<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿ ಪಾಕಿಸ್ತಾನ ಸೇನಾ ಪಡೆಗಳು ನಡೆಸಿದ ಶೆಲ್ ದಾಳಿಯಿಂದಾಗಿ ಮಹಿಳೆಯೊಬ್ಬರು ಮೃತಪಟ್ಟು, ಅವರ ಕುಟುಂಬದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಪಾಕ್ ಪಡೆಗಳ ಆಕ್ರಮಣಕಾರಿ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p><p>ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದಲ್ಲಿ ಗಡಿ ನಿಯಂತ್ರಣಾ ರೇಖೆಯುದ್ದಕ್ಕೂ (ಎಲ್ಒಸಿ) ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಪಡೆಗಳು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿ ಗುರುವಾರ ರಾತ್ರಿಯಿಡೀ ಶೆಲ್ ದಾಳಿ ನಡೆಸಿವೆ ಎಂದು ಹೇಳಿದ್ದಾರೆ.</p><p>ಉರಿ ವಲಯದಲ್ಲಿರುವ ಸಿಲಿಕೋಟ್, ಬೋನಿಯಾರ್, ಕಮಲ್ಕೋಟ್, ಮೊಹ್ರಾ ಮತ್ತು ಜಿಂಗಲ್ ಪ್ರದೇಶಗಳ ಮೇಲೆ ದಾಳಿ ನಡೆದಿದೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ. ಇದರಿಂದಾಗಿ, ಜನರು ಮನೆಗಳಿಂದ ಪಲಾಯನ ಮಾಡಿದ್ದಾರೆ ಎಂದೂ ವಿವರಿಸಿದ್ದಾರೆ.</p><p>ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ವೇಳೆ ಕಾರಿಗೆ ಶೆಲ್ ಅಪ್ಪಳಿಸಿದ್ದು, ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆ ದಾಖಲಿಸಲಾಯಿತಾದರೂ, ನರ್ಗಿಸ್ ಬೇಗಂ ಎಂಬವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.India–Pakistan Tensions | ಪಾಕ್ ದಾಳಿ ಹಿಮ್ಮೆಟ್ಟಿಸಿದ್ದೇವೆ: ಭಾರತೀಯ ಸೇನೆ.F–16 ಯುದ್ಧ ವಿಮಾನ ಬಳಸಿ ಅಮೆರಿಕ ಒಪ್ಪಂದ ಉಲ್ಲಂಘಿಸಿದ ಪಾಕ್: ಪ್ರಕಾಶ್ ಅಂಬೇಡ್ಕರ್.Operation Sindoor: ಬೆಳಗಾವಿಗೆ 'ಸೊಸೆ ತಂದ ಸೌಭಾಗ್ಯ' .Operation Sindoor | ಮಸೂದ್ ಸೋದರ 'ಮೋಸ್ಟ್ ವಾಂಟೆಡ್' ಉಗ್ರ ಅಜರ್ ಹತ: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿ ಪಾಕಿಸ್ತಾನ ಸೇನಾ ಪಡೆಗಳು ನಡೆಸಿದ ಶೆಲ್ ದಾಳಿಯಿಂದಾಗಿ ಮಹಿಳೆಯೊಬ್ಬರು ಮೃತಪಟ್ಟು, ಅವರ ಕುಟುಂಬದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಪಾಕ್ ಪಡೆಗಳ ಆಕ್ರಮಣಕಾರಿ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p><p>ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದಲ್ಲಿ ಗಡಿ ನಿಯಂತ್ರಣಾ ರೇಖೆಯುದ್ದಕ್ಕೂ (ಎಲ್ಒಸಿ) ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಪಡೆಗಳು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿ ಗುರುವಾರ ರಾತ್ರಿಯಿಡೀ ಶೆಲ್ ದಾಳಿ ನಡೆಸಿವೆ ಎಂದು ಹೇಳಿದ್ದಾರೆ.</p><p>ಉರಿ ವಲಯದಲ್ಲಿರುವ ಸಿಲಿಕೋಟ್, ಬೋನಿಯಾರ್, ಕಮಲ್ಕೋಟ್, ಮೊಹ್ರಾ ಮತ್ತು ಜಿಂಗಲ್ ಪ್ರದೇಶಗಳ ಮೇಲೆ ದಾಳಿ ನಡೆದಿದೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ. ಇದರಿಂದಾಗಿ, ಜನರು ಮನೆಗಳಿಂದ ಪಲಾಯನ ಮಾಡಿದ್ದಾರೆ ಎಂದೂ ವಿವರಿಸಿದ್ದಾರೆ.</p><p>ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ವೇಳೆ ಕಾರಿಗೆ ಶೆಲ್ ಅಪ್ಪಳಿಸಿದ್ದು, ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆ ದಾಖಲಿಸಲಾಯಿತಾದರೂ, ನರ್ಗಿಸ್ ಬೇಗಂ ಎಂಬವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.India–Pakistan Tensions | ಪಾಕ್ ದಾಳಿ ಹಿಮ್ಮೆಟ್ಟಿಸಿದ್ದೇವೆ: ಭಾರತೀಯ ಸೇನೆ.F–16 ಯುದ್ಧ ವಿಮಾನ ಬಳಸಿ ಅಮೆರಿಕ ಒಪ್ಪಂದ ಉಲ್ಲಂಘಿಸಿದ ಪಾಕ್: ಪ್ರಕಾಶ್ ಅಂಬೇಡ್ಕರ್.Operation Sindoor: ಬೆಳಗಾವಿಗೆ 'ಸೊಸೆ ತಂದ ಸೌಭಾಗ್ಯ' .Operation Sindoor | ಮಸೂದ್ ಸೋದರ 'ಮೋಸ್ಟ್ ವಾಂಟೆಡ್' ಉಗ್ರ ಅಜರ್ ಹತ: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>