<p><strong>ಮುಂಬೈ</strong>: ದೇಶದ ಗಡಿಗಳಲ್ಲಿ ಭಾರತೀಯ ಸೈನಿಕರು ತಮ್ಮ ಪ್ರಾಣ ತ್ಯಾಗ ಮಾಡುತ್ತಿರುವ ವೇಳೆ, ಪಾಕಿಸ್ತಾನದೊಂದಿಗೆ ಭಾರತ ಕ್ರಿಕೆಟ್ ಪಂದ್ಯ ಆಡುವುದು ರಾಷ್ಟ್ರೀಯ ಭಾವನೆಗಳಿಗೆ ಮಾಡಿದ ಅಪಮಾನವಾಗಿದೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.</p><p>ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಭಾನುವಾರ (ಸೆ.14) ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಬಳಿಕ ಇದೇ ಮೊದಲ ಬಾರಿ ಸಾಂಪ್ರದಾಯಿಕ ಎದುರಾಳಿಗಳು ಮೈದಾನದಲ್ಲಿ ಸೆಣಸಲಿವೆ.</p>.ಮತ ಬ್ಯಾಂಕ್ ರಾಜಕೀಯದಿಂದ ನರಳಿದ್ದ ಈಶಾನ್ಯ ಈಗ ದೇಶದ ಬೆಳವಣಿಗೆಯ ಎಂಜಿನ್: PM ಮೋದಿ.ಗುರು ಗ್ರಹ ಕಾರಕತ್ವ: ಧನಸ್ಸು, ಮೀನ ರಾಶಿಯ ಅಧಿಪತಿ ಗುಣಗಳ ಬಗ್ಗೆ ತಿಳಿದುಕೊಳ್ಳಿ.<p>ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ಭಾನುವಾರ ನಿಗದಿಯಾಗಿರುವ ಉಭಯ ದೇಶಗಳ ನಡುವಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯವನ್ನು ಬಹಿಷ್ಕರಿಸಬೇಕು. ಈ ಮೂಲಕ ಭಯೋತ್ಪಾದನೆಯ ಬಗ್ಗೆ ಭಾರತ ಹೊಂದಿರುವ ನಿಲುವನ್ನು ಜಗತ್ತಿಗೆ ತಿಳಿಸಲು ಅವಕಾಶವಿದೆ ಎಂದು ಹೇಳಿದ್ದಾರೆ.</p><p>ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ಠಾಕ್ರೆ, ಕ್ರಿಕೆಟ್ ಪಂದ್ಯವು ದೇಶಭಕ್ತಿ ಬಗೆಗಿನ ತಮಾಷೆಯಾಗಿದೆ ಎಂದು ಕಿಡಿಕಾರಿದ್ದಾರೆ </p>.ಮಣಿಪುರದಲ್ಲಿ ಮೋದಿ.. ರಾಜ್ಯಪಾಲರಿಂದ ಸ್ವಾಗತ.ಸುರತ್ಕಲ್ | ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಗೆ ಗಲ್ಲು.<p>ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸುಧಾರಿಸಿದ ನಂತರ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪಂದ್ಯವಾಡಲಿ ಎಂದು ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.</p><p>‘ಆಪರೇಷನ್ ಸಿಂಧೂರ ನಂತರ ಪಾಕಿಸ್ತಾನದೊಂದಿಗೆ ಯಾವುದೇ ವ್ಯಾಪಾರ ಹಾಗೂ ಕ್ರಿಕೆಟ್ ಇರಬಾರದು ಎಂಬುದು ಭಾರತೀಯರ ಅಭಿಪ್ರಾಯವಾಗಿದೆ. ನಾವು ವಿಶ್ವ ಚಾಂಪಿಯನ್ಶಿಪ್ ಲೆಜೆಂಡ್ಸ್ ಟೂರ್ನಿಯಲ್ಲೂ ಕೂಡ ಪಾಕ್ನೊಂದಿಗೆ ಪಂದ್ಯ ಆಡಿರಲಿಲ್ಲ’ ಸಿಂಗ್ ಹೇಳಿದ್ದರು.</p>.ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ: ವಾಹನಗಳು, ಕೃಷಿ ಭೂಮಿಗೆ ಅಪಾರ ಹಾನಿ.PHOTOS | ಪತ್ನಿ, ಮಕ್ಕಳೊಂದಿಗೆ ರಿಯಲ್ ಸ್ಟಾರ್ ಉಪೇಂದ್ರ ಮೋಜುಮಸ್ತಿ.ಹಾಸನ ಗಣೇಶ ಮೆರವಣಿಗೆ ದುರಂತದ ಮೃತರ ಕುಟುಂಬಗಳಿಗೆ PMNRFನಿಂದ ಪರಿಹಾರ ಘೋಷಣೆ.ಅಮೆರಿಕದಲ್ಲಿ ಮಕ್ಕಳ ಸಾವು: ಕೋವಿಡ್ ಲಸಿಕೆಯ ಸಾಧ್ಯತೆ ಎಂದ ಟ್ರಂಪ್ ಆಡಳಿತ, ತನಿಖೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ದೇಶದ ಗಡಿಗಳಲ್ಲಿ ಭಾರತೀಯ ಸೈನಿಕರು ತಮ್ಮ ಪ್ರಾಣ ತ್ಯಾಗ ಮಾಡುತ್ತಿರುವ ವೇಳೆ, ಪಾಕಿಸ್ತಾನದೊಂದಿಗೆ ಭಾರತ ಕ್ರಿಕೆಟ್ ಪಂದ್ಯ ಆಡುವುದು ರಾಷ್ಟ್ರೀಯ ಭಾವನೆಗಳಿಗೆ ಮಾಡಿದ ಅಪಮಾನವಾಗಿದೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.</p><p>ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಭಾನುವಾರ (ಸೆ.14) ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಬಳಿಕ ಇದೇ ಮೊದಲ ಬಾರಿ ಸಾಂಪ್ರದಾಯಿಕ ಎದುರಾಳಿಗಳು ಮೈದಾನದಲ್ಲಿ ಸೆಣಸಲಿವೆ.</p>.ಮತ ಬ್ಯಾಂಕ್ ರಾಜಕೀಯದಿಂದ ನರಳಿದ್ದ ಈಶಾನ್ಯ ಈಗ ದೇಶದ ಬೆಳವಣಿಗೆಯ ಎಂಜಿನ್: PM ಮೋದಿ.ಗುರು ಗ್ರಹ ಕಾರಕತ್ವ: ಧನಸ್ಸು, ಮೀನ ರಾಶಿಯ ಅಧಿಪತಿ ಗುಣಗಳ ಬಗ್ಗೆ ತಿಳಿದುಕೊಳ್ಳಿ.<p>ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ಭಾನುವಾರ ನಿಗದಿಯಾಗಿರುವ ಉಭಯ ದೇಶಗಳ ನಡುವಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯವನ್ನು ಬಹಿಷ್ಕರಿಸಬೇಕು. ಈ ಮೂಲಕ ಭಯೋತ್ಪಾದನೆಯ ಬಗ್ಗೆ ಭಾರತ ಹೊಂದಿರುವ ನಿಲುವನ್ನು ಜಗತ್ತಿಗೆ ತಿಳಿಸಲು ಅವಕಾಶವಿದೆ ಎಂದು ಹೇಳಿದ್ದಾರೆ.</p><p>ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ಠಾಕ್ರೆ, ಕ್ರಿಕೆಟ್ ಪಂದ್ಯವು ದೇಶಭಕ್ತಿ ಬಗೆಗಿನ ತಮಾಷೆಯಾಗಿದೆ ಎಂದು ಕಿಡಿಕಾರಿದ್ದಾರೆ </p>.ಮಣಿಪುರದಲ್ಲಿ ಮೋದಿ.. ರಾಜ್ಯಪಾಲರಿಂದ ಸ್ವಾಗತ.ಸುರತ್ಕಲ್ | ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಗೆ ಗಲ್ಲು.<p>ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸುಧಾರಿಸಿದ ನಂತರ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪಂದ್ಯವಾಡಲಿ ಎಂದು ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.</p><p>‘ಆಪರೇಷನ್ ಸಿಂಧೂರ ನಂತರ ಪಾಕಿಸ್ತಾನದೊಂದಿಗೆ ಯಾವುದೇ ವ್ಯಾಪಾರ ಹಾಗೂ ಕ್ರಿಕೆಟ್ ಇರಬಾರದು ಎಂಬುದು ಭಾರತೀಯರ ಅಭಿಪ್ರಾಯವಾಗಿದೆ. ನಾವು ವಿಶ್ವ ಚಾಂಪಿಯನ್ಶಿಪ್ ಲೆಜೆಂಡ್ಸ್ ಟೂರ್ನಿಯಲ್ಲೂ ಕೂಡ ಪಾಕ್ನೊಂದಿಗೆ ಪಂದ್ಯ ಆಡಿರಲಿಲ್ಲ’ ಸಿಂಗ್ ಹೇಳಿದ್ದರು.</p>.ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ: ವಾಹನಗಳು, ಕೃಷಿ ಭೂಮಿಗೆ ಅಪಾರ ಹಾನಿ.PHOTOS | ಪತ್ನಿ, ಮಕ್ಕಳೊಂದಿಗೆ ರಿಯಲ್ ಸ್ಟಾರ್ ಉಪೇಂದ್ರ ಮೋಜುಮಸ್ತಿ.ಹಾಸನ ಗಣೇಶ ಮೆರವಣಿಗೆ ದುರಂತದ ಮೃತರ ಕುಟುಂಬಗಳಿಗೆ PMNRFನಿಂದ ಪರಿಹಾರ ಘೋಷಣೆ.ಅಮೆರಿಕದಲ್ಲಿ ಮಕ್ಕಳ ಸಾವು: ಕೋವಿಡ್ ಲಸಿಕೆಯ ಸಾಧ್ಯತೆ ಎಂದ ಟ್ರಂಪ್ ಆಡಳಿತ, ತನಿಖೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>