<p><strong>ಮುಂಬೈ:</strong> ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ನಿಗದಿತ ಪಂದ್ಯಕ್ಕೆ ಶಿವ ಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ವಿರೋಧ ವ್ಯಕ್ತಪಡಿಸಿದ್ದಾರೆ.</p><p>ಈ ಸಂಬಂಧ ಕೇಂದ್ರ ಕೀಡಾ ಸಚಿವ ಮನಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿದ್ದು, ಬಿಸಿಸಿಐ ರಾಷ್ಟ್ರೀಯ ಹಿತಾಸಕ್ತಿಗಿಂತಲೂ ಮಿಗಿಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. </p><p>'ಬೇಸರದ ಸಂಗತಿಯೆಂದರೆ ಏಷ್ಯಾ ಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಆಡಲು ಭಾರತ ತಂಡವನ್ನು ಬಿಸಿಸಿಐ ಕಳುಹಿಸುತ್ತದೆ. ಬಿಸಿಸಿಐ ರಾಷ್ಟ್ರೀಯ ಹಿತಾಸಕ್ತಿಗಿಂತಲೂ ಮಿಗಿಲಾಗಿದೆಯೇ? ನಮ್ಮ ಯೋಧರ ತ್ಯಾಗಕ್ಕಿಂತಲೂ ಮಿಗಿಲಾಗಿದೆಯೇ ? ಸಿಂಧೂರಕ್ಕಿಂತಲೂ ಮಿಗಿಲಾಗಿದೆಯೇ' ಎಂದು ಪ್ರಶ್ನಿಸಿದ್ದಾರೆ. </p><p>'ಪಹಲ್ಗಾಮ್ ದಾಳಿಯ ಹಿಂದೆ ಪಾಕಿಸ್ತಾನದ ಪಾತ್ರದ ಬಗ್ಗೆ ವಿವರಿಸಲು ನಾವು ಇಡೀ ಜಗತ್ತಿಗೆ ನಿಯೋಗಗಳನ್ನು ಕಳುಹಿಸಿದ್ದೇವೆ. ಈಗ ಪಾಕ್ ಜೊತೆ ಕ್ರಿಕೆಟ್ ಆಡುತ್ತಿರುವುದನ್ನು ಸಮರ್ಥಿಸಿಕೊಳ್ಳಲು ಮತ್ತೆ ನಿಯೋಗಗಳನ್ನು ಕಳುಹಿಸಲಾಗುತ್ತದೆಯೇ' ಎಂದು ಕೇಳಿದ್ದಾರೆ. </p><p>'ಭದ್ರತಾ ಕಾರಣಗಳನ್ನು ನೀಡಿ ಭಾರತದಲ್ಲಿ ಹಾಕಿ ಆಡುವುದರಿಂದ ಪಾಕಿಸ್ತಾನ ಹಿಂದೆ ಸರಿದಾಗ ಬಿಸಿಸಿಐ ತನ್ನ ಸ್ವಾರ್ಥ ಹಿತಾಸಕ್ತಿಗಾಗಿ ಪಾಕಿಸ್ತಾನ ವಿರುದ್ಧ ಆಡುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ' ಎಂದು ಅವರು ಆರೋಪಿಸಿದ್ದಾರೆ. </p><p>ಮಾನವೀಯ ಹಿತದೃಷ್ಟಿಯಿಂದ ಅನೇಕ ರಾಷ್ಟ್ರಗಳನ್ನು ಕ್ರೀಡೆಯಿಂದ ದೂರವಿರಿಸಲಾಗಿದೆ. ಭಯೋತ್ಪಾದನೆಯು ಶಾಂತಿಯುತ ಪ್ರಗತಿಗೆ ತಡೆಯೊಡ್ಡುತ್ತಿದೆ. ಕಳೆದ ದಶಕದಲ್ಲಿ ಪಾಕಿಸ್ತಾನ ಪ್ರಾಯೋಜಿತ ದಾಳಿಗಳು ದೇಶದ ನಾಗರಿಕರ ಮೇಲೆ ನಡೆಯುತ್ತಲೇ ಎಂದು ಹೇಳಿದ್ದಾರೆ. </p><p>ಕೆಂಪು ಕೋಟೆಯ ಭಾಷಣದಲ್ಲಿ ನೀರು ಹಾಗೂ ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಜಾಹೀರಾತು ಮೂಲಕ ಹಣ ಗಳಿಸುವ ಬಿಸಿಸಿಐ ಇರಾದೆಯಿಂದಾಗಿ ಆಪರೇಷನ್ ಸಿಂಧೂರ ಹಾಗೂ ಯೋಧರ ತ್ಯಾಗ ಅಪ್ರಧಾನವೆನಿಸಿದೆ ಎಂದಿದ್ದಾರೆ. </p><p>ಯುಎಇನಲ್ಲಿ ಆಯೋಜನೆಯಾಗಲಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ಸೆಪ್ಟೆಂಬರ್ 14ರಂದು ದುಬೈಯಲ್ಲಿ ನಿಗದಿಯಾಗಿದೆ. </p>.Asia Cup: ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ವಿಫಲರಾದ ಪ್ರಮುಖ ಆಟಗಾರರಿವರು.Asia Cup 2025 | ಭಾರತ ತಂಡ ಪ್ರಕಟ: ಸೂರ್ಯಕುಮಾರ್ ನಾಯಕ, ಗಿಲ್ ಉಪನಾಯಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ನಿಗದಿತ ಪಂದ್ಯಕ್ಕೆ ಶಿವ ಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ವಿರೋಧ ವ್ಯಕ್ತಪಡಿಸಿದ್ದಾರೆ.</p><p>ಈ ಸಂಬಂಧ ಕೇಂದ್ರ ಕೀಡಾ ಸಚಿವ ಮನಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿದ್ದು, ಬಿಸಿಸಿಐ ರಾಷ್ಟ್ರೀಯ ಹಿತಾಸಕ್ತಿಗಿಂತಲೂ ಮಿಗಿಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. </p><p>'ಬೇಸರದ ಸಂಗತಿಯೆಂದರೆ ಏಷ್ಯಾ ಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಆಡಲು ಭಾರತ ತಂಡವನ್ನು ಬಿಸಿಸಿಐ ಕಳುಹಿಸುತ್ತದೆ. ಬಿಸಿಸಿಐ ರಾಷ್ಟ್ರೀಯ ಹಿತಾಸಕ್ತಿಗಿಂತಲೂ ಮಿಗಿಲಾಗಿದೆಯೇ? ನಮ್ಮ ಯೋಧರ ತ್ಯಾಗಕ್ಕಿಂತಲೂ ಮಿಗಿಲಾಗಿದೆಯೇ ? ಸಿಂಧೂರಕ್ಕಿಂತಲೂ ಮಿಗಿಲಾಗಿದೆಯೇ' ಎಂದು ಪ್ರಶ್ನಿಸಿದ್ದಾರೆ. </p><p>'ಪಹಲ್ಗಾಮ್ ದಾಳಿಯ ಹಿಂದೆ ಪಾಕಿಸ್ತಾನದ ಪಾತ್ರದ ಬಗ್ಗೆ ವಿವರಿಸಲು ನಾವು ಇಡೀ ಜಗತ್ತಿಗೆ ನಿಯೋಗಗಳನ್ನು ಕಳುಹಿಸಿದ್ದೇವೆ. ಈಗ ಪಾಕ್ ಜೊತೆ ಕ್ರಿಕೆಟ್ ಆಡುತ್ತಿರುವುದನ್ನು ಸಮರ್ಥಿಸಿಕೊಳ್ಳಲು ಮತ್ತೆ ನಿಯೋಗಗಳನ್ನು ಕಳುಹಿಸಲಾಗುತ್ತದೆಯೇ' ಎಂದು ಕೇಳಿದ್ದಾರೆ. </p><p>'ಭದ್ರತಾ ಕಾರಣಗಳನ್ನು ನೀಡಿ ಭಾರತದಲ್ಲಿ ಹಾಕಿ ಆಡುವುದರಿಂದ ಪಾಕಿಸ್ತಾನ ಹಿಂದೆ ಸರಿದಾಗ ಬಿಸಿಸಿಐ ತನ್ನ ಸ್ವಾರ್ಥ ಹಿತಾಸಕ್ತಿಗಾಗಿ ಪಾಕಿಸ್ತಾನ ವಿರುದ್ಧ ಆಡುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ' ಎಂದು ಅವರು ಆರೋಪಿಸಿದ್ದಾರೆ. </p><p>ಮಾನವೀಯ ಹಿತದೃಷ್ಟಿಯಿಂದ ಅನೇಕ ರಾಷ್ಟ್ರಗಳನ್ನು ಕ್ರೀಡೆಯಿಂದ ದೂರವಿರಿಸಲಾಗಿದೆ. ಭಯೋತ್ಪಾದನೆಯು ಶಾಂತಿಯುತ ಪ್ರಗತಿಗೆ ತಡೆಯೊಡ್ಡುತ್ತಿದೆ. ಕಳೆದ ದಶಕದಲ್ಲಿ ಪಾಕಿಸ್ತಾನ ಪ್ರಾಯೋಜಿತ ದಾಳಿಗಳು ದೇಶದ ನಾಗರಿಕರ ಮೇಲೆ ನಡೆಯುತ್ತಲೇ ಎಂದು ಹೇಳಿದ್ದಾರೆ. </p><p>ಕೆಂಪು ಕೋಟೆಯ ಭಾಷಣದಲ್ಲಿ ನೀರು ಹಾಗೂ ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಜಾಹೀರಾತು ಮೂಲಕ ಹಣ ಗಳಿಸುವ ಬಿಸಿಸಿಐ ಇರಾದೆಯಿಂದಾಗಿ ಆಪರೇಷನ್ ಸಿಂಧೂರ ಹಾಗೂ ಯೋಧರ ತ್ಯಾಗ ಅಪ್ರಧಾನವೆನಿಸಿದೆ ಎಂದಿದ್ದಾರೆ. </p><p>ಯುಎಇನಲ್ಲಿ ಆಯೋಜನೆಯಾಗಲಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ಸೆಪ್ಟೆಂಬರ್ 14ರಂದು ದುಬೈಯಲ್ಲಿ ನಿಗದಿಯಾಗಿದೆ. </p>.Asia Cup: ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ವಿಫಲರಾದ ಪ್ರಮುಖ ಆಟಗಾರರಿವರು.Asia Cup 2025 | ಭಾರತ ತಂಡ ಪ್ರಕಟ: ಸೂರ್ಯಕುಮಾರ್ ನಾಯಕ, ಗಿಲ್ ಉಪನಾಯಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>