<p><strong>ನವದೆಹಲಿ:</strong> ದೇಶದಲ್ಲಿ ಅತಿ ಹೆಚ್ಚು ಗೋಧಿ ಬೆಳೆಯುವ ಗಡಿ ರಾಜ್ಯಗಳಾದ ಪಂಜಾಬ್ ಮತ್ತು ರಾಜಸ್ಥಾನದಲ್ಲಿ ರೈತರು, ಭಾರತ– ಪಾಕಿಸ್ತಾನ ಮಧ್ಯೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಬೆಳೆಯ ಕೊಯ್ಲನ್ನು ಪೂರ್ಣಗೊಳಿಸಿದ್ದಾರೆ ಎಂದು ಸರ್ಕಾರದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಕಾಶ್ಮಿರದಲ್ಲಿ ಒಟ್ಟು 3,310 ಕಿ.ಮೀ ಗಡಿ ವ್ಯಾಪಿಸಿದೆ.</p><p>ಗಡಿ ಪ್ರದೇಶದಲ್ಲಿನ ಗೋಧಿ ಬೆಳೆಯ ಬಗ್ಗೆ ಪ್ರತ್ಯೇಕ ದತ್ತಾಂಶವಿಲ್ಲ, ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಪಂಜಾಬ್ನಲ್ಲಿ ಅತಿ ಹೆಚ್ಚು ಗೋಧಿಯನ್ನು ಬೆಳೆಯಲಾಗುತ್ತದೆ. ಈ ಬಾರಿ ಇಳುವರಿ ಉತ್ತಮವಾಗಿದೆ ಎಂದು ಕೃಷಿ ಆಯುಕ್ತ ಪ್ರವೀಣ ಕುಮಾರ್ ಸಿಂಗ್ ತಿಳಿಸಿದ್ದಾರೆ.</p><p>ಏ.22ರಂದು ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನ ಗಡಿ ರಾಜ್ಯಗಳಲ್ಲಿನ ರೈತರಿಗೆ ಬೆಳೆ ಕೊಯ್ಲಿಗೆ ಸೂಚಿಸಲಾಗಿತ್ತು. ಉಭಯ ದೇಶಗಳ ಸಂಬಂಧ ಹಾಳಾಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಗಡಿಯಲ್ಲಿ ಮುಂಚಿತವಾಗಿ ಬೆಳೆಕೊಯ್ಲಿಗೆ ಅಧಿಕಾರಿಗಳು ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಸಾಮಾನ್ಯವಾಗಿ ಪಂಜಾಬ್, ರಾಜಸ್ಥಾನಗಳಲ್ಲಿ ಏಪ್ರಿಲ್ನಲ್ಲಿ ಗೋಧಿ ಕೊಯ್ಲು ಆರಂಭವಾಗಿ ಮೇ ಅಂತ್ಯದವರೆಗೂ ಮುಂದುವರಿಯುತ್ತಿತ್ತು. ಆದರೆ ಈ ಬಾರಿ ಮೇ ಆರಂಭದಲ್ಲೇ ಕೊಯ್ಲು ಪೂರ್ಣಗೊಂಡಿದೆ.</p>.ಶೇ 38ರಷ್ಟು ಗೋಧಿ ಕೊಯ್ಲು.ಬರಿದಾಗುತ್ತಿವೆ ದೇಶದ ಜಲಾಶಯಗಳು: 150 ಜಲಾಶಯಗಳಲ್ಲಿ ಶೇ 38ರಷ್ಟು ನೀರು ಲಭ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಅತಿ ಹೆಚ್ಚು ಗೋಧಿ ಬೆಳೆಯುವ ಗಡಿ ರಾಜ್ಯಗಳಾದ ಪಂಜಾಬ್ ಮತ್ತು ರಾಜಸ್ಥಾನದಲ್ಲಿ ರೈತರು, ಭಾರತ– ಪಾಕಿಸ್ತಾನ ಮಧ್ಯೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಬೆಳೆಯ ಕೊಯ್ಲನ್ನು ಪೂರ್ಣಗೊಳಿಸಿದ್ದಾರೆ ಎಂದು ಸರ್ಕಾರದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಕಾಶ್ಮಿರದಲ್ಲಿ ಒಟ್ಟು 3,310 ಕಿ.ಮೀ ಗಡಿ ವ್ಯಾಪಿಸಿದೆ.</p><p>ಗಡಿ ಪ್ರದೇಶದಲ್ಲಿನ ಗೋಧಿ ಬೆಳೆಯ ಬಗ್ಗೆ ಪ್ರತ್ಯೇಕ ದತ್ತಾಂಶವಿಲ್ಲ, ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಪಂಜಾಬ್ನಲ್ಲಿ ಅತಿ ಹೆಚ್ಚು ಗೋಧಿಯನ್ನು ಬೆಳೆಯಲಾಗುತ್ತದೆ. ಈ ಬಾರಿ ಇಳುವರಿ ಉತ್ತಮವಾಗಿದೆ ಎಂದು ಕೃಷಿ ಆಯುಕ್ತ ಪ್ರವೀಣ ಕುಮಾರ್ ಸಿಂಗ್ ತಿಳಿಸಿದ್ದಾರೆ.</p><p>ಏ.22ರಂದು ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನ ಗಡಿ ರಾಜ್ಯಗಳಲ್ಲಿನ ರೈತರಿಗೆ ಬೆಳೆ ಕೊಯ್ಲಿಗೆ ಸೂಚಿಸಲಾಗಿತ್ತು. ಉಭಯ ದೇಶಗಳ ಸಂಬಂಧ ಹಾಳಾಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಗಡಿಯಲ್ಲಿ ಮುಂಚಿತವಾಗಿ ಬೆಳೆಕೊಯ್ಲಿಗೆ ಅಧಿಕಾರಿಗಳು ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಸಾಮಾನ್ಯವಾಗಿ ಪಂಜಾಬ್, ರಾಜಸ್ಥಾನಗಳಲ್ಲಿ ಏಪ್ರಿಲ್ನಲ್ಲಿ ಗೋಧಿ ಕೊಯ್ಲು ಆರಂಭವಾಗಿ ಮೇ ಅಂತ್ಯದವರೆಗೂ ಮುಂದುವರಿಯುತ್ತಿತ್ತು. ಆದರೆ ಈ ಬಾರಿ ಮೇ ಆರಂಭದಲ್ಲೇ ಕೊಯ್ಲು ಪೂರ್ಣಗೊಂಡಿದೆ.</p>.ಶೇ 38ರಷ್ಟು ಗೋಧಿ ಕೊಯ್ಲು.ಬರಿದಾಗುತ್ತಿವೆ ದೇಶದ ಜಲಾಶಯಗಳು: 150 ಜಲಾಶಯಗಳಲ್ಲಿ ಶೇ 38ರಷ್ಟು ನೀರು ಲಭ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>