<p><strong>ನವದೆಹಲಿ:</strong> ‘ಅಮೆರಿಕ ಮತ್ತು ಭಾರತದ ನಡುವಿನ ಪಾಲುದಾರಿಕೆ ದ್ವಿಪಕ್ಷೀಯ ಸಂಬಂಧ ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅನೇಕ ಸವಾಲುಗಳನ್ನು ಮೆಟ್ಟಿನಿಂತು ಮುಂದುವರಿದಿದೆ’ ಎಂದು ಭಾರತ ಶುಕ್ರವಾರ ಹೇಳಿದೆ.</p><p>ದೇಶದ ಮೇಲೆ ಶೇ 25ರಷ್ಟು ಸುಂಕ ವಿಧಿಸಿದ್ದಲ್ಲದೇ ‘ಭಾರತದ್ದು ‘ಸತ್ತ’ ಆರ್ಥಿಕತೆ’ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಈ ಮೂಲಕ ತಿರುಗೇಟು ನೀಡಿದೆ.</p><p>‘ಭಾರತ ಮತ್ತು ಅಮೆರಿಕ ಸಮಗ್ರ ಪಾಲುದಾರಿಕೆ ಹೊಂದಿರುವ ರಾಷ್ಟ್ರಗಳಾಗಿವೆ. ಪ್ರಜಾಸತ್ತಾತ್ಮಕ ಮೌಲ್ಯಗಳು ಜನರ ನಡುವೆ ಉತ್ತಮ ಬಾಂಧವ್ಯದಿಂದ ಹಿಡಿದು ಹಲವಾರು ಸಾಮಾನ್ಯ ಹಿತಾಸಕ್ತಿಗಳು ಉಭಯ ದೇಶಗಳನ್ನು ಬೆಸೆದಿವೆ’ ಎಂದು ವಿದೇಶಾಂಗ ಸಚಿವಾಲಯ ವಕ್ತಾರ ರಣಧೀರ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.</p><p>‘ಉಭಯ ದೇಶಗಳ ನಡುವಿನ ಪಾಲುದಾರಿಕೆ ಹಲವು ಸಂಕಷ್ಟಗಳನ್ನು ಎದುರಿಸಿಯೂ ಮುಂದುವರಿದಿದೆ. ಭವಿಷ್ಯದಲ್ಲಿಯೂ ಇದು ಮುಂದುವರಿಯಲಿದೆ ಎಂಬ ವಿಶ್ವಾಸ ನಮಗಿದೆ’ ಎಂದು ಹೇಳಿದ್ದಾರೆ.</p><p>‘ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿ ಎರಡೂ ದೇಶಗಳು ದೃಢವಾದ ಪಾಲುದಾರಿಕೆ ಹೊಂದಿವೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p><p>ಇಂಧನ ಖರೀದಿ ಕುರಿತ ಮತ್ತೊಂದು ಪ್ರಶ್ನೆಗೆ ‘ಬೇರೆ ದೇಶಗಳಿಂದ ಇಂಧನ ಖರೀದಿಸುವ ವಿಚಾರವು ನಮ್ಮ ರಾಷ್ಟ್ರೀಯ ಹಿತಾಸಕ್ತಿಯನ್ನು ಆಧರಿಸಿದೆ. ಪ್ರಚಲಿತ ಜಾಗತಿಕ ಸನ್ನಿವೇಶಗಳು ಹಾಗೂ ಮಾರುಕಟ್ಟೆ ವಿದ್ಯಮಾನಗಳ ಆಧಾರದಲ್ಲಿ ಇಂಧನ ಖರೀದಿ ಪ್ರಕ್ರಿಯೆ ನಡೆಯುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಅಮೆರಿಕ ಮತ್ತು ಭಾರತದ ನಡುವಿನ ಪಾಲುದಾರಿಕೆ ದ್ವಿಪಕ್ಷೀಯ ಸಂಬಂಧ ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅನೇಕ ಸವಾಲುಗಳನ್ನು ಮೆಟ್ಟಿನಿಂತು ಮುಂದುವರಿದಿದೆ’ ಎಂದು ಭಾರತ ಶುಕ್ರವಾರ ಹೇಳಿದೆ.</p><p>ದೇಶದ ಮೇಲೆ ಶೇ 25ರಷ್ಟು ಸುಂಕ ವಿಧಿಸಿದ್ದಲ್ಲದೇ ‘ಭಾರತದ್ದು ‘ಸತ್ತ’ ಆರ್ಥಿಕತೆ’ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಈ ಮೂಲಕ ತಿರುಗೇಟು ನೀಡಿದೆ.</p><p>‘ಭಾರತ ಮತ್ತು ಅಮೆರಿಕ ಸಮಗ್ರ ಪಾಲುದಾರಿಕೆ ಹೊಂದಿರುವ ರಾಷ್ಟ್ರಗಳಾಗಿವೆ. ಪ್ರಜಾಸತ್ತಾತ್ಮಕ ಮೌಲ್ಯಗಳು ಜನರ ನಡುವೆ ಉತ್ತಮ ಬಾಂಧವ್ಯದಿಂದ ಹಿಡಿದು ಹಲವಾರು ಸಾಮಾನ್ಯ ಹಿತಾಸಕ್ತಿಗಳು ಉಭಯ ದೇಶಗಳನ್ನು ಬೆಸೆದಿವೆ’ ಎಂದು ವಿದೇಶಾಂಗ ಸಚಿವಾಲಯ ವಕ್ತಾರ ರಣಧೀರ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.</p><p>‘ಉಭಯ ದೇಶಗಳ ನಡುವಿನ ಪಾಲುದಾರಿಕೆ ಹಲವು ಸಂಕಷ್ಟಗಳನ್ನು ಎದುರಿಸಿಯೂ ಮುಂದುವರಿದಿದೆ. ಭವಿಷ್ಯದಲ್ಲಿಯೂ ಇದು ಮುಂದುವರಿಯಲಿದೆ ಎಂಬ ವಿಶ್ವಾಸ ನಮಗಿದೆ’ ಎಂದು ಹೇಳಿದ್ದಾರೆ.</p><p>‘ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿ ಎರಡೂ ದೇಶಗಳು ದೃಢವಾದ ಪಾಲುದಾರಿಕೆ ಹೊಂದಿವೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p><p>ಇಂಧನ ಖರೀದಿ ಕುರಿತ ಮತ್ತೊಂದು ಪ್ರಶ್ನೆಗೆ ‘ಬೇರೆ ದೇಶಗಳಿಂದ ಇಂಧನ ಖರೀದಿಸುವ ವಿಚಾರವು ನಮ್ಮ ರಾಷ್ಟ್ರೀಯ ಹಿತಾಸಕ್ತಿಯನ್ನು ಆಧರಿಸಿದೆ. ಪ್ರಚಲಿತ ಜಾಗತಿಕ ಸನ್ನಿವೇಶಗಳು ಹಾಗೂ ಮಾರುಕಟ್ಟೆ ವಿದ್ಯಮಾನಗಳ ಆಧಾರದಲ್ಲಿ ಇಂಧನ ಖರೀದಿ ಪ್ರಕ್ರಿಯೆ ನಡೆಯುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>