2025ರ ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿ, ಪ್ರವಾಸಿಗರ ಸಾವಿಗೆ ಕಾರಣವಾಗಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ ಹೆಸರಿನ ಸೇನಾ ಕಾರ್ಯಾಚರಣೆ ನಡೆಸಿತ್ತು. ಇದಾದ ಕೆಲ ದಿನಗಳ ಬಳಿಕ ದೆಹಲಿಯ ಕೆಂಪು ಕೋಟೆ ಸಮೀಪ ಬಾಂಬ್ ಸ್ಫೋಟವಾಗಿ 15 ಮಂದಿ ಪ್ರಾಣ ಕಳೆದುಕೊಂಡರು. ಈ ಘಟನೆಯ ಬಳಿಕ ಭಾರತದ ಭದ್ರತೆ ಕುರಿತು ಕಳವಳ ವ್ಯಕ್ತವಾಗುತ್ತಿದೆ. ಇದೀಗ ಉಗ್ರ ಚಟುವಟಿಕೆಗಳನ್ನು ತ್ವರಿತವಾಗಿ ನಿಗ್ರಹಿಸಲು ಬಹು ಆಯಾಮದ ನೀತಿ ‘ಪ್ರಹಾರ್’ ಜಾರಿಯಾಗಿದೆ. ಭಾರತದ ಈ ಹೊಸ ನೀತಿ ಏನು? ಇದು ಹೇಗೆ ಕೆಲಸ ಮಾಡುತ್ತದೆ? ಭಯೋತ್ಪಾದಕರನ್ನು ಮಟ್ಟಹಾಕುವಲ್ಲಿ ಇದರ ಪಾತ್ರವೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.