<p><strong>ಬೀಜಿಂಗ್/ಭಾರತ</strong>: S–400 ಟ್ರಯಂಪ್ ಕ್ಷಿಪಣಿ ವ್ಯವಸ್ಥೆಗಳ ಪೂರೈಕೆ, Su-30 MKI ಯುದ್ಧ ವಿಮಾನಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ನಿರ್ಣಾಯಕ ಮಿಲಿಟರಿ ಯಂತ್ರಾಂಶಗಳ ಖರೀದಿಗೆ ಸಂಬಂಧಿಸಿದಂತೆ ಭಾರತ ಮತ್ತು ರಷ್ಯಾ ಶುಕ್ರವಾರ ಮಾತುಕತೆ ನಡೆಸಿವೆ.</p><p>ಚೀನಾದ ಚಿಂಗ್ಡಾವ್ನಲ್ಲಿ ನಡೆದ ಶಾಂಘೈ ಸಹಕಾರ ಒಕ್ಕೂಟದ (ಎಸ್ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಷ್ಯಾ ರಕ್ಷಣಾ ಸಚಿವ ಆಂಡ್ರೆ ಬೆಲೌಸೊವ್ ಗುರುವಾರ ಮಾತುಕತೆ ನಡೆಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p><p>ಎಸ್ಸಿಒ ಶೃಂಗಸಭೆಯು ಬುಧವಾರ ಮತ್ತು ಗುರುವಾರ ನಡೆಯಿತು. ಒಕ್ಕೂಟದ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಭಾಗವಹಿಸಿದ್ದರು.</p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ನಡೆಸಿದ್ದ ದಾಳಿಯ ಬಗ್ಗೆ ಶೃಂಗಸಭೆಯ ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಬೇಕು ಎಂದು ಭಾರತ ಒತ್ತಾಯಿಸಿತ್ತು. ಆದಾಗ್ಯೂ, ಪಾಕ್ನ ಬಲೂಚಿಸ್ತಾನದಲ್ಲಿ ಪ್ರತ್ಯೇಕತಾವಾದಿಗಳು ನಡೆಸಿದ್ದ ದಾಳಿಯನ್ನಷ್ಟೇ ಉಲ್ಲೇಖಿಸಲಾಗಿತ್ತು. ಆ ಕಾರಣಕ್ಕೆ, ರಾಜನಾಥ ಸಿಂಗ್ ಅವರು ಜಂಟಿ ಹೇಳಿಕೆಗೆ ಸಹಿ ಮಾಡಿರಲಿಲ್ಲ.</p><p>ಹೀಗಾಗಿ, ಜಂಟಿ ಹೇಳಿಕೆ ಬಿಡುಗಡೆ ಆಗದೆಯೇ ಶೃಂಗಸಭೆ ಅಂತ್ಯಗೊಂಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್/ಭಾರತ</strong>: S–400 ಟ್ರಯಂಪ್ ಕ್ಷಿಪಣಿ ವ್ಯವಸ್ಥೆಗಳ ಪೂರೈಕೆ, Su-30 MKI ಯುದ್ಧ ವಿಮಾನಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ನಿರ್ಣಾಯಕ ಮಿಲಿಟರಿ ಯಂತ್ರಾಂಶಗಳ ಖರೀದಿಗೆ ಸಂಬಂಧಿಸಿದಂತೆ ಭಾರತ ಮತ್ತು ರಷ್ಯಾ ಶುಕ್ರವಾರ ಮಾತುಕತೆ ನಡೆಸಿವೆ.</p><p>ಚೀನಾದ ಚಿಂಗ್ಡಾವ್ನಲ್ಲಿ ನಡೆದ ಶಾಂಘೈ ಸಹಕಾರ ಒಕ್ಕೂಟದ (ಎಸ್ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಷ್ಯಾ ರಕ್ಷಣಾ ಸಚಿವ ಆಂಡ್ರೆ ಬೆಲೌಸೊವ್ ಗುರುವಾರ ಮಾತುಕತೆ ನಡೆಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p><p>ಎಸ್ಸಿಒ ಶೃಂಗಸಭೆಯು ಬುಧವಾರ ಮತ್ತು ಗುರುವಾರ ನಡೆಯಿತು. ಒಕ್ಕೂಟದ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಭಾಗವಹಿಸಿದ್ದರು.</p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ನಡೆಸಿದ್ದ ದಾಳಿಯ ಬಗ್ಗೆ ಶೃಂಗಸಭೆಯ ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಬೇಕು ಎಂದು ಭಾರತ ಒತ್ತಾಯಿಸಿತ್ತು. ಆದಾಗ್ಯೂ, ಪಾಕ್ನ ಬಲೂಚಿಸ್ತಾನದಲ್ಲಿ ಪ್ರತ್ಯೇಕತಾವಾದಿಗಳು ನಡೆಸಿದ್ದ ದಾಳಿಯನ್ನಷ್ಟೇ ಉಲ್ಲೇಖಿಸಲಾಗಿತ್ತು. ಆ ಕಾರಣಕ್ಕೆ, ರಾಜನಾಥ ಸಿಂಗ್ ಅವರು ಜಂಟಿ ಹೇಳಿಕೆಗೆ ಸಹಿ ಮಾಡಿರಲಿಲ್ಲ.</p><p>ಹೀಗಾಗಿ, ಜಂಟಿ ಹೇಳಿಕೆ ಬಿಡುಗಡೆ ಆಗದೆಯೇ ಶೃಂಗಸಭೆ ಅಂತ್ಯಗೊಂಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>