋಟಿವ್ ಬಿಡಿಭಾಗಗಳ ತಯಾರಿಕೆ ರಾಸಾಯನಿಕಗಳು ಔಷಧಗಳು ಜವಳಿ ಕೃಷಿ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕಾರ್ಯನಿರ್ವಹಣೆ </p></li><li><p>ಕೃತಕ ಬುದ್ಧಿಮತ್ತೆಯ(ಎ.ಐ) ಅಭಿವೃದ್ಧಿ ಮತ್ತು ಬಳಕೆಯು ಮಾನವ ಕೇಂದ್ರಿತವಾಗಿರಬೇಕು. ಇದನ್ನು ಖಾತ್ರಿಪಡಿಸಲು ಉಭಯ ದೇಶಗಳು ಶ್ರಮಿಸಲಿವೆ</p></li><li><p> ಡಿಜಿಟಲ್ ಕ್ಷೇತ್ರದಲ್ಲಿ ಸಹಕಾರ ಸೈಬರ್ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು</p></li><li><p>ಭಾರತವು ಬಾಹ್ಯಾಕಾಶ ಮತ್ತು ಉಪಗ್ರಹ ತಂತ್ರಜ್ಞಾನದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಅಂತರಿಕ್ಷ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಇಟಲಿಯ ಸಾಧನೆ ದೊಡ್ಡದು. ಉಭಯ ದೇಶಗಳ ನಡುವಿನ ಸಹಕಾರ ವೃದ್ಧಿಯಿಂದ ಈ ಕ್ಷೇತ್ರಗಳಲ್ಲಿ ವಿಪುಲ ಉದ್ಯೋಗಾವಕಾಶ ಸೃಷ್ಟಿ ಸಾಧ್ಯ </p></li><li><p>ರತೀಯ ಸಂಸ್ಕೃತಿಯಲ್ಲಿರುವ ‘ಧರ್ಮ’ದ ಪರಿಕಲ್ಪನೆ ಪ್ರತಿಯೊಬ್ಬರಲ್ಲಿ ಹೊಣೆಗಾರಿಕೆಯನ್ನು ಜಾಗೃತಗೊಳಿಸುತ್ತದೆ. ‘ವಸುಧೈವ ಕುಟುಂಬಕಂ’ ತತ್ವವು ವಿಶ್ವವೇ ಒಂದು ಕುಟುಂಬವೆಂದು ಸಾರುತ್ತದೆ. ಇಟಲಿಯ ಪರಂಪರೆ ಕೂಡ ಇವೇ ಮೌಲ್ಯಗಳನ್ನು ಪ್ರತಿಧ್ವನಿಸುತ್ತದೆ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಭಾರತ ಮತ್ತು ಇಟಲಿ ನಡುವಿನ ಬಾಂಧವ್ಯ ಈಗ ನಿರ್ಣಾಯಕ ಹಂತ ತಲುಪಿದೆ. ಉಭಯ ದೇಶಗಳ ನಡುವಿನ ಸೌಹಾರ್ದಯುತ ಮೈತ್ರಿಯು ಈಗ ವಿಶೇಷವಾದ ರಕ್ಷಣಾತ್ಮಕ ಪಾಲುದಾರಿಕೆಯಾಗಿ ಹೊರಹೊಮ್ಮಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೊನಿ ಪ್ರತಿಪಾದಿಸಿದ್ದಾರೆ.</p>.<p>ಉಭಯ ನಾಯಕರು, ಭಾರತ ಮತ್ತು ಇಟಲಿ ಮಾಧ್ಯಮಗಳಿಗೆ ಜಂಟಿಯಾಗಿ ಬರೆದಿರುವ ಲೇಖನದಲ್ಲಿ ಈ ಕುರಿತು ಉಲ್ಲೇಖಿಸಿದ್ದಾರೆ.</p>.<p>‘ಇತ್ತೀಚಿನ ದಿನಗಳಲ್ಲಿ ಅಂತರರಾಷ್ಟ್ರೀಯ ಸಂಬಂಧಗಳು ಹಾಗೂ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬರುತ್ತಿವೆ. ಆದರೆ, ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿನಿರಂತರ ವಿನಿಮಯಗಳಿಂದಾಗಿ ಭಾರತ ಮತ್ತು ಇಟಲಿ ನಡುವಿನ ಪಾಲುದಾರಿಕೆ ಗಟ್ಟಿಗೊಂಡಿದೆ’ ಎಂದು ಮೋದಿ ಹಾಗೂ ಮೆಲೊನಿ ಹೇಳಿದ್ದಾರೆ.</p>.<p>‘ಕ್ರಿಯಾಶೀಲವಾದ ಆರ್ಥಿಕತೆ, ಸೃಜನಶೀಲತೆಯಿಂದ ಕೂಡಿದ ಸಾಮಾಜಿಕ ವ್ಯವಸ್ಥೆ ಹಾಗೂ ಶತಮಾನಗಳಷ್ಟು ಹಳೆಯದಾದ ನಮ್ಮ ನಾಗರಿಕತೆಗಳು ಹೊಂದಿರುವ ಜ್ಞಾನ ಮತ್ತು ಅನುಭವದಿಂದಾಗಿ ಉಭಯ ದೇಶಗಳ ನಡುವಿನ ಬಾಂಧವ್ಯ ಹೊಸ ಎತ್ತರಕ್ಕೆ ಏರಿದೆ’ ಎಂದು ಅವರು ಬರೆದಿದ್ದಾರೆ.</p>.<p>‘ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಸದೃಢಗೊಳಿಸಲು ನಾವು ಬದ್ಧರಾಗಿದ್ದೇವೆ. ವಿನ್ಯಾಸ ಹಾಗೂ ತಯಾರಿಕೆ ಕ್ಷೇತ್ರದಲ್ಲಿ ಇಟಲಿಯ ಸಾಮರ್ಥ್ಯ ಅಗಾಧವಾದುದು. ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾದ ಭಾರತದಲ್ಲಿ ಎಂಜಿನಿಯರಿಂಗ್ ಪ್ರತಿಭೆಗಳಿಗೆ ಕೊರತೆ ಇಲ್ಲ. ಉದ್ಯಮಶೀಲತೆಗೆ ಪೂರಕವಾದ ಪರಿಸರವೂ ಇದೆ. ಈ ಸಾಮರ್ಥ್ಯಗಳನ್ನು ಬಳಸಿಕೊಂಡು ಪ್ರಗತಿ ಸಾಧಿಸುವುದು ಎರಡೂ ದೇಶಗಳ ಗುರಿಯಾಗಿದೆ’ ಎಂದು ಅವರು ಲೇಖನದಲ್ಲಿ ವಿವರಿಸಿದ್ದಾರೆ.</p>.<h2> ಲೇಖನದ ಪ್ರಮುಖ ಅಂಶಗಳು</h2><ul><li><p>ಭಾರತ ಮತ್ತು ಇಟಲಿ ನಡುವಿನ ವ್ಯಾಪಾರದ ಪ್ರಮಾಣವನ್ನು 2029ರ ವೇಳೆಗೆ ₹2.24 ಲಕ್ಷ ಕೋಟಿಗೆ ತಲುಪಿಸುವ ಗುರಿ ಹೊಂದಲಾಗಿದೆ </p></li><li><p> ರಕ್ಷಣೆ ಏರೋಸ್ಪೇಸ್ ಶುದ್ಧ ತಂತ್ರಜ್ಞಾನಗಳು ಆಟೊಮೋಟಿವ್ ಬಿಡಿಭಾಗಗಳ ತಯಾರಿಕೆ ರಾಸಾಯನಿಕಗಳು ಔಷಧಗಳು ಜವಳಿ ಕೃಷಿ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕಾರ್ಯನಿರ್ವಹಣೆ </p></li><li><p>ಕೃತಕ ಬುದ್ಧಿಮತ್ತೆಯ(ಎ.ಐ) ಅಭಿವೃದ್ಧಿ ಮತ್ತು ಬಳಕೆಯು ಮಾನವ ಕೇಂದ್ರಿತವಾಗಿರಬೇಕು. ಇದನ್ನು ಖಾತ್ರಿಪಡಿಸಲು ಉಭಯ ದೇಶಗಳು ಶ್ರಮಿಸಲಿವೆ</p></li><li><p> ಡಿಜಿಟಲ್ ಕ್ಷೇತ್ರದಲ್ಲಿ ಸಹಕಾರ ಸೈಬರ್ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು</p></li><li><p>ಭಾರತವು ಬಾಹ್ಯಾಕಾಶ ಮತ್ತು ಉಪಗ್ರಹ ತಂತ್ರಜ್ಞಾನದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಅಂತರಿಕ್ಷ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಇಟಲಿಯ ಸಾಧನೆ ದೊಡ್ಡದು. ಉಭಯ ದೇಶಗಳ ನಡುವಿನ ಸಹಕಾರ ವೃದ್ಧಿಯಿಂದ ಈ ಕ್ಷೇತ್ರಗಳಲ್ಲಿ ವಿಪುಲ ಉದ್ಯೋಗಾವಕಾಶ ಸೃಷ್ಟಿ ಸಾಧ್ಯ </p></li><li><p>ರತೀಯ ಸಂಸ್ಕೃತಿಯಲ್ಲಿರುವ ‘ಧರ್ಮ’ದ ಪರಿಕಲ್ಪನೆ ಪ್ರತಿಯೊಬ್ಬರಲ್ಲಿ ಹೊಣೆಗಾರಿಕೆಯನ್ನು ಜಾಗೃತಗೊಳಿಸುತ್ತದೆ. ‘ವಸುಧೈವ ಕುಟುಂಬಕಂ’ ತತ್ವವು ವಿಶ್ವವೇ ಒಂದು ಕುಟುಂಬವೆಂದು ಸಾರುತ್ತದೆ. ಇಟಲಿಯ ಪರಂಪರೆ ಕೂಡ ಇವೇ ಮೌಲ್ಯಗಳನ್ನು ಪ್ರತಿಧ್ವನಿಸುತ್ತದೆ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>