<p><strong>ನವದೆಹಲಿ:</strong> ಭೂಕಂಪ ಪೀಡಿತ ಮ್ಯಾನ್ಮಾರ್ಗೆ ಭಾರತ ಸುಮಾರು 50 ಟನ್ ಪರಿಹಾರ ಸಾಮಗ್ರಿಗಳನ್ನು ಸೋಮವಾರ ರವಾನಿಸಿದೆ.</p>.<p>ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತೀಯ ನೌಕಾಪಡೆಯ ಎರಡು ಹಡಗುಗಳಾದ ಐಎನ್ಎಸ್ ಸಾತ್ಪುರ ಮತ್ತು ಐಎನ್ಎಸ್ ಸಾವಿತ್ರಿ ಮ್ಯಾನ್ಮಾರ್ನ ಯಾಂಗೂನ್ ನಗರಕ್ಕೆ ತಲುಪಿವೆ.</p>.<p>ಭಾರತೀಯ ನೌಕಾಪಡೆಯ ಇನ್ನೂ ಮೂರು ಹಡಗುಗಳಾದ ಎಲ್ಸಿಯು-52, ಐಎನ್ಎಸ್ ಕಾರ್ಮುಖ್, ಐಎನ್ಎಸ್ ಘರಿಯಲ್ 500 ಟನ್ಗಳಿಗೂ ಹೆಚ್ಚು ಹೆಚ್ಚುವರಿ ಸಾಮಗ್ರಿಗಳೊಂದಿಗೆ ಯಾಂಗೊನ್ಗೆ ತೆರಳುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್, 'ಆಪರೇಷನ್ ಬ್ರಹ್ಮ' ಮಾನವೀಯ ಕಾರ್ಯಾಚರಣೆಯ ಭಾಗವಾಗಿ ಐಎನ್ಎಸ್ ಸಾತ್ಪುರ ಮತ್ತು ಐಎನ್ಎಸ್ ಸಾವಿತ್ರಿ ಇಂದು ಪರಿಹಾರ ಸಾಮಗ್ರಿಗಳೊಂದಿಗೆ ಯಾಂಗೂನ್ ತಲುಪಿವೆ ಎಂದು ಹೇಳಿದ್ದಾರೆ.</p>.<p>ಐಎನ್ಎಸ್ ಸಾತ್ಪುರ ಮತ್ತು ಐಎನ್ಎಸ್ ಸಾವಿತ್ರಿ ಹಡಗುಗಳಲ್ಲಿ ಬಂದ ಪರಿಹಾರ ಸಾಮಗ್ರಿಗಳನ್ನು, ಭಾರತೀಯ ರಾಯಭಾರಿ ಅಧಿಕಾರಿ ಅಭಯ್ ಠಾಕೂರ್ ಅವರು ಮ್ಯಾನ್ಯಾರ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.</p>.Myanmar Earthquake: ಪರಿಹಾರ ಕಾರ್ಯ ಕೈಗೊಳ್ಳುವವರಿಂದ ನೆರವಿಗೆ ಮೊರೆ.<p>ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕಂಪದಲ್ಲಿ 2 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟು, ಸುಮಾರು 3,900ಕ್ಕೂ ಮಂದಿ ಗಾಯಗೊಂಡಿದ್ದಾರೆ.</p>.<h2>ನೆರವು ಕಾರ್ಯಾಚರಣೆಗೆ ಕೈಜೋಡಿಸಿದ ಭಾರತ</h2>.<p>ಮ್ಯಾನ್ಮಾರ್ನಲ್ಲಿ ನೆರವು ಕಾರ್ಯಾಚರಣೆಗೆ ಕೈಜೋಡಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ (ಎನ್ಡಿಆರ್ಎಫ್) 80 ಮಂದಿಯ ತುಕಡಿಯನ್ನು ಭಾರತವು ಕಳುಹಿಸಿತ್ತು. ‘ಆಪರೇಷನ್ ಬ್ರಹ್ಮ’ ಅಡಿಯಲ್ಲಿ ಈ ತುಕಡಿಯನ್ನು ರವಾನಿಸಲಾಗಿತ್ತು.</p>.<p>ಶನಿವಾರ 5 ಮಿಲಿಟರಿ ವಿಮಾನಗಳಲ್ಲಿ 15 ಟನ್ ಪರಿಹಾರ ಸಾಮಗ್ರಿಗಳು, ರಕ್ಷಣಾ ತಂಡಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ರವಾನಿಸಿತ್ತು. </p> .ಭೂಕಂಪ ಪೀಡಿತ ಮ್ಯಾನ್ಮಾರ್ಗೆ 15 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭೂಕಂಪ ಪೀಡಿತ ಮ್ಯಾನ್ಮಾರ್ಗೆ ಭಾರತ ಸುಮಾರು 50 ಟನ್ ಪರಿಹಾರ ಸಾಮಗ್ರಿಗಳನ್ನು ಸೋಮವಾರ ರವಾನಿಸಿದೆ.</p>.<p>ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತೀಯ ನೌಕಾಪಡೆಯ ಎರಡು ಹಡಗುಗಳಾದ ಐಎನ್ಎಸ್ ಸಾತ್ಪುರ ಮತ್ತು ಐಎನ್ಎಸ್ ಸಾವಿತ್ರಿ ಮ್ಯಾನ್ಮಾರ್ನ ಯಾಂಗೂನ್ ನಗರಕ್ಕೆ ತಲುಪಿವೆ.</p>.<p>ಭಾರತೀಯ ನೌಕಾಪಡೆಯ ಇನ್ನೂ ಮೂರು ಹಡಗುಗಳಾದ ಎಲ್ಸಿಯು-52, ಐಎನ್ಎಸ್ ಕಾರ್ಮುಖ್, ಐಎನ್ಎಸ್ ಘರಿಯಲ್ 500 ಟನ್ಗಳಿಗೂ ಹೆಚ್ಚು ಹೆಚ್ಚುವರಿ ಸಾಮಗ್ರಿಗಳೊಂದಿಗೆ ಯಾಂಗೊನ್ಗೆ ತೆರಳುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್, 'ಆಪರೇಷನ್ ಬ್ರಹ್ಮ' ಮಾನವೀಯ ಕಾರ್ಯಾಚರಣೆಯ ಭಾಗವಾಗಿ ಐಎನ್ಎಸ್ ಸಾತ್ಪುರ ಮತ್ತು ಐಎನ್ಎಸ್ ಸಾವಿತ್ರಿ ಇಂದು ಪರಿಹಾರ ಸಾಮಗ್ರಿಗಳೊಂದಿಗೆ ಯಾಂಗೂನ್ ತಲುಪಿವೆ ಎಂದು ಹೇಳಿದ್ದಾರೆ.</p>.<p>ಐಎನ್ಎಸ್ ಸಾತ್ಪುರ ಮತ್ತು ಐಎನ್ಎಸ್ ಸಾವಿತ್ರಿ ಹಡಗುಗಳಲ್ಲಿ ಬಂದ ಪರಿಹಾರ ಸಾಮಗ್ರಿಗಳನ್ನು, ಭಾರತೀಯ ರಾಯಭಾರಿ ಅಧಿಕಾರಿ ಅಭಯ್ ಠಾಕೂರ್ ಅವರು ಮ್ಯಾನ್ಯಾರ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.</p>.Myanmar Earthquake: ಪರಿಹಾರ ಕಾರ್ಯ ಕೈಗೊಳ್ಳುವವರಿಂದ ನೆರವಿಗೆ ಮೊರೆ.<p>ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕಂಪದಲ್ಲಿ 2 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟು, ಸುಮಾರು 3,900ಕ್ಕೂ ಮಂದಿ ಗಾಯಗೊಂಡಿದ್ದಾರೆ.</p>.<h2>ನೆರವು ಕಾರ್ಯಾಚರಣೆಗೆ ಕೈಜೋಡಿಸಿದ ಭಾರತ</h2>.<p>ಮ್ಯಾನ್ಮಾರ್ನಲ್ಲಿ ನೆರವು ಕಾರ್ಯಾಚರಣೆಗೆ ಕೈಜೋಡಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ (ಎನ್ಡಿಆರ್ಎಫ್) 80 ಮಂದಿಯ ತುಕಡಿಯನ್ನು ಭಾರತವು ಕಳುಹಿಸಿತ್ತು. ‘ಆಪರೇಷನ್ ಬ್ರಹ್ಮ’ ಅಡಿಯಲ್ಲಿ ಈ ತುಕಡಿಯನ್ನು ರವಾನಿಸಲಾಗಿತ್ತು.</p>.<p>ಶನಿವಾರ 5 ಮಿಲಿಟರಿ ವಿಮಾನಗಳಲ್ಲಿ 15 ಟನ್ ಪರಿಹಾರ ಸಾಮಗ್ರಿಗಳು, ರಕ್ಷಣಾ ತಂಡಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ರವಾನಿಸಿತ್ತು. </p> .ಭೂಕಂಪ ಪೀಡಿತ ಮ್ಯಾನ್ಮಾರ್ಗೆ 15 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>