‘ವಾರ್ಷಿಕ ಜಂಟಿ ತರಬೇತಿ ಕಾರ್ಯಕ್ರಮವಾದ ‘ಧರ್ಮ ಗಾರ್ಡಿಯನ್’ ಅನ್ನು ದೇಶದಲ್ಲಿ 2018ರಿಂದ ಹಮ್ಮಿಕೊಳ್ಳಲಾಗುತ್ತಿದೆ. ಜಾಗತಿಕ ಭಯೋತ್ಪಾದನೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಉಭಯ ರಾಷ್ಟ್ರಗಳು ಎದುರಿಸುತ್ತಿರುವ ಭದ್ರತಾ ಸವಾಲುಗಳ ಹಿನ್ನೆಲೆಯಲ್ಲಿ ಈ ಅಭ್ಯಾಸ ಕಾರ್ಯಕ್ರಮವು ಬಹಳ ಮಹತ್ವ ಪಡೆದುಕೊಂಡಿದೆ ಮತ್ತು ನಿರ್ಣಾಯಕವೂ ಎನಿಸಿದೆ. ಅರಣ್ಯ ಹಾಗೂ ನಗರದ ಸನ್ನಿವೇಶದಲ್ಲಿ ಭಯೋತ್ಪಾದನೆ ನಿಗ್ರಹ ಚಟುವಟಿಕೆಗಳ ಕಾರ್ಯಾಚರಣೆ ಕೈಗೊಳ್ಳಲು ಜಂಟಿ ತರಬೇತಿಯನ್ನು ಇಲ್ಲಿ ಪಡೆದುಕೊಳ್ಳಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.