ಲಂಡನ್: ‘ಕೆನಡಾದಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರ ಕೈವಾಡದ ಬಗ್ಗೆ ಕೆನಡಾ ಮಾಡಿರುವ ಆರೋಪಗಳ ತನಿಖೆಯನ್ನು ಭಾರತ ತಳ್ಳಿಹಾಕುವುದಿಲ್ಲ. ಆದರೆ, ತನ್ನ ಆರೋಪಗಳನ್ನು ಪುಷ್ಟಿಕರಿಸುವಂತಹ ಸಾಕ್ಷ್ಯಾಧಾರಗಳನ್ನು ಆ ದೇಶವು ಒದಗಿಸಬೇಕು’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಬುಧವಾರ ಹೇಳಿದ್ದಾರೆ.