<p><strong>ಪಟ್ನಾ:</strong> ‘ದೇಶ ವಿಭಜನೆಯಾದಾಗ ಇಲ್ಲಿನ ಎಲ್ಲಾ ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಕಳುಹಿಸದಿರುವುದು ಮತ್ತು ಪಾಕಿಸ್ತಾನದಲ್ಲಿ ಉಳಿದ ಹಿಂದೂಗಳನ್ನು ಭಾರತಕ್ಕೆ ಕರೆತರದಿರುವುದಕ್ಕೆ ಈಗ ಬೆಲೆ ತೆರುತ್ತಿದ್ದೇವೆ’ ಎಂದು ಕೇಂದ್ರದ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಸಚಿವರ ಈ ಹೇಳಿಕೆ ವಿವಾದ ಸೃಷ್ಟಿಸಿದೆ.</p>.<p>ಮುಸ್ಲಿಂ ಸಮುದಾಯದವರೇ ಹೆಚ್ಚಾಗಿರುವ, ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಪರವಾಗಿ ಮಾತನಾಡಿದ ಅವರು, ‘ನಮ್ಮ ಹಿರಿಯರು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸುತ್ತಿದ್ದಾಗ, ಜಿನ್ನಾ ಅವರು ಮುಸ್ಲಿಂ ರಾಷ್ಟ್ರ ನಿರ್ಮಾಣಕ್ಕೆ ಒತ್ತಾಯಿಸುತ್ತಿದ್ದರು. ಆ ಸಂದರ್ಭದಲ್ಲೇ ನಮ್ಮ ಹೋರಾಟಗಾರರು ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಕಳುಹಿಸಿ ಅಲ್ಲಿನ ಹಿಂದೂಗಳನ್ನು ಇಲ್ಲಿಗೆ ಕರೆತರಲು ತೀರ್ಮಾನಿಸಿದ್ದರೆ ಈಗ ಇಂಥ ಕಾಯ್ದೆ ರಚಿಸುವ ಅಗತ್ಯವೇ ಬರುತ್ತಿರಲಿಲ್ಲ. ಅವರು ಮಾಡಿದ ಒಂದು ತಪ್ಪಿಗೆ ನಾವು ಭಾರಿ ಬೆಲೆ ತೆರುತ್ತಿದ್ದೇವೆ’ ಎಂದು ಅವರು ಹೇಳಿದರು.</p>.<p>ಗಿರಿರಾಜ್ ಹೇಳಿಕೆಗೆ ಎನ್ಡಿಎ ಮೈತ್ರಿಕೂಟದಲ್ಲಿರುವ ಎಲ್ಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಬಿಹಾರದಲ್ಲಿ ವಿಧಾನಸಭಾ ಚುನಾ<br />ವಣೆಯ ಸಿದ್ಧತೆಗಾಗಿ ‘ಬಿಹಾರ ಮೊದಲು–ಬಿಹಾರಿ ಮೊದಲು’ ರ್ಯಾಲಿಯನ್ನು ಆರಂಭಿಸಿರುವ ಎಲ್ಜೆಪಿ ನಾಯಕ ರಾಮ್<br />ವಿಲಾಸ್ ಪಾಸ್ವಾನ್ ಅವರು, ‘ಬಿಜೆಪಿ ನಾಯಕರ ಇಂಥ ವಿಭಜನಕಾರಿ ಹೇಳಿಕೆಗಳಿಂದಾಗಿಯೇ ದೆಹಲಿ ಚುನಾವಣೆಯಲ್ಲಿ ಎನ್ಡಿಎ ಸೋಲು ಅನುಭವಿಸಬೇಕಾಯಿತು. ಇಂಥ ಹೇಳಿಕೆ ಒಪ್ಪಲಾಗದು. ನಮ್ಮ ಪಕ್ಷದ ಯಾರಾದರೂ ಇಂಥ ಹೇಳಿಕೆ ನೀಡಿದ್ದರೆ ನಾನೇ ಹೊಣೆ ಹೊತ್ತು ಕ್ರಮ ಕೈಗೊಳ್ಳುತ್ತಿದ್ದೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ‘ದೇಶ ವಿಭಜನೆಯಾದಾಗ ಇಲ್ಲಿನ ಎಲ್ಲಾ ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಕಳುಹಿಸದಿರುವುದು ಮತ್ತು ಪಾಕಿಸ್ತಾನದಲ್ಲಿ ಉಳಿದ ಹಿಂದೂಗಳನ್ನು ಭಾರತಕ್ಕೆ ಕರೆತರದಿರುವುದಕ್ಕೆ ಈಗ ಬೆಲೆ ತೆರುತ್ತಿದ್ದೇವೆ’ ಎಂದು ಕೇಂದ್ರದ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಸಚಿವರ ಈ ಹೇಳಿಕೆ ವಿವಾದ ಸೃಷ್ಟಿಸಿದೆ.</p>.<p>ಮುಸ್ಲಿಂ ಸಮುದಾಯದವರೇ ಹೆಚ್ಚಾಗಿರುವ, ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಪರವಾಗಿ ಮಾತನಾಡಿದ ಅವರು, ‘ನಮ್ಮ ಹಿರಿಯರು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸುತ್ತಿದ್ದಾಗ, ಜಿನ್ನಾ ಅವರು ಮುಸ್ಲಿಂ ರಾಷ್ಟ್ರ ನಿರ್ಮಾಣಕ್ಕೆ ಒತ್ತಾಯಿಸುತ್ತಿದ್ದರು. ಆ ಸಂದರ್ಭದಲ್ಲೇ ನಮ್ಮ ಹೋರಾಟಗಾರರು ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಕಳುಹಿಸಿ ಅಲ್ಲಿನ ಹಿಂದೂಗಳನ್ನು ಇಲ್ಲಿಗೆ ಕರೆತರಲು ತೀರ್ಮಾನಿಸಿದ್ದರೆ ಈಗ ಇಂಥ ಕಾಯ್ದೆ ರಚಿಸುವ ಅಗತ್ಯವೇ ಬರುತ್ತಿರಲಿಲ್ಲ. ಅವರು ಮಾಡಿದ ಒಂದು ತಪ್ಪಿಗೆ ನಾವು ಭಾರಿ ಬೆಲೆ ತೆರುತ್ತಿದ್ದೇವೆ’ ಎಂದು ಅವರು ಹೇಳಿದರು.</p>.<p>ಗಿರಿರಾಜ್ ಹೇಳಿಕೆಗೆ ಎನ್ಡಿಎ ಮೈತ್ರಿಕೂಟದಲ್ಲಿರುವ ಎಲ್ಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಬಿಹಾರದಲ್ಲಿ ವಿಧಾನಸಭಾ ಚುನಾ<br />ವಣೆಯ ಸಿದ್ಧತೆಗಾಗಿ ‘ಬಿಹಾರ ಮೊದಲು–ಬಿಹಾರಿ ಮೊದಲು’ ರ್ಯಾಲಿಯನ್ನು ಆರಂಭಿಸಿರುವ ಎಲ್ಜೆಪಿ ನಾಯಕ ರಾಮ್<br />ವಿಲಾಸ್ ಪಾಸ್ವಾನ್ ಅವರು, ‘ಬಿಜೆಪಿ ನಾಯಕರ ಇಂಥ ವಿಭಜನಕಾರಿ ಹೇಳಿಕೆಗಳಿಂದಾಗಿಯೇ ದೆಹಲಿ ಚುನಾವಣೆಯಲ್ಲಿ ಎನ್ಡಿಎ ಸೋಲು ಅನುಭವಿಸಬೇಕಾಯಿತು. ಇಂಥ ಹೇಳಿಕೆ ಒಪ್ಪಲಾಗದು. ನಮ್ಮ ಪಕ್ಷದ ಯಾರಾದರೂ ಇಂಥ ಹೇಳಿಕೆ ನೀಡಿದ್ದರೆ ನಾನೇ ಹೊಣೆ ಹೊತ್ತು ಕ್ರಮ ಕೈಗೊಳ್ಳುತ್ತಿದ್ದೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>