<p><strong>ನವದೆಹಲಿ</strong>: ದೇಶದಲ್ಲಿ ಈ ಬಾರಿಯ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ. ಮಳೆಗಾಲದ ಋತುಮಾನದುದ್ದಕ್ಕೂ ಎಲ್ ನಿನೊ ಪರಿಣಾಮದ ಸಾಧ್ಯತೆಗಳು ಕಡಿಮೆ ಎಂದು ಹವಾಮಾನ ಇಲಾಖೆ ಮಂಗಳವಾರ ಹೇಳಿದೆ.</p><p>ಜೂನ್ನಿಂದ ಸೆಪ್ಟೆಂಬರ್ವರೆಗಿನ ನಾಲ್ಕು ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ. ದೀರ್ಘಾವಧಿಯ ಸರಾಸರಿ ಮಳೆಯ ಪ್ರಮಾಣ 87 ಸೆಂ.ಮೀ. ಇದ್ದು, ಈ ಬಾರಿ ಶೇ 105ರಷ್ಟು ಹೆಚ್ಛಳವಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಮುಖ್ಯಸ್ಥ ಮೃತ್ಯುಂಜಯ ಮೋಹಪಾತ್ರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.</p><p>ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಬಿಸಿಗಾಳಿ ಬೀಸುತ್ತಿದೆ. ಏಪ್ರಿಲ್ನಿಂದ ಜೂನ್ವರೆಗೆ ಬಿಸಿಗಾಳಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆಗೆ ನೀರಿನ ಕೊರತೆ ಎದುರಾಗಬಹುದು ಎಂದು ಇಲಾಖೆ ಹೇಳಿದೆ.</p><p> ಭಾರತದಲ್ಲಿ ಕೃಷಿ ಚಟುವಟಿಕೆಗೆ ಮುಂಗಾರಿನ ಪಾತ್ರ ಮಹತ್ವದ್ದಾಗಿದೆ. ದೇಶದ ಶೇ 42.3ರಷ್ಟು ಜನರ ಜೀವನಾಧಾರ ಇಂದಿಗೂ ಕೃಷಿಯೇ ಆಗಿದೆ. ಜಿಡಿಪಿಗೆ ಇದರ ಒಟ್ಟು ಕೊಡುಗೆ ಶೇ 18.2ರಷ್ಟಿದೆ.</p>.ಮುಂಗಾರು ಜೀವ ಸಂಕುಲದ ಸಂಭ್ರಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಈ ಬಾರಿಯ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ. ಮಳೆಗಾಲದ ಋತುಮಾನದುದ್ದಕ್ಕೂ ಎಲ್ ನಿನೊ ಪರಿಣಾಮದ ಸಾಧ್ಯತೆಗಳು ಕಡಿಮೆ ಎಂದು ಹವಾಮಾನ ಇಲಾಖೆ ಮಂಗಳವಾರ ಹೇಳಿದೆ.</p><p>ಜೂನ್ನಿಂದ ಸೆಪ್ಟೆಂಬರ್ವರೆಗಿನ ನಾಲ್ಕು ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ. ದೀರ್ಘಾವಧಿಯ ಸರಾಸರಿ ಮಳೆಯ ಪ್ರಮಾಣ 87 ಸೆಂ.ಮೀ. ಇದ್ದು, ಈ ಬಾರಿ ಶೇ 105ರಷ್ಟು ಹೆಚ್ಛಳವಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಮುಖ್ಯಸ್ಥ ಮೃತ್ಯುಂಜಯ ಮೋಹಪಾತ್ರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.</p><p>ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಬಿಸಿಗಾಳಿ ಬೀಸುತ್ತಿದೆ. ಏಪ್ರಿಲ್ನಿಂದ ಜೂನ್ವರೆಗೆ ಬಿಸಿಗಾಳಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆಗೆ ನೀರಿನ ಕೊರತೆ ಎದುರಾಗಬಹುದು ಎಂದು ಇಲಾಖೆ ಹೇಳಿದೆ.</p><p> ಭಾರತದಲ್ಲಿ ಕೃಷಿ ಚಟುವಟಿಕೆಗೆ ಮುಂಗಾರಿನ ಪಾತ್ರ ಮಹತ್ವದ್ದಾಗಿದೆ. ದೇಶದ ಶೇ 42.3ರಷ್ಟು ಜನರ ಜೀವನಾಧಾರ ಇಂದಿಗೂ ಕೃಷಿಯೇ ಆಗಿದೆ. ಜಿಡಿಪಿಗೆ ಇದರ ಒಟ್ಟು ಕೊಡುಗೆ ಶೇ 18.2ರಷ್ಟಿದೆ.</p>.ಮುಂಗಾರು ಜೀವ ಸಂಕುಲದ ಸಂಭ್ರಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>