<p>ಪಿಟಿಐ</p>.<p>ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿ ಪ್ರಕರಣಗಳನ್ನು ಭಾರತ ‘ನಿರಂತರವಾಗಿ ಗಮನಿಸುತ್ತಿದೆ’ ಮತ್ತು ‘ದಾಖಲೆ ಮಾಡಿಕೊಳ್ಳುತ್ತಿದೆ’ ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿನಲ್ಲಿ ತಿಳಿಸಿದೆ.</p>.<p>‘ವ್ಯಕ್ತಿಗಳು, ಅವರ ಮನೆ, ಕಚೇರಿ, ದೇಗುಲಗಳ ಮೇಲೆ ನಡೆಯುತ್ತಿರುವ ದಾಳಿಯ ಮಾಹಿತಿ ಸಂಗ್ರಹಿಸಿದ್ದೇವೆ’ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.</p>.<p>‘ಅಲ್ಲಿನ ಮಧ್ಯಂತರ ಸರ್ಕಾರ ಸಮಗ್ರ ತನಿಖೆ ಮಾಡುವ, ಅಮಾಯಕರನ್ನು ಕೊಂದವರ ವಿರುದ್ಧ ಕ್ರಮ ಕೈಗೊಂಡು ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವ ವಿಶ್ವಾಸ ಇದೆ’ ಎಂದಿದ್ದಾರೆ.</p>.<p>‘ಬಾಂಗ್ಲಾ ಹಿಂಸಾಚಾರ ಮತ್ತು ದಾಳಿಯಲ್ಲಿ ಎಷ್ಟು ಮಂದಿ ಹಿಂದೂಗಳು ಬಲಿಯಾಗಿದ್ದಾರೆ ಎಂಬ ಬಗ್ಗೆ ವಿದೇಶಾಂಗ ಇಲಾಖೆ ದಾಖಲೆ ನಿರ್ವಹಣೆ ಮಾಡುತ್ತಿದೆಯೇ? ಅಲ್ಲಿನ ಸರ್ಕಾರದ ಜತೆ ಚರ್ಚಿಸಿದೆಯೇ?’ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.</p>.<p>‘ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆ ಬಗ್ಗೆ ನಿರಂತರವಾಗಿ ಬಾಂಗ್ಲಾದೇಶದ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚಿಸಿದ್ದೇವೆ’ ಎಂದು ಇಲಾಖೆ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿಟಿಐ</p>.<p>ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿ ಪ್ರಕರಣಗಳನ್ನು ಭಾರತ ‘ನಿರಂತರವಾಗಿ ಗಮನಿಸುತ್ತಿದೆ’ ಮತ್ತು ‘ದಾಖಲೆ ಮಾಡಿಕೊಳ್ಳುತ್ತಿದೆ’ ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿನಲ್ಲಿ ತಿಳಿಸಿದೆ.</p>.<p>‘ವ್ಯಕ್ತಿಗಳು, ಅವರ ಮನೆ, ಕಚೇರಿ, ದೇಗುಲಗಳ ಮೇಲೆ ನಡೆಯುತ್ತಿರುವ ದಾಳಿಯ ಮಾಹಿತಿ ಸಂಗ್ರಹಿಸಿದ್ದೇವೆ’ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.</p>.<p>‘ಅಲ್ಲಿನ ಮಧ್ಯಂತರ ಸರ್ಕಾರ ಸಮಗ್ರ ತನಿಖೆ ಮಾಡುವ, ಅಮಾಯಕರನ್ನು ಕೊಂದವರ ವಿರುದ್ಧ ಕ್ರಮ ಕೈಗೊಂಡು ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವ ವಿಶ್ವಾಸ ಇದೆ’ ಎಂದಿದ್ದಾರೆ.</p>.<p>‘ಬಾಂಗ್ಲಾ ಹಿಂಸಾಚಾರ ಮತ್ತು ದಾಳಿಯಲ್ಲಿ ಎಷ್ಟು ಮಂದಿ ಹಿಂದೂಗಳು ಬಲಿಯಾಗಿದ್ದಾರೆ ಎಂಬ ಬಗ್ಗೆ ವಿದೇಶಾಂಗ ಇಲಾಖೆ ದಾಖಲೆ ನಿರ್ವಹಣೆ ಮಾಡುತ್ತಿದೆಯೇ? ಅಲ್ಲಿನ ಸರ್ಕಾರದ ಜತೆ ಚರ್ಚಿಸಿದೆಯೇ?’ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.</p>.<p>‘ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆ ಬಗ್ಗೆ ನಿರಂತರವಾಗಿ ಬಾಂಗ್ಲಾದೇಶದ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚಿಸಿದ್ದೇವೆ’ ಎಂದು ಇಲಾಖೆ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>