<p><strong>ಬಾಲೇಶ್ವರ(ಒಡಿಶಾ)</strong>: ‘ದೇಶೀಯ ತಂತ್ರಜ್ಞಾನದ ಕ್ರೂಸ್ ಕ್ಷಿಪಣಿ’ಯ(ಐಟಿಸಿಎಂ) ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾದ ಕರಾವಳಿಯಲ್ಲಿ ಗುರುವಾರ ಯಶಸ್ವಿಯಾಗಿ ನೆರವೇರಿಸಲಾಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆ (ಡಿಆರ್ಡಿಒ) ಗುರುವಾರ ತಿಳಿಸಿದೆ.</p>.<p>‘ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ಈ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು. ನಿರೀಕ್ಷೆಯಂತೆ, ಕ್ಷಿಪಣಿಯ ಎಲ್ಲ ವ್ಯವಸ್ಥೆಗಳ ಕಾರ್ಯವು ಸಮರ್ಪಕವಾಗಿ ಇರುವುದು ಕಂಡುಬಂತು’ ಎಂದು ತಿಳಿಸಿದೆ.</p>.<p>‘ಬೆಂಗಳೂರು ಮೂಲದ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್ಮೆಂಟ್(ಜಿಟಿಆರ್ಇ) ಅಭಿವೃದ್ಧಿಪಡಿಸಿರುವ ಪ್ರೊಪಲ್ಷನ್ ವ್ಯವಸ್ಥೆಯನ್ನು ಈ ಕ್ಷಿಪಣಿಯಲ್ಲಿ ಅಳವಡಿಸಲಾಗಿದೆ. ಪ್ರೊಪಲ್ಷನ್ ವ್ಯವಸ್ಥೆಯ ಕಾರ್ಯವನ್ನು ಸಹ ಈ ಪರೀಕ್ಷೆ ದೃಢೀಕರಿಸಿದೆ’ ಎಂದು ಡಿಆರ್ಡಿಒ ತಿಳಿಸಿದೆ.</p>.<p>ಇಡೀ ಕ್ಷಿಪಣಿ ವ್ಯವಸ್ಥೆಯನ್ನು ಬೆಂಗಳೂರಿನಲ್ಲಿರುವ ಡಿಆರ್ಡಿಒ ಅಂಗಸಂಸ್ಥೆಯಾದ ಏರೋನಾಟಿಕಲ್ ಡೆವಲೆಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ (ಎಡಿಇ) ಅಭಿವೃದ್ಧಿಪಡಿಸಿದೆ. ಇತರ ಪ್ರಯೋಗಾಲಯಗಳು ಮತ್ತು ಉದ್ದಿಮೆಗಳು ಸಹ ಈ ಕಾರ್ಯದಲ್ಲಿ ಕೈಜೋಡಿಸಿವೆ.</p>.<p>‘ರಾಡಾರ್, ಇಒಟಿಎಸ್ ಹಾಗೂ ಟೆಲಿಮೆಟ್ರಿಯಂತಹ ಸಂವೇದಕಗಳ ಮೂಲಕ ಈ ಕ್ಷಿಪಣಿ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಲಾಗಿತ್ತು. ಈ ಸಂವೇದಕಗಳಲ್ಲದೇ, ಸುಖೋಯ್–30–ಎಂಕೆಐ ಯುದ್ಧವಿಮಾನದ ಮೂಲಕವೂ ಮೇಲ್ವಿಚಾರಣೆ ನಡೆಸಲಾಯಿತು’ ಎಂದು ತಿಳಿಸಿದೆ. </p>.<p>ರಾಜನಾಥ್ ಸಿಂಗ್ ಅಭಿನಂದನೆ: ಐಟಿಸಿಎಂಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿರುವುದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಆರ್ಡಿಒ ಅನ್ನು ಅಭಿನಂದಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಲೇಶ್ವರ(ಒಡಿಶಾ)</strong>: ‘ದೇಶೀಯ ತಂತ್ರಜ್ಞಾನದ ಕ್ರೂಸ್ ಕ್ಷಿಪಣಿ’ಯ(ಐಟಿಸಿಎಂ) ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾದ ಕರಾವಳಿಯಲ್ಲಿ ಗುರುವಾರ ಯಶಸ್ವಿಯಾಗಿ ನೆರವೇರಿಸಲಾಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆ (ಡಿಆರ್ಡಿಒ) ಗುರುವಾರ ತಿಳಿಸಿದೆ.</p>.<p>‘ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ಈ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು. ನಿರೀಕ್ಷೆಯಂತೆ, ಕ್ಷಿಪಣಿಯ ಎಲ್ಲ ವ್ಯವಸ್ಥೆಗಳ ಕಾರ್ಯವು ಸಮರ್ಪಕವಾಗಿ ಇರುವುದು ಕಂಡುಬಂತು’ ಎಂದು ತಿಳಿಸಿದೆ.</p>.<p>‘ಬೆಂಗಳೂರು ಮೂಲದ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್ಮೆಂಟ್(ಜಿಟಿಆರ್ಇ) ಅಭಿವೃದ್ಧಿಪಡಿಸಿರುವ ಪ್ರೊಪಲ್ಷನ್ ವ್ಯವಸ್ಥೆಯನ್ನು ಈ ಕ್ಷಿಪಣಿಯಲ್ಲಿ ಅಳವಡಿಸಲಾಗಿದೆ. ಪ್ರೊಪಲ್ಷನ್ ವ್ಯವಸ್ಥೆಯ ಕಾರ್ಯವನ್ನು ಸಹ ಈ ಪರೀಕ್ಷೆ ದೃಢೀಕರಿಸಿದೆ’ ಎಂದು ಡಿಆರ್ಡಿಒ ತಿಳಿಸಿದೆ.</p>.<p>ಇಡೀ ಕ್ಷಿಪಣಿ ವ್ಯವಸ್ಥೆಯನ್ನು ಬೆಂಗಳೂರಿನಲ್ಲಿರುವ ಡಿಆರ್ಡಿಒ ಅಂಗಸಂಸ್ಥೆಯಾದ ಏರೋನಾಟಿಕಲ್ ಡೆವಲೆಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ (ಎಡಿಇ) ಅಭಿವೃದ್ಧಿಪಡಿಸಿದೆ. ಇತರ ಪ್ರಯೋಗಾಲಯಗಳು ಮತ್ತು ಉದ್ದಿಮೆಗಳು ಸಹ ಈ ಕಾರ್ಯದಲ್ಲಿ ಕೈಜೋಡಿಸಿವೆ.</p>.<p>‘ರಾಡಾರ್, ಇಒಟಿಎಸ್ ಹಾಗೂ ಟೆಲಿಮೆಟ್ರಿಯಂತಹ ಸಂವೇದಕಗಳ ಮೂಲಕ ಈ ಕ್ಷಿಪಣಿ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಲಾಗಿತ್ತು. ಈ ಸಂವೇದಕಗಳಲ್ಲದೇ, ಸುಖೋಯ್–30–ಎಂಕೆಐ ಯುದ್ಧವಿಮಾನದ ಮೂಲಕವೂ ಮೇಲ್ವಿಚಾರಣೆ ನಡೆಸಲಾಯಿತು’ ಎಂದು ತಿಳಿಸಿದೆ. </p>.<p>ರಾಜನಾಥ್ ಸಿಂಗ್ ಅಭಿನಂದನೆ: ಐಟಿಸಿಎಂಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿರುವುದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಆರ್ಡಿಒ ಅನ್ನು ಅಭಿನಂದಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>