ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ಖಾಲಿಸ್ತಾನಿ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯಲ್ಲಿ ಭಾರತದ ಏಜೆಂಟರ ಕೈವಾಡವಿದೆ ಎಂದು ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ಟ್ರೂಡೊ ಆರೋಪಿಸಿದ್ದರು. ‘ಆರೋಪ ಅಸಂಬದ್ಧ’ ಎಂದಿದ್ದ ಭಾರತ, ಕೆನಡಾದ ವಾದವನ್ನು ನಿರಾಕರಿಸಿತ್ತು. ಅದು ಭಾರತ ಮತ್ತು ಕೆನಡಾ ನಡುವೆ ಸಂಬಂಧ ಹಳಸಲು ಕಾರಣವಾಗಿತ್ತು.