<p><strong>ನವದೆಹಲಿ:</strong> ಪಾಕಿಸ್ತಾನದೊಂದಿಗೆ ಸೇನಾ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ ಭಾರತದ ಭದ್ರತಾ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಿಬ್ಬಂದಿಯೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.</p>.India Pakistan Tension: ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ. <p>ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ಮೂರೂ ಪಡೆಗಳು ಮುಖ್ಯಸ್ಥರ, ಸೇನಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ.</p><p>ಭಾರತದ ನೆಲೆಗಳ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ, ಭದ್ರತಾ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ತಿರುಗೇಟು ನೀಡುತ್ತಿವೆ. ಉಭಯ ರಾಷ್ಟ್ರಗಳ ನಡುವೆ ತ್ವೇಷಮಯ ವಾತಾವರಣ ಇದೆ.</p>.India Pak Tensions: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ.<p>ಭಾರತದ ಮುಂಚೂಣಿ ನೆಲೆಗಳತ್ತ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ ಎಂದು ಭಾರತ ಗುರುವಾರ ಹೇಳಿದೆ. ಉಭಯ ರಾಷ್ಟ್ರಗಳು ಸೇನಾ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.</p><p>‘ಗಡಿ ಪ್ರದೇಶಗಳಿಗೆ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ’ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸೋಫಿಯಾ ಖುರೇಷಿ ತಿಳಿಸಿದ್ದರು.</p>.India Pakistan Tensions: ಪಿಎಸ್ಎಲ್ ಆತಿಥ್ಯಕ್ಕೆ ದುಬೈ ನಕಾರ ಸಾಧ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕಿಸ್ತಾನದೊಂದಿಗೆ ಸೇನಾ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ ಭಾರತದ ಭದ್ರತಾ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಿಬ್ಬಂದಿಯೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.</p>.India Pakistan Tension: ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ. <p>ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ಮೂರೂ ಪಡೆಗಳು ಮುಖ್ಯಸ್ಥರ, ಸೇನಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ.</p><p>ಭಾರತದ ನೆಲೆಗಳ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ, ಭದ್ರತಾ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ತಿರುಗೇಟು ನೀಡುತ್ತಿವೆ. ಉಭಯ ರಾಷ್ಟ್ರಗಳ ನಡುವೆ ತ್ವೇಷಮಯ ವಾತಾವರಣ ಇದೆ.</p>.India Pak Tensions: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ.<p>ಭಾರತದ ಮುಂಚೂಣಿ ನೆಲೆಗಳತ್ತ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ ಎಂದು ಭಾರತ ಗುರುವಾರ ಹೇಳಿದೆ. ಉಭಯ ರಾಷ್ಟ್ರಗಳು ಸೇನಾ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.</p><p>‘ಗಡಿ ಪ್ರದೇಶಗಳಿಗೆ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ’ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸೋಫಿಯಾ ಖುರೇಷಿ ತಿಳಿಸಿದ್ದರು.</p>.India Pakistan Tensions: ಪಿಎಸ್ಎಲ್ ಆತಿಥ್ಯಕ್ಕೆ ದುಬೈ ನಕಾರ ಸಾಧ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>