<p><strong>ವಾರಾಣಸಿ:</strong> ಸ್ಥಳೀಯ ಕರೆನ್ಸಿಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು ಸಕ್ರಿಯವಾಗಿಸುವ ನಿಟ್ಟಿನಲ್ಲಿ ಭಾರತ ಮತ್ತು ಮಾರಿಷಸ್ ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ತಿಳಿಸಿದ್ದಾರೆ. </p><p>ಭಾರತ ಪ್ರವಾಸದಲ್ಲಿರುವ ಮಾರಿಷಸ್ ಪ್ರಧಾನಿ ನವೀನ್ಚಂದ್ರ ರಾಮಗುಲಾಂ ಅವರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. </p><p>ಉಭಯ ದೇಶಗಳ ನಡುವಣ ನಿಕಟ ಬಾಂಧವ್ಯವನ್ನು ಉಲ್ಲೇಖ ಮಾಡಿರುವ ಪ್ರಧಾನಿ ಮೋದಿ, ಎರಡೂ ರಾಷ್ಟ್ರಗಳ ಕನಸುಗಳು ಹಾಗೂ ಭವಿಷ್ಯವು ಒಂದೇ ಆಗಿದೆ ಎಂದು ತಿಳಿಸಿದ್ದಾರೆ. </p><p>ಹಿಂದೂ ಮಹಾಸಾಗರದಲ್ಲಿ ಉಭಯ ರಾಷ್ಟ್ರಗಳ ನಡುವೆ ಮುಕ್ತ, ಸುರಕ್ಷಿತ, ಸ್ಥಿರ ಮತ್ತು ಸಮೃದ್ಧದ ಸಮಾನ ಹಂಚಿಕೆಗೆ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಮಾರಿಷನ್ನ ವಿಶೇಷ ಆರ್ಥಿಕ ವಲಯದ ಭದ್ರತೆ ಹಾಗೂ ಸಾಗರ ಸಾಮರ್ಥ್ಯವನ್ನು ಬಲಪಡಿಸಲು ಭಾರತ ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. </p><p>ವಸಾಹತುಶಾಹಿಯಿಂದ ಮುಕ್ತಗೊಂಡ ಮಾರಿಷಸ್ನ ಸಾರ್ವಭೌಮತ್ವವನ್ನು ಭಾರತ ಸದಾ ಬೆಂಬಲಿಸಿದೆ. ಅಲ್ಲದೆ ಸದಾ ಮಾರಿಷಸ್ ಪರವಾಗಿ ನಿಂತಿದೆ ಎಂದು ಪ್ರಧಾನಿ ಹೇಳಿದ್ದಾರೆ. </p>.ಸಾಮಾಜಿಕ ಜಾಲತಾಣಗಳಲ್ಲಿ PM ಮೋದಿ ಬಗ್ಗೆ AI ಫೋಟೊ, ವಿಡಿಯೊ ಹಾಕುತ್ತಿದ್ದವನ ಬಂಧನ.ಮತಕಳ್ಳತನದ 'ಹೈಡ್ರೋಜನ್ ಬಾಂಬ್' ಶೀಘ್ರ ಬಹಿರಂಗ: ರಾಹುಲ್ ಗಾಂಧಿ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ:</strong> ಸ್ಥಳೀಯ ಕರೆನ್ಸಿಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು ಸಕ್ರಿಯವಾಗಿಸುವ ನಿಟ್ಟಿನಲ್ಲಿ ಭಾರತ ಮತ್ತು ಮಾರಿಷಸ್ ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ತಿಳಿಸಿದ್ದಾರೆ. </p><p>ಭಾರತ ಪ್ರವಾಸದಲ್ಲಿರುವ ಮಾರಿಷಸ್ ಪ್ರಧಾನಿ ನವೀನ್ಚಂದ್ರ ರಾಮಗುಲಾಂ ಅವರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. </p><p>ಉಭಯ ದೇಶಗಳ ನಡುವಣ ನಿಕಟ ಬಾಂಧವ್ಯವನ್ನು ಉಲ್ಲೇಖ ಮಾಡಿರುವ ಪ್ರಧಾನಿ ಮೋದಿ, ಎರಡೂ ರಾಷ್ಟ್ರಗಳ ಕನಸುಗಳು ಹಾಗೂ ಭವಿಷ್ಯವು ಒಂದೇ ಆಗಿದೆ ಎಂದು ತಿಳಿಸಿದ್ದಾರೆ. </p><p>ಹಿಂದೂ ಮಹಾಸಾಗರದಲ್ಲಿ ಉಭಯ ರಾಷ್ಟ್ರಗಳ ನಡುವೆ ಮುಕ್ತ, ಸುರಕ್ಷಿತ, ಸ್ಥಿರ ಮತ್ತು ಸಮೃದ್ಧದ ಸಮಾನ ಹಂಚಿಕೆಗೆ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಮಾರಿಷನ್ನ ವಿಶೇಷ ಆರ್ಥಿಕ ವಲಯದ ಭದ್ರತೆ ಹಾಗೂ ಸಾಗರ ಸಾಮರ್ಥ್ಯವನ್ನು ಬಲಪಡಿಸಲು ಭಾರತ ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. </p><p>ವಸಾಹತುಶಾಹಿಯಿಂದ ಮುಕ್ತಗೊಂಡ ಮಾರಿಷಸ್ನ ಸಾರ್ವಭೌಮತ್ವವನ್ನು ಭಾರತ ಸದಾ ಬೆಂಬಲಿಸಿದೆ. ಅಲ್ಲದೆ ಸದಾ ಮಾರಿಷಸ್ ಪರವಾಗಿ ನಿಂತಿದೆ ಎಂದು ಪ್ರಧಾನಿ ಹೇಳಿದ್ದಾರೆ. </p>.ಸಾಮಾಜಿಕ ಜಾಲತಾಣಗಳಲ್ಲಿ PM ಮೋದಿ ಬಗ್ಗೆ AI ಫೋಟೊ, ವಿಡಿಯೊ ಹಾಕುತ್ತಿದ್ದವನ ಬಂಧನ.ಮತಕಳ್ಳತನದ 'ಹೈಡ್ರೋಜನ್ ಬಾಂಬ್' ಶೀಘ್ರ ಬಹಿರಂಗ: ರಾಹುಲ್ ಗಾಂಧಿ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>