ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಳಿಂಞ ಬಂದರು ಬೆಂಬಲಿಸಿ ಪ್ರತಿಭಟನೆಗೆ ಅವಕಾಶ ನೀಡಲ್ಲ’

Last Updated 30 ನವೆಂಬರ್ 2022, 13:58 IST
ಅಕ್ಷರ ಗಾತ್ರ

ವಿಳಿಂಞ:ಗೌತಮ್‌ ಅದಾನಿ ಸಮೂಹದ ವಿಳಿಂಞ ಬಂದರು ನಿರ್ಮಾಣ ಬೆಂಬಲಿಸಿ ಹಿಂದೂ ಗುಂಪು ಪ್ರತಿಭಟನಾ ರ‍್ಯಾಲಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಕೇರಳ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಂದರು ನಿರ್ಮಾಣದಿಂದ ಉದ್ಯೋಗ ಸೃಷ್ಟಿಯಾಗುತ್ತದೆಂದು ಹಿಂದೂ ಯುನೈಟೆಡ್‌ ಫ್ರಂಟ್ ಸದಸ್ಯರು ವಿಳಿಂಞ ಬಂದರಿನ ವರೆಗೆ ಯಾತ್ರೆ ನಡೆಸುವುದಾಗಿ ಘೋಷಿಸಿದ್ದಾರೆ.

‘ಹಿಂದೂ ಯುನೈಟೆಡ್‌ ಫ್ರಂಟ್ ರ‍್ಯಾಲಿಗೆ ಅವಕಾಶ ನಿರಾಕರಿಸಲಾಗಿದೆ. ಆದೇಶ ಉಲ್ಲಂಘಿಸಿದಲ್ಲಿ ರ‍್ಯಾಲಿಯನ್ನು ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮವನ್ನೂ ಕೈಗೊಳ್ಳಲಾಗಿದೆ’ ಎಂದು ತಿರುವನಂತಪುರ ಡಿಸಿಪಿ ಅಜಿತ್ ವಿ. ತಿಳಿಸಿದ್ದಾರೆ.

ಬಂದರು ನಿರ್ಮಾಣದಿಂದ ಭೂಸವಕಳಿ ಉಂಟಾಗಿ ತಮ್ಮ ಜೀವನೋಪಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಮೀನುಗಾರರು ಆರೋಪಿಸಿ ಪ್ರತಿಭಟಿಸುತ್ತಿರುವುದರಿಂದ ಸುಮಾರು ನಾಲ್ಕು ತಿಂಗಳಿನಿಂದ ಕಾಮಗಾರಿಯು ಸ್ಥಗಿತಗೊಂಡಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT