<p><strong>ವಿಶ್ವಸಂಸ್ಥೆ:</strong> ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದರಿಂದ ಪರಿಣಾಮಗಳು ಉಂಟಾಗುತ್ತವೆ ಎಂಬುವುದನ್ನು ಪಾಕಿಸ್ತಾನ ಒಪ್ಪಿಕೊಳ್ಳಬೇಕು ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಹೇಳಿದೆ.</p>.<p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಮಂಗಳವಾರ ಮಾತನಾಡಿದ ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಅವರು,‘ತನ್ನ ನೆರೆಯ ರಾಷ್ಟ್ರಗಳಿಂದ ನಡೆಯುವ ಭಯೋತ್ಪಾದಕ ದಾಳಿಗಳಿಂದ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕು ಭಾರತಕ್ಕೆ ಇದೆ’ ಎಂದು ಹೇಳಿದರು.</p>.<p>‘ಪಾಕಿಸ್ತಾನವು ಇಂದು ಮಾಡುತ್ತಿರುವ ಆಧಾರರಹಿತ ಹೇಳಿಕೆಗಳಿಗೆ ಉತ್ತರಿಸುವುದು ಭಾರತದ ಕರ್ತವ್ಯವಾಗಿದೆ. ಭಾರತ ಯಾವಾಗಲೂ ಸತ್ಯವನ್ನು ಸ್ಪಷ್ಟಪಡಿಸಲು ಬಯಸುತ್ತದೆ’ ಎಂದು ಹೇಳಿದರು.</p>.<p>ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ಡಾರ್, ಜಮ್ಮು ಮತ್ತು ಕಾಶ್ಮೀರ ವಿಚಾರ, ಸಿಂಧೂ ನದಿ ನೀರು ಒಪ್ಪಂದ ಕುರಿತಾಗಿ ಪ್ರಸ್ತಾಪಿಸಿದರು.</p>.<p>ಪಾಕಿಸ್ತಾನಕ್ಕೆ ತಿರುಗೇಟು ನೀಡಿದ ಪರ್ವತನೇನಿ ಅವರು, ‘ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬಳಸಿಕೊಳ್ಳುತ್ತಿರುವುದು ಮತ್ತು ಸಾವಿರಾರು ಹೊಡೆತಗಳಿಂದ ಭಾರತದಲ್ಲಿ ರಕ್ತಸ್ರಾವ ಮಾಡುವ ಸಿದ್ಧಾಂತವು ಅದರ ಪೊಳ್ಳು ಮಾತು ಮತ್ತು ವಿಶ್ವಸಂಸ್ಥೆಯ ಬಗೆಗಿನ ಅದರ ಪೊಳ್ಳು ಬದ್ಧತೆಯನ್ನು ತೋರಿಸುತ್ತದೆ’ ಎಂದು ಟೀಕಿಸಿದರು.</p>.<p>‘ಸ್ವತಂತ್ರ ಭಾರತವು ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಹೋರಾಟದೊಂದಿಗೆ ತನ್ನ ಬದುಕನ್ನು ಆರಂಭಿಸಿತು. ಪಾಕಿಸ್ತಾನವು ಹುಟ್ಟಿನಿಂದಲೇ ಭಯೋತ್ಪಾದನೆ, ಧಾರ್ಮಿಕ ಉಗ್ರವಾದ, ಭಾರತ ವಿರೋಧಿ ನಿಲುವನ್ನು ರೂಢಿಸಿಕೊಂಡಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದರಿಂದ ಪರಿಣಾಮಗಳು ಉಂಟಾಗುತ್ತವೆ ಎಂಬುವುದನ್ನು ಪಾಕಿಸ್ತಾನ ಒಪ್ಪಿಕೊಳ್ಳಬೇಕು ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಹೇಳಿದೆ.</p>.<p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಮಂಗಳವಾರ ಮಾತನಾಡಿದ ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಅವರು,‘ತನ್ನ ನೆರೆಯ ರಾಷ್ಟ್ರಗಳಿಂದ ನಡೆಯುವ ಭಯೋತ್ಪಾದಕ ದಾಳಿಗಳಿಂದ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕು ಭಾರತಕ್ಕೆ ಇದೆ’ ಎಂದು ಹೇಳಿದರು.</p>.<p>‘ಪಾಕಿಸ್ತಾನವು ಇಂದು ಮಾಡುತ್ತಿರುವ ಆಧಾರರಹಿತ ಹೇಳಿಕೆಗಳಿಗೆ ಉತ್ತರಿಸುವುದು ಭಾರತದ ಕರ್ತವ್ಯವಾಗಿದೆ. ಭಾರತ ಯಾವಾಗಲೂ ಸತ್ಯವನ್ನು ಸ್ಪಷ್ಟಪಡಿಸಲು ಬಯಸುತ್ತದೆ’ ಎಂದು ಹೇಳಿದರು.</p>.<p>ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ಡಾರ್, ಜಮ್ಮು ಮತ್ತು ಕಾಶ್ಮೀರ ವಿಚಾರ, ಸಿಂಧೂ ನದಿ ನೀರು ಒಪ್ಪಂದ ಕುರಿತಾಗಿ ಪ್ರಸ್ತಾಪಿಸಿದರು.</p>.<p>ಪಾಕಿಸ್ತಾನಕ್ಕೆ ತಿರುಗೇಟು ನೀಡಿದ ಪರ್ವತನೇನಿ ಅವರು, ‘ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬಳಸಿಕೊಳ್ಳುತ್ತಿರುವುದು ಮತ್ತು ಸಾವಿರಾರು ಹೊಡೆತಗಳಿಂದ ಭಾರತದಲ್ಲಿ ರಕ್ತಸ್ರಾವ ಮಾಡುವ ಸಿದ್ಧಾಂತವು ಅದರ ಪೊಳ್ಳು ಮಾತು ಮತ್ತು ವಿಶ್ವಸಂಸ್ಥೆಯ ಬಗೆಗಿನ ಅದರ ಪೊಳ್ಳು ಬದ್ಧತೆಯನ್ನು ತೋರಿಸುತ್ತದೆ’ ಎಂದು ಟೀಕಿಸಿದರು.</p>.<p>‘ಸ್ವತಂತ್ರ ಭಾರತವು ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಹೋರಾಟದೊಂದಿಗೆ ತನ್ನ ಬದುಕನ್ನು ಆರಂಭಿಸಿತು. ಪಾಕಿಸ್ತಾನವು ಹುಟ್ಟಿನಿಂದಲೇ ಭಯೋತ್ಪಾದನೆ, ಧಾರ್ಮಿಕ ಉಗ್ರವಾದ, ಭಾರತ ವಿರೋಧಿ ನಿಲುವನ್ನು ರೂಢಿಸಿಕೊಂಡಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>