<p><strong>ಇಸ್ಲಾಮಾಬಾದ್</strong>: ‘ಭಾರತ– ಪಾಕಿಸ್ತಾನ ಸಂಘರ್ಷವನ್ನು ಶಮನ ಮಾಡಿದ್ದಕ್ಕಾಗಿ ಧನ್ಯವಾದಗಳು’ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮತ್ತೊಮ್ಮೆ ಹೇಳಿದ್ದಾರೆ. </p>.<p>ನಾಲ್ಕು ದಿನಗಳ ಕಾಲ ನಿರಂತರವಾಗಿ ನಡೆದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ಬಳಿಕ ಭಾರತ– ಪಾಕಿಸ್ತಾನ ಸಂಘರ್ಷ ಕೊನೆಗಳಿಸಿ ಮೇ 10ರಂದು ಒಪ್ಪಂದ ಮಾಡಿಕೊಂಡವು. ಇದರಲ್ಲಿ ಮೂರನೆಯ ಯಾವ ವ್ಯಕ್ತಿಯೂ ಭಾಗಿಯಾಗಿಲ್ಲ ಎಂದು ಭಾರತ ಪದೇ ಪದೇ ಹೇಳುತ್ತಿದೆ. ಆದರೂ ಈ ಸಂಘರ್ಷವನ್ನು ಕೊನೆಗೊಳಿಸಿದ್ದು ತಾವೇ ಎಂದು ಡೊನಾಲ್ಡ್ ಟ್ರಂಪ್ ಹಲವು ಬಾರಿ ಹೇಳಿದ್ದಾರೆ. </p>.<p>ಬಾಕುದಲ್ಲಿ ಅಜರ್ಬೈಜಾನ್ನ ವಿಜಯ ದಿನದ ಪರೇಡ್ನಲ್ಲಿ ಶನಿವಾರ ಶರೀಫ್ ಮಾತನಾಡಿದರು. </p>.<p class="title">‘ಟ್ರಂಪ್ ಅವರ ದಿಟ್ಟ ಮತ್ತು ನಿರ್ಣಾಯಕ ನಾಯಕತ್ವದಿಂದ ಭಾರತ–ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಯಿತು. ಇದು ದೊಡ್ಡ ಯುದ್ಧವೊಂದನ್ನು ತಪ್ಪಿಸಿ, ಲಕ್ಷಾಂತರ ಜನರ ಜೀವ ಉಳಿಸಿತು. ದಕ್ಷಿಣ ಏಷ್ಯಾದಲ್ಲಿ ಶಾಂತಿಯನ್ನು ಪುನರ್ಸ್ಥಾಪಿಸಿತು’ ಎಂದು ಹೇಳಿದರು. </p>.<p>ಏ.22ರಂದು ಪಹಲ್ಗಾಮ್ನಲ್ಲಿ ದಾಳಿ ಮಾಡಿದ ಉಗ್ರರು 22 ಮಂದಿ ಭಾರತೀಯರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಸಿಂಧೂರ’ ಕಾರ್ಯಾಚರಣೆ ನಡೆಸಿ, ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ‘ಭಾರತ– ಪಾಕಿಸ್ತಾನ ಸಂಘರ್ಷವನ್ನು ಶಮನ ಮಾಡಿದ್ದಕ್ಕಾಗಿ ಧನ್ಯವಾದಗಳು’ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮತ್ತೊಮ್ಮೆ ಹೇಳಿದ್ದಾರೆ. </p>.<p>ನಾಲ್ಕು ದಿನಗಳ ಕಾಲ ನಿರಂತರವಾಗಿ ನಡೆದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ಬಳಿಕ ಭಾರತ– ಪಾಕಿಸ್ತಾನ ಸಂಘರ್ಷ ಕೊನೆಗಳಿಸಿ ಮೇ 10ರಂದು ಒಪ್ಪಂದ ಮಾಡಿಕೊಂಡವು. ಇದರಲ್ಲಿ ಮೂರನೆಯ ಯಾವ ವ್ಯಕ್ತಿಯೂ ಭಾಗಿಯಾಗಿಲ್ಲ ಎಂದು ಭಾರತ ಪದೇ ಪದೇ ಹೇಳುತ್ತಿದೆ. ಆದರೂ ಈ ಸಂಘರ್ಷವನ್ನು ಕೊನೆಗೊಳಿಸಿದ್ದು ತಾವೇ ಎಂದು ಡೊನಾಲ್ಡ್ ಟ್ರಂಪ್ ಹಲವು ಬಾರಿ ಹೇಳಿದ್ದಾರೆ. </p>.<p>ಬಾಕುದಲ್ಲಿ ಅಜರ್ಬೈಜಾನ್ನ ವಿಜಯ ದಿನದ ಪರೇಡ್ನಲ್ಲಿ ಶನಿವಾರ ಶರೀಫ್ ಮಾತನಾಡಿದರು. </p>.<p class="title">‘ಟ್ರಂಪ್ ಅವರ ದಿಟ್ಟ ಮತ್ತು ನಿರ್ಣಾಯಕ ನಾಯಕತ್ವದಿಂದ ಭಾರತ–ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಯಿತು. ಇದು ದೊಡ್ಡ ಯುದ್ಧವೊಂದನ್ನು ತಪ್ಪಿಸಿ, ಲಕ್ಷಾಂತರ ಜನರ ಜೀವ ಉಳಿಸಿತು. ದಕ್ಷಿಣ ಏಷ್ಯಾದಲ್ಲಿ ಶಾಂತಿಯನ್ನು ಪುನರ್ಸ್ಥಾಪಿಸಿತು’ ಎಂದು ಹೇಳಿದರು. </p>.<p>ಏ.22ರಂದು ಪಹಲ್ಗಾಮ್ನಲ್ಲಿ ದಾಳಿ ಮಾಡಿದ ಉಗ್ರರು 22 ಮಂದಿ ಭಾರತೀಯರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಸಿಂಧೂರ’ ಕಾರ್ಯಾಚರಣೆ ನಡೆಸಿ, ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>