<p><strong>ನವದೆಹಲಿ</strong>: ಚೀನಾ ಹಾಗೂ ಪಾಕಿಸ್ತಾನ ಈಚೆಗೆ ಹೊರಡಿಸಿದ್ದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಉಲ್ಲೇಖ ಮಾಡಿರುವುದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿದ್ದು, ಜಮ್ಮು ಮತ್ತು ಕಾಶ್ಮೀರವು ತನ್ನ ಅವಿಭಾಜ್ಯ ಅಂಗ ಎಂದು ಪ್ರತಿಪಾದಿಸಿದೆ.</p>.<p>ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮೂಲಕ ಸಾಗುವ ಚೀನಾ– ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ವಿಷಯವನ್ನು ಜಂಟಿ ಹೇಳಿಕೆಯಲ್ಲಿ ಪ್ರಸ್ತಾಪಿಸಿರುವುದನ್ನೂ ಭಾರತ ಟೀಕಿಸಿದೆ.</p>.<p>ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಚೀನಾ ಪ್ರಧಾನಿ ಲಿ ಕ್ವಿಯಾಂಗ್ ನಡುವಣ ಮಾತುಕತೆಯ ಬಳಿಕ ಉಭಯ ದೇಶಗಳು ಜೂನ್ 7ರಂದು ಬೀಜಿಂಗ್ನಲ್ಲಿ ಜಂಟಿ ಹೇಳಿಕೆ ಹೊರಡಿಸಿದ್ದವು.</p>.<p>‘ಚೀನಾ ಮತ್ತು ಪಾಕಿಸ್ತಾನದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಅನಗತ್ಯವಾಗಿ ಪ್ರಸ್ತಾಪ ಮಾಡಿರುವುದು ನಾವು ಗಮನಿಸಿದ್ದೇವೆ. ಅದನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಗುರುವಾರ ಹೇಳಿದ್ದಾರೆ.</p>.<p>‘ಈ ವಿಷಯದಲ್ಲಿ ನಮ್ಮ ನಿಲುವು ದೃಢವಾಗಿದೆ ಮತ್ತು ಅದು ಸಂಬಂಧಪಟ್ಟವರಿಗೂ ಸ್ಪಷ್ಟವಾಗಿ ತಿಳಿದಿದೆ. ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಇಂದು ಮತ್ತು ಮುಂದೆಯೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿವೆ’ ಎಂದಿದ್ದಾರೆ.</p>.<p>‘ಈ ವಿಚಾರದ ಬಗ್ಗೆ ಮಾತನಾಡುವ ಅಧಿಕಾರ ಬೇರೆ ಯಾವುದೇ ದೇಶಕ್ಕೂ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>‘ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ವಿಶ್ವಸಂಸ್ಥೆಯ ಸನ್ನದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರಸ್ತುತ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳ ಅನ್ವಯ ಬಗೆಹರಿಸಬೇಕು’ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚೀನಾ ಹಾಗೂ ಪಾಕಿಸ್ತಾನ ಈಚೆಗೆ ಹೊರಡಿಸಿದ್ದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಉಲ್ಲೇಖ ಮಾಡಿರುವುದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿದ್ದು, ಜಮ್ಮು ಮತ್ತು ಕಾಶ್ಮೀರವು ತನ್ನ ಅವಿಭಾಜ್ಯ ಅಂಗ ಎಂದು ಪ್ರತಿಪಾದಿಸಿದೆ.</p>.<p>ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮೂಲಕ ಸಾಗುವ ಚೀನಾ– ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ವಿಷಯವನ್ನು ಜಂಟಿ ಹೇಳಿಕೆಯಲ್ಲಿ ಪ್ರಸ್ತಾಪಿಸಿರುವುದನ್ನೂ ಭಾರತ ಟೀಕಿಸಿದೆ.</p>.<p>ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಚೀನಾ ಪ್ರಧಾನಿ ಲಿ ಕ್ವಿಯಾಂಗ್ ನಡುವಣ ಮಾತುಕತೆಯ ಬಳಿಕ ಉಭಯ ದೇಶಗಳು ಜೂನ್ 7ರಂದು ಬೀಜಿಂಗ್ನಲ್ಲಿ ಜಂಟಿ ಹೇಳಿಕೆ ಹೊರಡಿಸಿದ್ದವು.</p>.<p>‘ಚೀನಾ ಮತ್ತು ಪಾಕಿಸ್ತಾನದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಅನಗತ್ಯವಾಗಿ ಪ್ರಸ್ತಾಪ ಮಾಡಿರುವುದು ನಾವು ಗಮನಿಸಿದ್ದೇವೆ. ಅದನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಗುರುವಾರ ಹೇಳಿದ್ದಾರೆ.</p>.<p>‘ಈ ವಿಷಯದಲ್ಲಿ ನಮ್ಮ ನಿಲುವು ದೃಢವಾಗಿದೆ ಮತ್ತು ಅದು ಸಂಬಂಧಪಟ್ಟವರಿಗೂ ಸ್ಪಷ್ಟವಾಗಿ ತಿಳಿದಿದೆ. ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಇಂದು ಮತ್ತು ಮುಂದೆಯೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿವೆ’ ಎಂದಿದ್ದಾರೆ.</p>.<p>‘ಈ ವಿಚಾರದ ಬಗ್ಗೆ ಮಾತನಾಡುವ ಅಧಿಕಾರ ಬೇರೆ ಯಾವುದೇ ದೇಶಕ್ಕೂ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>‘ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ವಿಶ್ವಸಂಸ್ಥೆಯ ಸನ್ನದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರಸ್ತುತ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳ ಅನ್ವಯ ಬಗೆಹರಿಸಬೇಕು’ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>