<p><strong>ನವದೆಹಲಿ:</strong> ದೇಶವನ್ನು ನಕ್ಸಲ್ ಮುಕ್ತ ಮಾಡುವವರೆಗೂ ಮೋದಿಯವರ ಸರ್ಕಾರ ವಿರಮಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p><p>ನಕ್ಸಲರು ಅಡಗಿದ್ದ ನೆಲೆಗಳನ್ನು ನಾಶಪಡಿಸುವ ಸಲುವಾಗಿ ಛತ್ತೀಸ್ಗಢದ ಕಾರೇಗುಟ್ಟದಲ್ಲಿ 'ಆಪರೇಷನ್ ಬ್ಲಾಕ್ ಫಾರೆಸ್ಟ್' ಅನ್ನು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್, ಛತ್ತೀಸ್ಗಢ ಪೊಲೀಸ್, ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಹಾಗೂ ಕೋಬ್ರಾ ಪಡೆ ಭಾಗಿಯಾಗಿದ್ದರು ಎಂದು ತಿಳಿಸಿದರು.</p><p>'ಆಪರೇಷನ್ ಬ್ಲಾಕ್ ಫಾರೆಸ್ಟ್' ಕಾರ್ಯಾಚರಣೆಯಲ್ಲಿ ಯೋಧರು ತಮ್ಮ ಶೌರ್ಯವನ್ನು ಮೆರೆದಿದ್ದಾರೆ. ಈ ಕಾರ್ಯಾಚರಣೆಯು ನಕ್ಸಲರ ವಿರುದ್ಧ ನಡೆದ ಸುವರ್ಣ ಕ್ಷಣವಾಗಿದೆ ಎಂದು ಅಮಿತ್ ಶಾ ತಿಳಿಸಿದರು. </p><p>ಪರ್ವತ ಪ್ರದೇಶದಲ್ಲಿ ಅಡಗಿದ್ದ ನಕ್ಸಲರ ಶಿಬಿರಗಳನ್ನು ನಾಶ ಮಾಡುವುದು ಅಷ್ಟು ಸುಲಭವಾಗಿರಲಿಲ್ಲ. ಎತ್ತರ ಪ್ರದೇಶವಾದ್ದರಿಂದ ಅತಿಯಾದ ತಾಪಮಾನ ಹಾಗೂ ಐಇಡಿಗಳ ಬೆದರಿಕೆಯ ನಡುವೆಯೂ ನಕ್ಸಲರ ಪ್ರಮುಖ ನೆಲೆಯಾದ ಕಾರೇಗುಟ್ಟವನ್ನು ಭದ್ರತಾ ಪಡೆಗಳು ಯಶಸ್ವಿಯಾಗಿ ನಾಶ ಪಡಿಸಿವೆ ಎಂದು ಹೇಳಿದ್ದಾರೆ. </p><p>ದೇಶದಲ್ಲಿ ಕಡಿಮೆ ಅಭಿವೃದ್ಧಿ ಹೊಂದಿದ ಪ್ರದೇಶಗಳ ಮೇಲೆ ನಕ್ಸಲರು ತೀವ್ರ ಹಾನಿಯನ್ನುಂಟುಮಾಡಿದ್ದಾರೆ. ಪ್ರಮುಖ ಮೂಲಸೌಕಾರ್ಯಗಳಾದ ಶಾಲೆ, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಕಲ್ಯಾಣ ಯೋಜನೆಗಳ ಅಭಿವೃದ್ಧಿಗೆ ಅಡ್ಡಿಪಡಿಸಿದ್ದಾರೆ ಎಂದು ಹೇಳಿದರು. </p><p>2026ರ ಮಾರ್ಚ್ ಒಳಗಾಗಿ ಭಾರತವನ್ನು ನಕ್ಸಲ್ ಮುಕ್ತ ದೇಶವನ್ನಾಗಿ ಮಾಡಲು ನಿರ್ಧಾರಿಸಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶವನ್ನು ನಕ್ಸಲ್ ಮುಕ್ತ ಮಾಡುವವರೆಗೂ ಮೋದಿಯವರ ಸರ್ಕಾರ ವಿರಮಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p><p>ನಕ್ಸಲರು ಅಡಗಿದ್ದ ನೆಲೆಗಳನ್ನು ನಾಶಪಡಿಸುವ ಸಲುವಾಗಿ ಛತ್ತೀಸ್ಗಢದ ಕಾರೇಗುಟ್ಟದಲ್ಲಿ 'ಆಪರೇಷನ್ ಬ್ಲಾಕ್ ಫಾರೆಸ್ಟ್' ಅನ್ನು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್, ಛತ್ತೀಸ್ಗಢ ಪೊಲೀಸ್, ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಹಾಗೂ ಕೋಬ್ರಾ ಪಡೆ ಭಾಗಿಯಾಗಿದ್ದರು ಎಂದು ತಿಳಿಸಿದರು.</p><p>'ಆಪರೇಷನ್ ಬ್ಲಾಕ್ ಫಾರೆಸ್ಟ್' ಕಾರ್ಯಾಚರಣೆಯಲ್ಲಿ ಯೋಧರು ತಮ್ಮ ಶೌರ್ಯವನ್ನು ಮೆರೆದಿದ್ದಾರೆ. ಈ ಕಾರ್ಯಾಚರಣೆಯು ನಕ್ಸಲರ ವಿರುದ್ಧ ನಡೆದ ಸುವರ್ಣ ಕ್ಷಣವಾಗಿದೆ ಎಂದು ಅಮಿತ್ ಶಾ ತಿಳಿಸಿದರು. </p><p>ಪರ್ವತ ಪ್ರದೇಶದಲ್ಲಿ ಅಡಗಿದ್ದ ನಕ್ಸಲರ ಶಿಬಿರಗಳನ್ನು ನಾಶ ಮಾಡುವುದು ಅಷ್ಟು ಸುಲಭವಾಗಿರಲಿಲ್ಲ. ಎತ್ತರ ಪ್ರದೇಶವಾದ್ದರಿಂದ ಅತಿಯಾದ ತಾಪಮಾನ ಹಾಗೂ ಐಇಡಿಗಳ ಬೆದರಿಕೆಯ ನಡುವೆಯೂ ನಕ್ಸಲರ ಪ್ರಮುಖ ನೆಲೆಯಾದ ಕಾರೇಗುಟ್ಟವನ್ನು ಭದ್ರತಾ ಪಡೆಗಳು ಯಶಸ್ವಿಯಾಗಿ ನಾಶ ಪಡಿಸಿವೆ ಎಂದು ಹೇಳಿದ್ದಾರೆ. </p><p>ದೇಶದಲ್ಲಿ ಕಡಿಮೆ ಅಭಿವೃದ್ಧಿ ಹೊಂದಿದ ಪ್ರದೇಶಗಳ ಮೇಲೆ ನಕ್ಸಲರು ತೀವ್ರ ಹಾನಿಯನ್ನುಂಟುಮಾಡಿದ್ದಾರೆ. ಪ್ರಮುಖ ಮೂಲಸೌಕಾರ್ಯಗಳಾದ ಶಾಲೆ, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಕಲ್ಯಾಣ ಯೋಜನೆಗಳ ಅಭಿವೃದ್ಧಿಗೆ ಅಡ್ಡಿಪಡಿಸಿದ್ದಾರೆ ಎಂದು ಹೇಳಿದರು. </p><p>2026ರ ಮಾರ್ಚ್ ಒಳಗಾಗಿ ಭಾರತವನ್ನು ನಕ್ಸಲ್ ಮುಕ್ತ ದೇಶವನ್ನಾಗಿ ಮಾಡಲು ನಿರ್ಧಾರಿಸಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>