<p><strong>ನವದೆಹಲಿ</strong>: ‘ಅಂತರಿಕ್ಷದಿಂದ ಕಣ್ಣು ಹಾಯಿಸಿದಾಗ, ಭಾರತವು ಮಹತ್ವಾಕಾಂಕ್ಷೆಯೇ ಮೈವೆತ್ತಿದಂತೆ ಕಾಣುತ್ತದೆ. ಯಾವುದೇ ಅಂಜಿಕೆ ಇಲ್ಲದ; ಆತ್ಮವಿಶ್ವಾಸ ಹಾಗೂ ಹೆಮ್ಮೆಯಿಂದ ಬೀಗುವ ದೇಶವಾಗಿ ಗಮನ ಸೆಳೆಯುತ್ತದೆ’ ಎಂದು ಗಗನಯಾನಿ ಶುಭಾಂಶು ಶುಕ್ಲಾ ಭಾನುವಾರ ಹೇಳಿದ್ದಾರೆ.</p>.<p>ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ‘ಆಕ್ಸಿಯಂ–4’ ಬಾಹ್ಯಾಕಾಶ ಕಾರ್ಯಕ್ರಮದ ಗಗನಯಾನಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.</p>.<p>ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು ಭೂಮಿಯತ್ತ ಸೋಮವಾರ ಮರುಪ್ರಯಾಣ ಕೈಗೊಳ್ಳಲಿದ್ದಾರೆ. ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಮಂಗಳವಾರ ಇಳಿಯುವ ಸಾಧ್ಯತೆ ಇದೆ.</p>.<p>‘ಈ ಅಂತರಿಕ್ಷ ಯಾನ ನನ್ನಲ್ಲಿ ಅಲೌಕಿಕ ಭಾವನೆ ಮೂಡಿಸುತ್ತಿದೆ. ನನ್ನ ಪಾಲಿಗೆ ಇದೊಂದು ಅದ್ಭುತ ಪಯಣ. ನಾನು ಅಪಾರ ನೆನಪುಗಳು ಹಾಗೂ ಕಲಿಕೆಯೊಂದಿಗೆ ಭೂಮಿಯತ್ತ ಮರು ಪಯಣ ಆರಂಭಿಸುತ್ತಿದ್ದೇನೆ. ಇವುಗಳನ್ನು ನನ್ನ ದೇಶವಾಸಿಗಳೊಂದಿಗೆ ಹಂಚಿಕೊಳ್ಳಲು ಉತ್ಸುಕನಾಗಿರುವೆ’ ಎಂದು ಶುಕ್ಲಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಅಂತರಿಕ್ಷದಿಂದ ಕಣ್ಣು ಹಾಯಿಸಿದಾಗ, ಭಾರತವು ಮಹತ್ವಾಕಾಂಕ್ಷೆಯೇ ಮೈವೆತ್ತಿದಂತೆ ಕಾಣುತ್ತದೆ. ಯಾವುದೇ ಅಂಜಿಕೆ ಇಲ್ಲದ; ಆತ್ಮವಿಶ್ವಾಸ ಹಾಗೂ ಹೆಮ್ಮೆಯಿಂದ ಬೀಗುವ ದೇಶವಾಗಿ ಗಮನ ಸೆಳೆಯುತ್ತದೆ’ ಎಂದು ಗಗನಯಾನಿ ಶುಭಾಂಶು ಶುಕ್ಲಾ ಭಾನುವಾರ ಹೇಳಿದ್ದಾರೆ.</p>.<p>ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ‘ಆಕ್ಸಿಯಂ–4’ ಬಾಹ್ಯಾಕಾಶ ಕಾರ್ಯಕ್ರಮದ ಗಗನಯಾನಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.</p>.<p>ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು ಭೂಮಿಯತ್ತ ಸೋಮವಾರ ಮರುಪ್ರಯಾಣ ಕೈಗೊಳ್ಳಲಿದ್ದಾರೆ. ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಮಂಗಳವಾರ ಇಳಿಯುವ ಸಾಧ್ಯತೆ ಇದೆ.</p>.<p>‘ಈ ಅಂತರಿಕ್ಷ ಯಾನ ನನ್ನಲ್ಲಿ ಅಲೌಕಿಕ ಭಾವನೆ ಮೂಡಿಸುತ್ತಿದೆ. ನನ್ನ ಪಾಲಿಗೆ ಇದೊಂದು ಅದ್ಭುತ ಪಯಣ. ನಾನು ಅಪಾರ ನೆನಪುಗಳು ಹಾಗೂ ಕಲಿಕೆಯೊಂದಿಗೆ ಭೂಮಿಯತ್ತ ಮರು ಪಯಣ ಆರಂಭಿಸುತ್ತಿದ್ದೇನೆ. ಇವುಗಳನ್ನು ನನ್ನ ದೇಶವಾಸಿಗಳೊಂದಿಗೆ ಹಂಚಿಕೊಳ್ಳಲು ಉತ್ಸುಕನಾಗಿರುವೆ’ ಎಂದು ಶುಕ್ಲಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>