<p><strong>ನವದೆಹಲಿ:</strong> ಭಾರತ ಯಾವಾಗಲೂ ಯುದ್ಧಕ್ಕೆ ಸಿದ್ಧವಾಗಿರಬೇಕು. ಗಡಿಯಲ್ಲಿ ಯಾವಾಗ, ಏನೂ ಬೇಕಾದರೂ ನಡೆಯಬಹುದು ಎನ್ನುವುದಕ್ಕೆ ಪಾಕಿಸ್ತಾನದೊಂದಿಗಿನ ಸಂಘರ್ಷ ನಿದರ್ಶನವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದರು.</p>.<p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಆಪರೇಷನ್ ಸಿಂಧೂರ’ದಲ್ಲಿ ಭಾರತವು ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದೆ. ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಎದುರಿಸಲು ಭವಿಷ್ಯದಲ್ಲಿ ಯೋಜನೆ ರೂಪಿಸಲು ಇದೊಂದು ಅಧ್ಯಯನ ಯೋಗ್ಯ ವಿಚಾರವಾಗಿದೆ’ ಎಂದು ತಿಳಿಸಿದರು. </p>.<p>‘ಆಪರೇಷನ್ ಸಿಂಧೂರ’ದಲ್ಲಿ ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಬಳಕೆಯಿಂದಾಗಿ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯು ಮತ್ತಷ್ಟು ಹೆಚ್ಚಾಗಿದೆ. ಪ್ರಸ್ತುತ ಜಗತ್ತಿನಲ್ಲಿರುವ ಅನಿಶ್ಚಿತತೆಯಿಂದಾಗಿ ಎಲ್ಲ ಆಯಮಗಳ ಅವಲೋಕನವು ಅತ್ಯಗತ್ಯವಾಗಿದೆ. ಸವಾಲುಗಳನ್ನು ಎದುರಿಸಲು ಸ್ವಾವಲಂಬನೆಯೊಂದೇ ಮಾರ್ಗ’ ಎಂದು ರಾಜನಾಥ್ ಸಿಂಗ್ ಹೇಳಿದರು.</p>.<p>‘ನಮ್ಮ ರಕ್ಷಣಾ ಉತ್ಪಾದನೆಯ ಪ್ರಮಾಣವು 2014ರಲ್ಲಿ ಕೇವಲ ₹46 ಸಾವಿರ ಕೋಟಿಯಷ್ಟಿತ್ತು, ಆದರೆ ಈಗ 1.51 ಲಕ್ಷ ಕೋಟಿಯಷ್ಟಾಗಿದೆ. ಅದರಲ್ಲಿ ಖಾಸಗಿ ವಲಯದ ಕೊಡುಗೆ ₹33 ಸಾವಿರ ಕೋಟಿ ಇದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಯಾವಾಗಲೂ ಯುದ್ಧಕ್ಕೆ ಸಿದ್ಧವಾಗಿರಬೇಕು. ಗಡಿಯಲ್ಲಿ ಯಾವಾಗ, ಏನೂ ಬೇಕಾದರೂ ನಡೆಯಬಹುದು ಎನ್ನುವುದಕ್ಕೆ ಪಾಕಿಸ್ತಾನದೊಂದಿಗಿನ ಸಂಘರ್ಷ ನಿದರ್ಶನವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದರು.</p>.<p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಆಪರೇಷನ್ ಸಿಂಧೂರ’ದಲ್ಲಿ ಭಾರತವು ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದೆ. ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಎದುರಿಸಲು ಭವಿಷ್ಯದಲ್ಲಿ ಯೋಜನೆ ರೂಪಿಸಲು ಇದೊಂದು ಅಧ್ಯಯನ ಯೋಗ್ಯ ವಿಚಾರವಾಗಿದೆ’ ಎಂದು ತಿಳಿಸಿದರು. </p>.<p>‘ಆಪರೇಷನ್ ಸಿಂಧೂರ’ದಲ್ಲಿ ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಬಳಕೆಯಿಂದಾಗಿ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯು ಮತ್ತಷ್ಟು ಹೆಚ್ಚಾಗಿದೆ. ಪ್ರಸ್ತುತ ಜಗತ್ತಿನಲ್ಲಿರುವ ಅನಿಶ್ಚಿತತೆಯಿಂದಾಗಿ ಎಲ್ಲ ಆಯಮಗಳ ಅವಲೋಕನವು ಅತ್ಯಗತ್ಯವಾಗಿದೆ. ಸವಾಲುಗಳನ್ನು ಎದುರಿಸಲು ಸ್ವಾವಲಂಬನೆಯೊಂದೇ ಮಾರ್ಗ’ ಎಂದು ರಾಜನಾಥ್ ಸಿಂಗ್ ಹೇಳಿದರು.</p>.<p>‘ನಮ್ಮ ರಕ್ಷಣಾ ಉತ್ಪಾದನೆಯ ಪ್ರಮಾಣವು 2014ರಲ್ಲಿ ಕೇವಲ ₹46 ಸಾವಿರ ಕೋಟಿಯಷ್ಟಿತ್ತು, ಆದರೆ ಈಗ 1.51 ಲಕ್ಷ ಕೋಟಿಯಷ್ಟಾಗಿದೆ. ಅದರಲ್ಲಿ ಖಾಸಗಿ ವಲಯದ ಕೊಡುಗೆ ₹33 ಸಾವಿರ ಕೋಟಿ ಇದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>