<p><strong>ಶ್ರೀನಗರ:</strong> ಇಲ್ಲಿನ ಶಾಹ್ಪುರ್–ಕಂಡಿ ಬ್ಯಾರೇಜ್ ನಿರ್ಮಾಣ ಪೂರ್ಣಗೊಂಡಿದ್ದು, ಈ ಮೂಲಕ ರಾವಿ ನದಿಯಿಂದ ಪಾಕಿಸ್ತಾನ ಅಭಿಮುಖವಾಗಿ ನೀರಿನ ಹರಿವು ತಡೆಯಲಾಗಿದೆ. ಕಠುವಾ ಮತ್ತು ಸಾಂಬಾ ಜಿಲ್ಲೆಗಳಲ್ಲಿ 32,000 ಹೆಕ್ಟೇರ್ ಭೂಮಿ ನೀರಾವರಿ ಸೌಲಭ್ಯಕ್ಕೆ ಒಳಪಡಲಿದೆ.</p>.<p>ಶಾಹ್ಪುರ್–ಕಂಡಿ ಬ್ಯಾರೇಜ್ನ ನೀರಾವರಿ ಮತ್ತು ಜಲವಿದ್ಯುತ್ ಉತ್ಪಾದನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಈ ಕುರಿತ ವರದಿ ತಿಳಿಸಿದೆ. ಬ್ಯಾರೇಜ್ನ ನಿರ್ಮಾಣ ಕಾರ್ಯಕ್ಕೆ ಕಳೆದ ಮೂರು ದಶಕಗಳಲ್ಲಿ ಹಲವು ತೊಡಕುಗಳು ಎದುರಾಗಿದ್ದವು.</p>.<p>1995ರಲ್ಲಿ ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಶಂಕುಸ್ಥಾಪನೆ ನೆರವೇರಿಸಿದ್ದರು. ಬ್ಯಾರೇಜ್ ನಿರ್ಮಾಣಕ್ಕೆ ಜಮ್ಮು ಕಾಶ್ಮೀರ ಹಾಗೂ ಪಂಜಾಬ್ ಸರ್ಕಾರಗಳ ನಡುವೆ ವಿವಾದವಿತ್ತು. 2018ರ ಡಿಸೆಂಬರ್ನಲ್ಲಿ ಕೇಂದ್ರದ ಸಮ್ಮತಿಯೊಂದಿಗೆ ನಿರ್ಮಾಣ ಪುನರಾರಂಭವಾಗಿತ್ತು.</p>.<p>ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಇಂಗ್ಲಿಷ್ ದೈನಿಕ ‘ಡೈಲಿ ಎಕ್ಸೆಲ್ಸಿಯರ್’ ವರದಿ ಮಾಡಿರುವಂತೆ, ಬ್ಯಾರೇಜ್ ನಿರ್ಮಾಣ ಕಾರ್ಯ ಈಗ ಪೂರ್ಣಗೊಳ್ಳುವ ಮೂಲಕ ಶಾಹ್ಪುರ್ ಭಾಗದಿಂದ ನೀರು ಹರಿಯುವಿಕೆಯು ತಗ್ಗಿದೆ. </p>.<p>1960ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಆಗಿದ್ದ ಇಂಡಸ್ ಜಲ ಒಪ್ಪಂದದ (ಐಡಬ್ಲ್ಯೂಟಿ) ಪ್ರಕಾರ ರಾವಿ, ಸಟ್ಲೇಜ್, ಬಿಯಾಸ್ ನದಿಗಳ ನೀರಿನ ಮೇಲೆ ಭಾರತಕ್ಕೆ ವಿಶೇಷ ಹಕ್ಕಿದೆ. ಇಂಡಸ್. ಝೆಲುಂ, ಚೆನಾಬ್ ನದಿಗಳ ನೀರಿನ ಮೇಲೆ ಪಾಕಿಸ್ತಾನಕ್ಕೆ ಹಕ್ಕಿದೆ.</p>.<p>ಈ ಒಪ್ಪಂದದ ಅನುಸಾರ, ಭಾರತವು ರಾವಿ ನದಿ ನೀರಿನ ಪೂರ್ಣ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ರಾವಿ ನದಿಯ ನೀರು ಹಳೆಯ ಲಖಾನ್ಪುರ್ ಅಣೆಕಟ್ಟಿನ ಮೂಲಕ ಪಾಕಿಸ್ತಾನ ಅಭಿಮುಖವಾಗಿ ಹರಿದು ಹೋಗುತ್ತಿತ್ತು. </p>.<p>ಬ್ಯಾರೇಜ್ ನಿರ್ಮಾಣ ಪೂರ್ಣಗೊಂಡಿರುವುದರಿಂದ ನೀರಾವರಿ ಜೊತೆಗೆ 206 ಮೆಗಾವಾಟ್ ವಿದ್ಯುತ್ ಉತ್ಪಾದನೆಗೂ ಸಹಕಾರಿಯಾಗಲಿದೆ. ಉತ್ಪಾದನೆಯಾಗುವ ವಿದ್ಯುತ್ನ ಹೆಚ್ಚಿನ ಅನುಕೂಲ ಪಂಜಾಬ್ಗೆ ಸಿಗಲಿದೆ ಎಂದು ವರದಿಯು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಇಲ್ಲಿನ ಶಾಹ್ಪುರ್–ಕಂಡಿ ಬ್ಯಾರೇಜ್ ನಿರ್ಮಾಣ ಪೂರ್ಣಗೊಂಡಿದ್ದು, ಈ ಮೂಲಕ ರಾವಿ ನದಿಯಿಂದ ಪಾಕಿಸ್ತಾನ ಅಭಿಮುಖವಾಗಿ ನೀರಿನ ಹರಿವು ತಡೆಯಲಾಗಿದೆ. ಕಠುವಾ ಮತ್ತು ಸಾಂಬಾ ಜಿಲ್ಲೆಗಳಲ್ಲಿ 32,000 ಹೆಕ್ಟೇರ್ ಭೂಮಿ ನೀರಾವರಿ ಸೌಲಭ್ಯಕ್ಕೆ ಒಳಪಡಲಿದೆ.</p>.<p>ಶಾಹ್ಪುರ್–ಕಂಡಿ ಬ್ಯಾರೇಜ್ನ ನೀರಾವರಿ ಮತ್ತು ಜಲವಿದ್ಯುತ್ ಉತ್ಪಾದನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಈ ಕುರಿತ ವರದಿ ತಿಳಿಸಿದೆ. ಬ್ಯಾರೇಜ್ನ ನಿರ್ಮಾಣ ಕಾರ್ಯಕ್ಕೆ ಕಳೆದ ಮೂರು ದಶಕಗಳಲ್ಲಿ ಹಲವು ತೊಡಕುಗಳು ಎದುರಾಗಿದ್ದವು.</p>.<p>1995ರಲ್ಲಿ ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಶಂಕುಸ್ಥಾಪನೆ ನೆರವೇರಿಸಿದ್ದರು. ಬ್ಯಾರೇಜ್ ನಿರ್ಮಾಣಕ್ಕೆ ಜಮ್ಮು ಕಾಶ್ಮೀರ ಹಾಗೂ ಪಂಜಾಬ್ ಸರ್ಕಾರಗಳ ನಡುವೆ ವಿವಾದವಿತ್ತು. 2018ರ ಡಿಸೆಂಬರ್ನಲ್ಲಿ ಕೇಂದ್ರದ ಸಮ್ಮತಿಯೊಂದಿಗೆ ನಿರ್ಮಾಣ ಪುನರಾರಂಭವಾಗಿತ್ತು.</p>.<p>ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಇಂಗ್ಲಿಷ್ ದೈನಿಕ ‘ಡೈಲಿ ಎಕ್ಸೆಲ್ಸಿಯರ್’ ವರದಿ ಮಾಡಿರುವಂತೆ, ಬ್ಯಾರೇಜ್ ನಿರ್ಮಾಣ ಕಾರ್ಯ ಈಗ ಪೂರ್ಣಗೊಳ್ಳುವ ಮೂಲಕ ಶಾಹ್ಪುರ್ ಭಾಗದಿಂದ ನೀರು ಹರಿಯುವಿಕೆಯು ತಗ್ಗಿದೆ. </p>.<p>1960ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಆಗಿದ್ದ ಇಂಡಸ್ ಜಲ ಒಪ್ಪಂದದ (ಐಡಬ್ಲ್ಯೂಟಿ) ಪ್ರಕಾರ ರಾವಿ, ಸಟ್ಲೇಜ್, ಬಿಯಾಸ್ ನದಿಗಳ ನೀರಿನ ಮೇಲೆ ಭಾರತಕ್ಕೆ ವಿಶೇಷ ಹಕ್ಕಿದೆ. ಇಂಡಸ್. ಝೆಲುಂ, ಚೆನಾಬ್ ನದಿಗಳ ನೀರಿನ ಮೇಲೆ ಪಾಕಿಸ್ತಾನಕ್ಕೆ ಹಕ್ಕಿದೆ.</p>.<p>ಈ ಒಪ್ಪಂದದ ಅನುಸಾರ, ಭಾರತವು ರಾವಿ ನದಿ ನೀರಿನ ಪೂರ್ಣ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ರಾವಿ ನದಿಯ ನೀರು ಹಳೆಯ ಲಖಾನ್ಪುರ್ ಅಣೆಕಟ್ಟಿನ ಮೂಲಕ ಪಾಕಿಸ್ತಾನ ಅಭಿಮುಖವಾಗಿ ಹರಿದು ಹೋಗುತ್ತಿತ್ತು. </p>.<p>ಬ್ಯಾರೇಜ್ ನಿರ್ಮಾಣ ಪೂರ್ಣಗೊಂಡಿರುವುದರಿಂದ ನೀರಾವರಿ ಜೊತೆಗೆ 206 ಮೆಗಾವಾಟ್ ವಿದ್ಯುತ್ ಉತ್ಪಾದನೆಗೂ ಸಹಕಾರಿಯಾಗಲಿದೆ. ಉತ್ಪಾದನೆಯಾಗುವ ವಿದ್ಯುತ್ನ ಹೆಚ್ಚಿನ ಅನುಕೂಲ ಪಂಜಾಬ್ಗೆ ಸಿಗಲಿದೆ ಎಂದು ವರದಿಯು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>