<p><strong>ನವದೆಹಲಿ (ಪಿಟಿಐ)</strong>: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾನೂನುಗಳು ಪ್ರಧಾನಿ ನರೇಂದ್ರ ಮೋದಿ ಅವರ ಕೈಗಾರಿಕೋದ್ಯಮಿ ಸ್ನೇಹಿತನಿಗೆ ಮಾತ್ರವೇ ಅನುಕೂಲ ಮಾಡಿಕೊಡಲಿವೆ. ಸ್ವಾತಂತ್ರ್ಯಾ ನಂತರದಲ್ಲಿ ಯಾವತ್ತೂ ಕಾರ್ಮಿಕರ ಹಕ್ಕುಗಳಿಗೆ ಇಷ್ಟೊಂದು ಧಕ್ಕೆಯಾಗಿರಲಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ಈ ಬಗ್ಗೆ ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಖರ್ಗೆ, ‘ಕಾರ್ಮಿಕ ವಿರೋಧಿಯಾದ ಈ ಕಾನೂನುಗಳನ್ನು ಜಾರಿ ಮಾಡಲು ಅಧಿಸೂಚನೆ ಹೊರಡಿಸುವುದಕ್ಕಾಗಿ ಮೋದಿ ಸರ್ಕಾರವು ವಿಧಾನಸಭೆಗಳಿಗೆ ನಡೆದ ಚುನಾವಣೆ ಫಲಿತಾಂಶ ಹೊರಬರು ವುದನ್ನೇ ಕಾಯುತ್ತಿತ್ತು’ ಎಂದು ದೂರಿದರು.</p>.<p>ಮೇ 8 ಮತ್ತು 9ರಂದು ಕೇಂದ್ರ ಸರ್ಕಾರವು ವಿವಿಧ ಗೆಜೆಟ್ ಅಧಿಸೂಚನೆ ಪ್ರಕಟಿಸಿ, ನಾಲ್ಕು ಕಾರ್ಮಿಕ ಕಾನೂನುಗಳನ್ನು ಜಾರಿಗೆ ತಂದಿದೆ. ‘ಯಾರೊಂದಿಗೂ ಚರ್ಚಿಸದೆಯೇ ಕಾನೂನು ಜಾರಿ ಮಾಡಲಾಗಿದೆ. 2015ರಿಂದ ಈಚೆಗೆ ಒಮ್ಮೆಯೂ ಭಾರತೀಯ ಕಾರ್ಮಿಕ ಸಮಾವೇಶವನ್ನು ಆಯೋಜಿಸಲಿಲ್ಲ’ ಎಂದು ಖರ್ಗೆ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-51-5556313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ)</strong>: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾನೂನುಗಳು ಪ್ರಧಾನಿ ನರೇಂದ್ರ ಮೋದಿ ಅವರ ಕೈಗಾರಿಕೋದ್ಯಮಿ ಸ್ನೇಹಿತನಿಗೆ ಮಾತ್ರವೇ ಅನುಕೂಲ ಮಾಡಿಕೊಡಲಿವೆ. ಸ್ವಾತಂತ್ರ್ಯಾ ನಂತರದಲ್ಲಿ ಯಾವತ್ತೂ ಕಾರ್ಮಿಕರ ಹಕ್ಕುಗಳಿಗೆ ಇಷ್ಟೊಂದು ಧಕ್ಕೆಯಾಗಿರಲಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ಈ ಬಗ್ಗೆ ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಖರ್ಗೆ, ‘ಕಾರ್ಮಿಕ ವಿರೋಧಿಯಾದ ಈ ಕಾನೂನುಗಳನ್ನು ಜಾರಿ ಮಾಡಲು ಅಧಿಸೂಚನೆ ಹೊರಡಿಸುವುದಕ್ಕಾಗಿ ಮೋದಿ ಸರ್ಕಾರವು ವಿಧಾನಸಭೆಗಳಿಗೆ ನಡೆದ ಚುನಾವಣೆ ಫಲಿತಾಂಶ ಹೊರಬರು ವುದನ್ನೇ ಕಾಯುತ್ತಿತ್ತು’ ಎಂದು ದೂರಿದರು.</p>.<p>ಮೇ 8 ಮತ್ತು 9ರಂದು ಕೇಂದ್ರ ಸರ್ಕಾರವು ವಿವಿಧ ಗೆಜೆಟ್ ಅಧಿಸೂಚನೆ ಪ್ರಕಟಿಸಿ, ನಾಲ್ಕು ಕಾರ್ಮಿಕ ಕಾನೂನುಗಳನ್ನು ಜಾರಿಗೆ ತಂದಿದೆ. ‘ಯಾರೊಂದಿಗೂ ಚರ್ಚಿಸದೆಯೇ ಕಾನೂನು ಜಾರಿ ಮಾಡಲಾಗಿದೆ. 2015ರಿಂದ ಈಚೆಗೆ ಒಮ್ಮೆಯೂ ಭಾರತೀಯ ಕಾರ್ಮಿಕ ಸಮಾವೇಶವನ್ನು ಆಯೋಜಿಸಲಿಲ್ಲ’ ಎಂದು ಖರ್ಗೆ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-51-5556313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>