<p><strong>ಮುಂಬೈ</strong>: ಭಾನುವಾರ ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಟಿ20 ಪಂದ್ಯದಲ್ಲಿ ₹1.5 ಲಕ್ಷ ಕೋಟಿಯಷ್ಟು ಜೂಜು ನಡೆದಿದೆ ಎಂದು ಶಿವಸೇನಾ(ಯುಬಿಟಿ) ನಾಯಕ, ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಆರೋಪಿಸಿದ್ದಾರೆ.</p><p>ಇದರಲ್ಲಿ ₹25,000 ಕೋಟಿ ಪಾಕಿಸ್ತಾನಕ್ಕೆ ಹೋಗಿದೆ ಎಂದು ಅವರು ಹೇಳಿದ್ದಾರೆ. </p><p>ಪಂದ್ಯದ ಕುರಿತಂತೆ ವರದಿಗಾರರ ಜೊತೆ ಮಾತನಾಡಿದ ರಾವುತ್, ಈ ಪಂದ್ಯದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ₹1,000 ಕೋಟಿ ಆದಾಯ ಬಂದಿದೆ. ಮತ್ತೆ ಅದೆಲ್ಲವನ್ನೂ ಅವರು ನಮ್ಮ ದೇಶದ ವಿರುದ್ಧವೇ ಬಳಸುತ್ತಾರೆ ಎಂದಿದ್ದಾರೆ. </p><p>'ನಿನ್ನೆಯ ಪಂದ್ಯದಲ್ಲಿ ₹1.5 ಲಕ್ಷ ಕೋಟಿಯಷ್ಟು ಜೂಜಾಟ ನಡೆದಿದ್ದು, ಅದರಲ್ಲಿ ₹25,000 ಕೋಟಿ ಪಾಕಿಸ್ತಾನಕ್ಕೆ ಹೋಗಿದೆ. ಈ ಹಣವನ್ನು ಅವರು ನಮ್ಮ ವಿರುದ್ಧವೇ ಬಳಸುತ್ತಾರೆ. ಸರ್ಕಾರ ಅಥವಾ ಬಿಸಿಸಿಐಗೆ ಅದು ತಿಳಿದಿಲ್ಲವೇ?’ಎಂದು ರಾವುತ್ ಪ್ರಶ್ನಿಸಿದ್ದಾರೆ.</p><p>ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನದ ಆಟಗಾರರ ಜೊತೆ ಸಾಂಪ್ರದಾಯಿಕ ಹಸ್ತಲಾಘವವನ್ನು ಭಾರತದ ಆಟಗಾರರು ನಿರಾಕರಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಪ್ರಹಸನವಷ್ಟೇ. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಇದ್ದರೂ ಪಂದ್ಯವನ್ನು ಏಕೆ ನಡೆಸಲಾಯಿತು? ಎಂದು ಪ್ರಶ್ನಿಸಿದ್ದಾರೆ.</p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ ಬಳಿಕ ಭಾರತವು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ಪಾಕ್ನ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು.</p> .ಕೆಲವೊಂದು ವಿಷಯಗಳು ಕ್ರೀಡಾ ಸ್ಫೂರ್ತಿಗಿಂತಲೂ ಮಿಗಿಲಾದದ್ದು: ಸೂರ್ಯ ದಿಟ್ಟ ನುಡಿ.ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಸಂತ್ರಸ್ತರ ಪರ ನಿಲ್ಲುತ್ತೇವೆ: ಕೋಚ್ ಗಂಭೀರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭಾನುವಾರ ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಟಿ20 ಪಂದ್ಯದಲ್ಲಿ ₹1.5 ಲಕ್ಷ ಕೋಟಿಯಷ್ಟು ಜೂಜು ನಡೆದಿದೆ ಎಂದು ಶಿವಸೇನಾ(ಯುಬಿಟಿ) ನಾಯಕ, ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಆರೋಪಿಸಿದ್ದಾರೆ.</p><p>ಇದರಲ್ಲಿ ₹25,000 ಕೋಟಿ ಪಾಕಿಸ್ತಾನಕ್ಕೆ ಹೋಗಿದೆ ಎಂದು ಅವರು ಹೇಳಿದ್ದಾರೆ. </p><p>ಪಂದ್ಯದ ಕುರಿತಂತೆ ವರದಿಗಾರರ ಜೊತೆ ಮಾತನಾಡಿದ ರಾವುತ್, ಈ ಪಂದ್ಯದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ₹1,000 ಕೋಟಿ ಆದಾಯ ಬಂದಿದೆ. ಮತ್ತೆ ಅದೆಲ್ಲವನ್ನೂ ಅವರು ನಮ್ಮ ದೇಶದ ವಿರುದ್ಧವೇ ಬಳಸುತ್ತಾರೆ ಎಂದಿದ್ದಾರೆ. </p><p>'ನಿನ್ನೆಯ ಪಂದ್ಯದಲ್ಲಿ ₹1.5 ಲಕ್ಷ ಕೋಟಿಯಷ್ಟು ಜೂಜಾಟ ನಡೆದಿದ್ದು, ಅದರಲ್ಲಿ ₹25,000 ಕೋಟಿ ಪಾಕಿಸ್ತಾನಕ್ಕೆ ಹೋಗಿದೆ. ಈ ಹಣವನ್ನು ಅವರು ನಮ್ಮ ವಿರುದ್ಧವೇ ಬಳಸುತ್ತಾರೆ. ಸರ್ಕಾರ ಅಥವಾ ಬಿಸಿಸಿಐಗೆ ಅದು ತಿಳಿದಿಲ್ಲವೇ?’ಎಂದು ರಾವುತ್ ಪ್ರಶ್ನಿಸಿದ್ದಾರೆ.</p><p>ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನದ ಆಟಗಾರರ ಜೊತೆ ಸಾಂಪ್ರದಾಯಿಕ ಹಸ್ತಲಾಘವವನ್ನು ಭಾರತದ ಆಟಗಾರರು ನಿರಾಕರಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಪ್ರಹಸನವಷ್ಟೇ. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಇದ್ದರೂ ಪಂದ್ಯವನ್ನು ಏಕೆ ನಡೆಸಲಾಯಿತು? ಎಂದು ಪ್ರಶ್ನಿಸಿದ್ದಾರೆ.</p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ ಬಳಿಕ ಭಾರತವು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ಪಾಕ್ನ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು.</p> .ಕೆಲವೊಂದು ವಿಷಯಗಳು ಕ್ರೀಡಾ ಸ್ಫೂರ್ತಿಗಿಂತಲೂ ಮಿಗಿಲಾದದ್ದು: ಸೂರ್ಯ ದಿಟ್ಟ ನುಡಿ.ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಸಂತ್ರಸ್ತರ ಪರ ನಿಲ್ಲುತ್ತೇವೆ: ಕೋಚ್ ಗಂಭೀರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>