<p><strong>ನವದೆಹಲಿ:</strong> ದೇಶದ ಪ್ರಾದೇಶಿಕ ಸೇನೆಯಲ್ಲಿ (ಟಿಎ) ನೋಂದಣಿ ಮಾಡಿಕೊಂಡಿರುವ ಪ್ರತಿಯೊಬ್ಬ ಅಧಿಕಾರಿ ಮತ್ತು ವ್ಯಕ್ತಿಯನ್ನು ಸೇನೆಯ ನೆರವಿಗೆ ಬರುವಂತೆ ಅಥವಾ ಅದಕ್ಕೆ ಪೂರಕವಾಗಿ ಸಜ್ಜಾಗೊಳಿಸುವಂತೆ ಕೇಂದ್ರ ಸರ್ಕಾರವು ಸೇನಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ.</p>.<p>ಭಾರತ– ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಸೂಚಿಸಿದೆ. ಈ ನಿಟ್ಟಿನಲ್ಲಿ ರಕ್ಷಣಾ ಸಚಿವಾಲಯದ ಸೇನಾ ವ್ಯವಹಾರಗಳ ಇಲಾಖೆಯು ಮೇ 6ರಂದು ಆದೇಶ ಹೊರಡಿಸಿದೆ.</p>.<p>ಪ್ರಾದೇಶಿಕ ಸೇನೆಯು ಸೇನೆಯೊಂದಿಗೆ ಪೂರ್ಣವಾಗಿ ಸಂಯೋಜಿಸಲ್ಪಟ್ಟಿರುವ ಘಟಕವಾಗಿದೆ. ಯುದ್ಧ ಅಥವಾ ಸಂಘರ್ಷಗಳ ಸಂದರ್ಭದಲ್ಲಿ ಸೇವೆ ಸಲ್ಲಿಸಿ ಮಹತ್ವದ ಕೊಡುಗೆಗಳನ್ನು ನೀಡಿದ ಈ ಘಟಕದ ಹಲವು ವ್ಯಕ್ತಿಗಳು ಶೌರ್ಯ ಮತ್ತು ವಿಶಿಷ್ಟ ಸೇವಾ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.</p>.<p>ಪ್ರಾದೇಶಿಕ ಸೇನೆಯು 1949ರ ಅಕ್ಟೋಬರ್ 9ರಂದು ಸ್ಥಾಪನೆಯಾಗಿದ್ದು, 75 ವರ್ಷಗಳನ್ನು ಪೂರೈಸಿದೆ. ಯುದ್ಧದ ಸಮಯದಲ್ಲಿ ದೇಶಕ್ಕೆ ಸೇವೆ ಸಲ್ಲಿಸುವ ಹಾಗೂ ಮಾನವೀಯತೆ ಮತ್ತು ಪರಿಸರ ಸಂರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಮಹತ್ವದ ಉದ್ದೇಶವನ್ನು ಇದು ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ಪ್ರಾದೇಶಿಕ ಸೇನೆಯಲ್ಲಿ (ಟಿಎ) ನೋಂದಣಿ ಮಾಡಿಕೊಂಡಿರುವ ಪ್ರತಿಯೊಬ್ಬ ಅಧಿಕಾರಿ ಮತ್ತು ವ್ಯಕ್ತಿಯನ್ನು ಸೇನೆಯ ನೆರವಿಗೆ ಬರುವಂತೆ ಅಥವಾ ಅದಕ್ಕೆ ಪೂರಕವಾಗಿ ಸಜ್ಜಾಗೊಳಿಸುವಂತೆ ಕೇಂದ್ರ ಸರ್ಕಾರವು ಸೇನಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ.</p>.<p>ಭಾರತ– ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಸೂಚಿಸಿದೆ. ಈ ನಿಟ್ಟಿನಲ್ಲಿ ರಕ್ಷಣಾ ಸಚಿವಾಲಯದ ಸೇನಾ ವ್ಯವಹಾರಗಳ ಇಲಾಖೆಯು ಮೇ 6ರಂದು ಆದೇಶ ಹೊರಡಿಸಿದೆ.</p>.<p>ಪ್ರಾದೇಶಿಕ ಸೇನೆಯು ಸೇನೆಯೊಂದಿಗೆ ಪೂರ್ಣವಾಗಿ ಸಂಯೋಜಿಸಲ್ಪಟ್ಟಿರುವ ಘಟಕವಾಗಿದೆ. ಯುದ್ಧ ಅಥವಾ ಸಂಘರ್ಷಗಳ ಸಂದರ್ಭದಲ್ಲಿ ಸೇವೆ ಸಲ್ಲಿಸಿ ಮಹತ್ವದ ಕೊಡುಗೆಗಳನ್ನು ನೀಡಿದ ಈ ಘಟಕದ ಹಲವು ವ್ಯಕ್ತಿಗಳು ಶೌರ್ಯ ಮತ್ತು ವಿಶಿಷ್ಟ ಸೇವಾ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.</p>.<p>ಪ್ರಾದೇಶಿಕ ಸೇನೆಯು 1949ರ ಅಕ್ಟೋಬರ್ 9ರಂದು ಸ್ಥಾಪನೆಯಾಗಿದ್ದು, 75 ವರ್ಷಗಳನ್ನು ಪೂರೈಸಿದೆ. ಯುದ್ಧದ ಸಮಯದಲ್ಲಿ ದೇಶಕ್ಕೆ ಸೇವೆ ಸಲ್ಲಿಸುವ ಹಾಗೂ ಮಾನವೀಯತೆ ಮತ್ತು ಪರಿಸರ ಸಂರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಮಹತ್ವದ ಉದ್ದೇಶವನ್ನು ಇದು ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>