<p><strong>ನವದೆಹಲಿ</strong>: ಭಾರತ– ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಗುರುವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸೇರಿದಂತೆ ದೇಶದ ಗಡಿ ಕಾವಲು ಪಡೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಪಾಕಿಸ್ತಾನವು ಗುರುವಾರ ಜಮ್ಮು ಸೇರಿದಂತೆ ಅನೇಕ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಲು ಪ್ರಯತ್ನಿಸಿತ್ತು. ಆದರೆ ಭಾರತ ದಿಟ್ಟ ಉತ್ತರ ನೀಡುವ ಮೂಲಕ ಪಾಕಿಸ್ತಾನದ ಪ್ರಯತ್ನಗಳಿಗೆ ತಣ್ಣೀರು ಎರಚಿದೆ.</p><p>ಭಾರತ–ಪಾಕ್ ಗಡಿ ಪ್ರದೇಶಗಳಲ್ಲಿ ಜನರ ಸುರಕ್ಷತೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಶಾ ಚರ್ಚೆ ನಡೆಸಿದರು. ಪರಿಸ್ಥಿತಿಯನ್ನು ಅವಲೋಕಿಸಲು ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುಲು ಬಿಎಸ್ಎಫ್, ಐಟಿಬಿಪಿ, ಎಸ್ಎಸ್ಬಿ ಭದ್ರತಾ ಪಡೆಗಳ ಮುಖ್ಯಸ್ಥರಿಗೆ ಶಾ ಸೂಚಿಸಿದ್ದಾರೆ.</p>.ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ; 3 ದಿನ ಶಾಲಾ–ಕಾಲೇಜುಗಳಿಗೆ ರಜೆ: ಪಂಜಾಬ್ ಸರ್ಕಾರ.CJI ಅವಹೇಳನ: ಬಿಜೆಪಿ ಸಂಸದ ನಿಶಿಕಾಂತ ದುಬೆ ಕಿವಿ ಹಿಂಡಿದ ಸುಪ್ರೀಂ ಕೋರ್ಟ್. <p>ಈ ವೇಳೆ ಗಡಿ ಭದ್ರತಾ ಪಡೆಗಳ ಮುಖ್ಯಸ್ಥರು ಗಡಿ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ಕ್ರಮ ಸೇರಿದಂತೆ ಪ್ರಮುಖ ವಿಚಾರಗಳನ್ನು ಅಮಿತ್ ಶಾ ಅವರ ಗಮನಕ್ಕೆ ತಂದರು ಎಂದು ಮೂಲಗಳು ಹೇಳಿವೆ.</p><p>ದೇಶದ ವಿಮಾನ ನಿಲ್ದಾಣಗಳಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಸಿಐಎಸ್ಎಫ್ ಮುಖ್ಯಸ್ಥರಿಂದ ಅಮಿತ್ ಶಾ ಮಾಹಿತಿ ಪಡೆದರು ಎಂದು ತಿಳಿದು ಬಂದಿದೆ.</p><p>ಸಿಐಎಸ್ಎಫ್ ಭದ್ರತೆ ಪಡೆಗಳು ದೇಶದ ವಿಮಾನ ನಿಲ್ದಾಣ, ಮೆಟ್ರೊ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಒದಗಿಸುತ್ತದೆ.</p><p>ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.</p><p>ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ಮತ್ತೊಮ್ಮೆ ತಿರುಗೇಟು ನೀಡಿದೆ.</p>.ಪಾಕ್ಗೆ ಆರ್ಥಿಕ ನೆರವು ನೀಡುವ IMF ನಿರ್ಧಾರ ಪರಿಶೀಲಿಸಲು ಭಾರತ ಒತ್ತಾಯ ಸಾಧ್ಯತೆ.ಬೆಳಗಿನ ಜಾವ ಜಮ್ಮುವಿನಲ್ಲಿ ಸ್ಫೋಟದ ಸದ್ದು: ಭಯಭೀತರಾದ ನಿವಾಸಿಗಳು.ಐಪಿಎಲ್ ಮುಂದುವರಿಸಬೇಕೇ? ಬೇಡವೇ? ಎಂಬುದು ಸರ್ಕಾರ ಹೇಳಿದ ಮೇಲೆ ನಿರ್ಧಾರ– ಧುಮಾಲ್.ಯುದ್ಧ ನಡೆದಾಗಲೆಲ್ಲ ಕಷ್ಟ ಅನುಭವಿಸುವವರು ನಾವು.. ಕಾಶ್ಮೀರ ಕಣಿವೆಯ ಮೌನಭೀತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ– ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಗುರುವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸೇರಿದಂತೆ ದೇಶದ ಗಡಿ ಕಾವಲು ಪಡೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಪಾಕಿಸ್ತಾನವು ಗುರುವಾರ ಜಮ್ಮು ಸೇರಿದಂತೆ ಅನೇಕ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಲು ಪ್ರಯತ್ನಿಸಿತ್ತು. ಆದರೆ ಭಾರತ ದಿಟ್ಟ ಉತ್ತರ ನೀಡುವ ಮೂಲಕ ಪಾಕಿಸ್ತಾನದ ಪ್ರಯತ್ನಗಳಿಗೆ ತಣ್ಣೀರು ಎರಚಿದೆ.</p><p>ಭಾರತ–ಪಾಕ್ ಗಡಿ ಪ್ರದೇಶಗಳಲ್ಲಿ ಜನರ ಸುರಕ್ಷತೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಶಾ ಚರ್ಚೆ ನಡೆಸಿದರು. ಪರಿಸ್ಥಿತಿಯನ್ನು ಅವಲೋಕಿಸಲು ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುಲು ಬಿಎಸ್ಎಫ್, ಐಟಿಬಿಪಿ, ಎಸ್ಎಸ್ಬಿ ಭದ್ರತಾ ಪಡೆಗಳ ಮುಖ್ಯಸ್ಥರಿಗೆ ಶಾ ಸೂಚಿಸಿದ್ದಾರೆ.</p>.ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ; 3 ದಿನ ಶಾಲಾ–ಕಾಲೇಜುಗಳಿಗೆ ರಜೆ: ಪಂಜಾಬ್ ಸರ್ಕಾರ.CJI ಅವಹೇಳನ: ಬಿಜೆಪಿ ಸಂಸದ ನಿಶಿಕಾಂತ ದುಬೆ ಕಿವಿ ಹಿಂಡಿದ ಸುಪ್ರೀಂ ಕೋರ್ಟ್. <p>ಈ ವೇಳೆ ಗಡಿ ಭದ್ರತಾ ಪಡೆಗಳ ಮುಖ್ಯಸ್ಥರು ಗಡಿ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ಕ್ರಮ ಸೇರಿದಂತೆ ಪ್ರಮುಖ ವಿಚಾರಗಳನ್ನು ಅಮಿತ್ ಶಾ ಅವರ ಗಮನಕ್ಕೆ ತಂದರು ಎಂದು ಮೂಲಗಳು ಹೇಳಿವೆ.</p><p>ದೇಶದ ವಿಮಾನ ನಿಲ್ದಾಣಗಳಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಸಿಐಎಸ್ಎಫ್ ಮುಖ್ಯಸ್ಥರಿಂದ ಅಮಿತ್ ಶಾ ಮಾಹಿತಿ ಪಡೆದರು ಎಂದು ತಿಳಿದು ಬಂದಿದೆ.</p><p>ಸಿಐಎಸ್ಎಫ್ ಭದ್ರತೆ ಪಡೆಗಳು ದೇಶದ ವಿಮಾನ ನಿಲ್ದಾಣ, ಮೆಟ್ರೊ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಒದಗಿಸುತ್ತದೆ.</p><p>ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.</p><p>ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ಮತ್ತೊಮ್ಮೆ ತಿರುಗೇಟು ನೀಡಿದೆ.</p>.ಪಾಕ್ಗೆ ಆರ್ಥಿಕ ನೆರವು ನೀಡುವ IMF ನಿರ್ಧಾರ ಪರಿಶೀಲಿಸಲು ಭಾರತ ಒತ್ತಾಯ ಸಾಧ್ಯತೆ.ಬೆಳಗಿನ ಜಾವ ಜಮ್ಮುವಿನಲ್ಲಿ ಸ್ಫೋಟದ ಸದ್ದು: ಭಯಭೀತರಾದ ನಿವಾಸಿಗಳು.ಐಪಿಎಲ್ ಮುಂದುವರಿಸಬೇಕೇ? ಬೇಡವೇ? ಎಂಬುದು ಸರ್ಕಾರ ಹೇಳಿದ ಮೇಲೆ ನಿರ್ಧಾರ– ಧುಮಾಲ್.ಯುದ್ಧ ನಡೆದಾಗಲೆಲ್ಲ ಕಷ್ಟ ಅನುಭವಿಸುವವರು ನಾವು.. ಕಾಶ್ಮೀರ ಕಣಿವೆಯ ಮೌನಭೀತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>