<p><strong>ನವದೆಹಲಿ</strong>: ಬಾಂಗ್ಲಾದೇಶದ ಪರಿಸ್ಥಿತಿ ಇನ್ನಷ್ಟು ಪ್ರಕ್ಷುಬ್ಧಗೊಳ್ಳುವುದಕ್ಕೆ ಶೇಖ್ ಹಸೀನಾ ನೇತೃತ್ವದ ಸರ್ಕಾರವೇ ಕಾರಣ ಎಂದು ಕೇಂದ್ರ ಸರ್ಕಾರವು ಸೂಕ್ಷ್ಮವಾಗಿ ತಿಳಿಸಿದೆ.</p>.<p>ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಜುಲೈ 21ರಂದು ನೀಡಿದ ತೀರ್ಪಿನ ನಂತರದ ‘ತೀರ್ಮಾನಗಳು ಹಾಗೂ ಕ್ರಮಗಳು’ ಪರಿಸ್ಥಿತಿಯನ್ನು ವಿಷಮಗೊಳಿಸಿದವು ಎನ್ನುವ ಮೂಲಕ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಹಸೀನಾ ನೇತೃತ್ವದ ಸರ್ಕಾರವನ್ನು ನಾಜೂಕಾಗಿ ಟೀಕಿಸಿದರು.</p>.<p>‘ಹಿಂಸಾಚಾರ ಹೆಚ್ಚಾಗುತ್ತಿತ್ತು. ಸಾರ್ವಜನಿಕ ಕಟ್ಟಡಗಳ ಮೇಲೆ ಹಾಗೂ ಮೂಲಸೌಕರ್ಯಗಳ ಮೇಲೆ ದಾಳಿಗಳು ನಡೆದವು. ಜುಲೈ ತಿಂಗಳಾದ್ಯಂತ ಹಿಂಸಾಚಾರ ನಡೆಯಿತು. ತಾಳ್ಮೆಯಿಂದ ವರ್ತಿಸುವಂತೆ, ಮಾತುಕತೆಯ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸುವಂತೆ ನಾವು ಈ ಅವಧಿಯುದ್ದಕ್ಕೂ ಮತ್ತೆ ಮತ್ತೆ ಕಿವಿಮಾತು ಹೇಳಿದ್ದೆವು. ನಾವು ಸಂಪರ್ಕದಲ್ಲಿದ್ದ ಕೆಲವು ರಾಜಕೀಯ ವೇದಿಕೆಗಳ ಮೂಲಕ ಇದೇ ಬಗೆಯ ಮನವಿಗಳನ್ನು ಮಾಡಿದ್ದೆವು’ ಎಂದು ಜೈಶಂಕರ್ ಅವರು ಸಂಸತ್ತಿಗೆ ತಿಳಿಸಿದ್ದಾರೆ.</p>.<p>ಪ್ರತಿಭಟನಕಾರರನ್ನು ಸೂಕ್ಷ್ಮವಾಗಿ ನಿಭಾಯಿಸುವಂತೆ, ಪ್ರತಿಭಟನೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸುವಂತೆ ಕೇಂದ್ರ ಸರ್ಕಾರವು ಹಸೀನಾ ಅವರಿಗೆ ಸಲಹೆ ನೀಡಿತ್ತು ಎಂಬುದನ್ನು ಜೈಶಂಕರ್ ಅವರ ಮಾತುಗಳು ಬಹಿರಂಗಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಾಂಗ್ಲಾದೇಶದ ಪರಿಸ್ಥಿತಿ ಇನ್ನಷ್ಟು ಪ್ರಕ್ಷುಬ್ಧಗೊಳ್ಳುವುದಕ್ಕೆ ಶೇಖ್ ಹಸೀನಾ ನೇತೃತ್ವದ ಸರ್ಕಾರವೇ ಕಾರಣ ಎಂದು ಕೇಂದ್ರ ಸರ್ಕಾರವು ಸೂಕ್ಷ್ಮವಾಗಿ ತಿಳಿಸಿದೆ.</p>.<p>ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಜುಲೈ 21ರಂದು ನೀಡಿದ ತೀರ್ಪಿನ ನಂತರದ ‘ತೀರ್ಮಾನಗಳು ಹಾಗೂ ಕ್ರಮಗಳು’ ಪರಿಸ್ಥಿತಿಯನ್ನು ವಿಷಮಗೊಳಿಸಿದವು ಎನ್ನುವ ಮೂಲಕ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಹಸೀನಾ ನೇತೃತ್ವದ ಸರ್ಕಾರವನ್ನು ನಾಜೂಕಾಗಿ ಟೀಕಿಸಿದರು.</p>.<p>‘ಹಿಂಸಾಚಾರ ಹೆಚ್ಚಾಗುತ್ತಿತ್ತು. ಸಾರ್ವಜನಿಕ ಕಟ್ಟಡಗಳ ಮೇಲೆ ಹಾಗೂ ಮೂಲಸೌಕರ್ಯಗಳ ಮೇಲೆ ದಾಳಿಗಳು ನಡೆದವು. ಜುಲೈ ತಿಂಗಳಾದ್ಯಂತ ಹಿಂಸಾಚಾರ ನಡೆಯಿತು. ತಾಳ್ಮೆಯಿಂದ ವರ್ತಿಸುವಂತೆ, ಮಾತುಕತೆಯ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸುವಂತೆ ನಾವು ಈ ಅವಧಿಯುದ್ದಕ್ಕೂ ಮತ್ತೆ ಮತ್ತೆ ಕಿವಿಮಾತು ಹೇಳಿದ್ದೆವು. ನಾವು ಸಂಪರ್ಕದಲ್ಲಿದ್ದ ಕೆಲವು ರಾಜಕೀಯ ವೇದಿಕೆಗಳ ಮೂಲಕ ಇದೇ ಬಗೆಯ ಮನವಿಗಳನ್ನು ಮಾಡಿದ್ದೆವು’ ಎಂದು ಜೈಶಂಕರ್ ಅವರು ಸಂಸತ್ತಿಗೆ ತಿಳಿಸಿದ್ದಾರೆ.</p>.<p>ಪ್ರತಿಭಟನಕಾರರನ್ನು ಸೂಕ್ಷ್ಮವಾಗಿ ನಿಭಾಯಿಸುವಂತೆ, ಪ್ರತಿಭಟನೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸುವಂತೆ ಕೇಂದ್ರ ಸರ್ಕಾರವು ಹಸೀನಾ ಅವರಿಗೆ ಸಲಹೆ ನೀಡಿತ್ತು ಎಂಬುದನ್ನು ಜೈಶಂಕರ್ ಅವರ ಮಾತುಗಳು ಬಹಿರಂಗಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>