<p><strong>ನವದೆಹಲಿ:</strong> ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಶೇ 0.46 ಸೋಂಕಿತರು ಮಾತ್ರ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>146 ಜಿಲ್ಲೆಗಳಲ್ಲಿ ಕಳೆದ ಏಳು ದಿನಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ, ಶೇ 2.20 ಜನರು ಐಸಿಯುನಲ್ಲಿ ಹಾಗೂ ಶೇ 3.02 ಜನರಿಗೆ ಕೃತಕ ಆಮ್ಲಜನಕ ಅಳವಡಿಸಲಾಗಿದೆ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.</p>.<p>ದೇಶದಲ್ಲಿ ಪ್ರತಿನಿತ್ಯ 12 ಲಕ್ಷ ಪರೀಕ್ಷೆಗಳು ನಡೆಯುತ್ತಿದ್ದು, ಕಳೆದ 24 ಗಂಟೆಯಲ್ಲಿ 12 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1.73 ಲಕ್ಷಕ್ಕೆ ಇಳಿಕೆಯಾಗಿದೆ.</p>.<p>ಬ್ರಿಟನ್ನಲ್ಲಿ ಮೊದಲು ಕಾಣಿಸಿಕೊಂಡ ರೂಪಾಂತರಗೊಂಡ ವೈರಾಣು ದೇಶದಲ್ಲಿ 165 ಜನರಲ್ಲಿ ಪತ್ತೆಯಾಗಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ’ ಎಂದರು.</p>.<p>ಕೋವಿಡ್ ಲಸಿಕೆ ಅಭಿಯಾನ ಈಗಾಗಲೇ ಮುಂದುವರಿದಿದ್ದು, ಈವರೆಗೆ 23,55,979 ಮಂದಿ ಲಸಿಕೆ ಪಡೆದಿದ್ದಾರೆ. ಸದ್ಯ ಕೇರಳದಲ್ಲಿ 72,476, ಮಹಾರಾಷ್ಟ್ರದಲ್ಲಿ 44,624, ಕರ್ನಾಟಕದಲ್ಲಿ 6,317 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಶೇ 0.46 ಸೋಂಕಿತರು ಮಾತ್ರ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>146 ಜಿಲ್ಲೆಗಳಲ್ಲಿ ಕಳೆದ ಏಳು ದಿನಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ, ಶೇ 2.20 ಜನರು ಐಸಿಯುನಲ್ಲಿ ಹಾಗೂ ಶೇ 3.02 ಜನರಿಗೆ ಕೃತಕ ಆಮ್ಲಜನಕ ಅಳವಡಿಸಲಾಗಿದೆ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.</p>.<p>ದೇಶದಲ್ಲಿ ಪ್ರತಿನಿತ್ಯ 12 ಲಕ್ಷ ಪರೀಕ್ಷೆಗಳು ನಡೆಯುತ್ತಿದ್ದು, ಕಳೆದ 24 ಗಂಟೆಯಲ್ಲಿ 12 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1.73 ಲಕ್ಷಕ್ಕೆ ಇಳಿಕೆಯಾಗಿದೆ.</p>.<p>ಬ್ರಿಟನ್ನಲ್ಲಿ ಮೊದಲು ಕಾಣಿಸಿಕೊಂಡ ರೂಪಾಂತರಗೊಂಡ ವೈರಾಣು ದೇಶದಲ್ಲಿ 165 ಜನರಲ್ಲಿ ಪತ್ತೆಯಾಗಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ’ ಎಂದರು.</p>.<p>ಕೋವಿಡ್ ಲಸಿಕೆ ಅಭಿಯಾನ ಈಗಾಗಲೇ ಮುಂದುವರಿದಿದ್ದು, ಈವರೆಗೆ 23,55,979 ಮಂದಿ ಲಸಿಕೆ ಪಡೆದಿದ್ದಾರೆ. ಸದ್ಯ ಕೇರಳದಲ್ಲಿ 72,476, ಮಹಾರಾಷ್ಟ್ರದಲ್ಲಿ 44,624, ಕರ್ನಾಟಕದಲ್ಲಿ 6,317 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>