<p><strong>ಪಟ್ನಾ</strong>: ಭಾರತದ ಬಿಹಾರ ಹಾಗೂ ನೇಪಾಳದಲ್ಲಿ ಗುಡುಗು–ಸಿಡಿಲು ಸಹಿತ ಭಾರಿ ಮಳೆಯಿಂದಾಗಿ ಒಂದು ವಾರದಲ್ಲಿ ಕನಿಷ್ಠ 69 ಮಂದಿ ಮೃತಪಟ್ಟಿದ್ದಾರೆ ಎಂದು ಬಿಹಾರ ವಿಪತ್ತು ನಿರ್ವಹಣಾ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ಹಠಾತ್ ಪ್ರವಾಹ ಹಾಗೂ ಸಿಡಿಲಿಗೆ ಸಾಕಷ್ಟು ಮಂದಿ ಮೃತಪಡುತ್ತಿದ್ದರೂ, ಜಾಗತಿಕ ತಾಪಮಾನ ಏರಿಕೆಯು ತೀವ್ರ ಹವಾಮಾನ ವೈಪರೀತ್ಯಗಳಿಗೆ ಕಾರಣವಾಗುತ್ತಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.</p><p>ಬಿಹಾರದಲ್ಲಿ ಗುರುವಾರ ಹಾಗೂ ಶುಕ್ರವಾರ ಕನಿಷ್ಠ 61 ಮಂದಿ ಸಾವಿಗೀಡಾಗಿದ್ದಾರೆ. ನೆರೆಯ ನೇಪಾಳದಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಶನಿವಾರವೂ ಬಿಹಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p><p>ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ, ಗುಡುಗು–ಸಿಡಿಲು ಸಹಿತ ಭಾರಿ ಮಳೆ ಏರಿಕೆಗೆ ಹವಾಮಾನ ವೈಪರೀತ್ಯ ಕಾರಣ. ಪ್ರತಿವರ್ಷ ಸರಿಸುಮಾರು 1,900 ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ತಜ್ಞರು ಕಳೆದ ವರ್ಷ ಹೇಳಿದ್ದರು.</p><p>1967–2020ರ ಅವಧಿಯಲ್ಲಿ 1,01,309 ಮಂದಿ ಸಿಡಿಲಿನಿಂದ ಮೃತಪಟ್ಟಿದ್ದಾರೆ. ಈ ಪ್ರಮಾಣವು 2010–2020ರ ಅವಧಿಯಲ್ಲಿ ತೀವ್ರ ಏರಿಕೆಯಾಗಿದೆ ಎಂದು ಒಡಿಶಾದ ಫಕೀರ್ ಮೋಹನ್ ವಿಶ್ವವಿದ್ಯಾಲಯದ ಸಂಶೋಧಕರ ತಂಡ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಭಾರತದ ಬಿಹಾರ ಹಾಗೂ ನೇಪಾಳದಲ್ಲಿ ಗುಡುಗು–ಸಿಡಿಲು ಸಹಿತ ಭಾರಿ ಮಳೆಯಿಂದಾಗಿ ಒಂದು ವಾರದಲ್ಲಿ ಕನಿಷ್ಠ 69 ಮಂದಿ ಮೃತಪಟ್ಟಿದ್ದಾರೆ ಎಂದು ಬಿಹಾರ ವಿಪತ್ತು ನಿರ್ವಹಣಾ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ಹಠಾತ್ ಪ್ರವಾಹ ಹಾಗೂ ಸಿಡಿಲಿಗೆ ಸಾಕಷ್ಟು ಮಂದಿ ಮೃತಪಡುತ್ತಿದ್ದರೂ, ಜಾಗತಿಕ ತಾಪಮಾನ ಏರಿಕೆಯು ತೀವ್ರ ಹವಾಮಾನ ವೈಪರೀತ್ಯಗಳಿಗೆ ಕಾರಣವಾಗುತ್ತಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.</p><p>ಬಿಹಾರದಲ್ಲಿ ಗುರುವಾರ ಹಾಗೂ ಶುಕ್ರವಾರ ಕನಿಷ್ಠ 61 ಮಂದಿ ಸಾವಿಗೀಡಾಗಿದ್ದಾರೆ. ನೆರೆಯ ನೇಪಾಳದಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಶನಿವಾರವೂ ಬಿಹಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p><p>ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ, ಗುಡುಗು–ಸಿಡಿಲು ಸಹಿತ ಭಾರಿ ಮಳೆ ಏರಿಕೆಗೆ ಹವಾಮಾನ ವೈಪರೀತ್ಯ ಕಾರಣ. ಪ್ರತಿವರ್ಷ ಸರಿಸುಮಾರು 1,900 ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ತಜ್ಞರು ಕಳೆದ ವರ್ಷ ಹೇಳಿದ್ದರು.</p><p>1967–2020ರ ಅವಧಿಯಲ್ಲಿ 1,01,309 ಮಂದಿ ಸಿಡಿಲಿನಿಂದ ಮೃತಪಟ್ಟಿದ್ದಾರೆ. ಈ ಪ್ರಮಾಣವು 2010–2020ರ ಅವಧಿಯಲ್ಲಿ ತೀವ್ರ ಏರಿಕೆಯಾಗಿದೆ ಎಂದು ಒಡಿಶಾದ ಫಕೀರ್ ಮೋಹನ್ ವಿಶ್ವವಿದ್ಯಾಲಯದ ಸಂಶೋಧಕರ ತಂಡ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>