<p><strong>ನವದೆಹಲಿ:</strong> ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡುವ ಪ್ರಕ್ರಿಯೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತ ರದ್ದುಪಡಿಸಿದೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಕೃತ್ಯಕ್ಕೆ ಪ್ರತಿಕ್ರಿಯಾತ್ಮಕ ಕ್ರಮವಾಗಿ ಈ ನಿಲುವು ತಳೆದಿದೆ.</p>.<p>ಭಾರತ ಸದ್ಯ ಪಾಕಿಸ್ತಾನಿ ಪ್ರಜೆಗಳಿಗೆ ನೀಡಿರುವ ವೀಸಾಗಳ ಅವಧಿಯು ಏಪ್ರಿಲ್ 27ರಿಂದ ಜಾರಿಗೆ ಬರುವಂತೆ ಮುಕ್ತಾಯವಾಗಲಿದೆ. ವೈದ್ಯಕೀಯ ವೀಸಾ ಏ. 29ರವರೆಗೆ ಮಾತ್ರ ಊರ್ಜಿತವಾಗಿರಲಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಪ್ರಕಟಿಸಿತು. </p>.<p>ವೀಸಾದ ಅವಧಿ ಮುಗಿಯುವುದರ ಒಳಗೆ ಸದ್ಯ ಭಾರತದಲ್ಲಿ ನೆಲೆಸಿರುವ ಎಲ್ಲ ಪಾಕಿಸ್ತಾನಿಯರು ದೇಶವನ್ನು ತೊರೆಯಬೇಕು ಎಂದು ಭಾರತ ತಾಕೀತು ಮಾಡಿದೆ.</p>.<p>ಇದೇ ವೇಳೆ ಭಾರತೀಯರು ನೆರೆಯ ಪಾಕಿಸ್ತಾನಕ್ಕೆ ಹೋಗುವುದನ್ನು ಕೈಬಿಡಬೇಕು. ಅಲ್ಲದೆ, ಈಗಾಗಲೇ ಪಾಕಿಸ್ತಾನಕ್ಕೆ ಹೋಗಿರುವವರು ಆದಷ್ಟು ತ್ವರಿತಗತಿಯಲ್ಲಿ ದೇಶಕ್ಕೆ ಮರಳಬೇಕು ಎಂದು ಸಲಹೆ ಮಾಡಿದೆ.</p>.<p>ಉಗ್ರರ ದಾಳಿ ಕೃತ್ಯಕ್ಕೆ ಪಾಕಿಸ್ತಾನದ ನೇರ ಸಹಕಾರವಿದೆ ಎಂದು ಪ್ರತಿಪಾದಿಸಿರುವ ಭಾರತ, ಪ್ರತಿಕ್ರಿಯೆಯಾಗಿ ಬುಧವಾರ ಐದು ಕಠಿಣ ಕ್ರಮಗಳನ್ನು ಪ್ರಕಟಿಸಿತ್ತು. ವಾಘಾ ಗಡಿ ಬಂದ್, ಸಿಂಧೂ ನದಿ ನೀರಿನ ಹಂಚಿಕೆ ಒಪ್ಪಂದ ಅಮಾನತು ಇದರಲ್ಲಿ ಸೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡುವ ಪ್ರಕ್ರಿಯೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತ ರದ್ದುಪಡಿಸಿದೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಕೃತ್ಯಕ್ಕೆ ಪ್ರತಿಕ್ರಿಯಾತ್ಮಕ ಕ್ರಮವಾಗಿ ಈ ನಿಲುವು ತಳೆದಿದೆ.</p>.<p>ಭಾರತ ಸದ್ಯ ಪಾಕಿಸ್ತಾನಿ ಪ್ರಜೆಗಳಿಗೆ ನೀಡಿರುವ ವೀಸಾಗಳ ಅವಧಿಯು ಏಪ್ರಿಲ್ 27ರಿಂದ ಜಾರಿಗೆ ಬರುವಂತೆ ಮುಕ್ತಾಯವಾಗಲಿದೆ. ವೈದ್ಯಕೀಯ ವೀಸಾ ಏ. 29ರವರೆಗೆ ಮಾತ್ರ ಊರ್ಜಿತವಾಗಿರಲಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಪ್ರಕಟಿಸಿತು. </p>.<p>ವೀಸಾದ ಅವಧಿ ಮುಗಿಯುವುದರ ಒಳಗೆ ಸದ್ಯ ಭಾರತದಲ್ಲಿ ನೆಲೆಸಿರುವ ಎಲ್ಲ ಪಾಕಿಸ್ತಾನಿಯರು ದೇಶವನ್ನು ತೊರೆಯಬೇಕು ಎಂದು ಭಾರತ ತಾಕೀತು ಮಾಡಿದೆ.</p>.<p>ಇದೇ ವೇಳೆ ಭಾರತೀಯರು ನೆರೆಯ ಪಾಕಿಸ್ತಾನಕ್ಕೆ ಹೋಗುವುದನ್ನು ಕೈಬಿಡಬೇಕು. ಅಲ್ಲದೆ, ಈಗಾಗಲೇ ಪಾಕಿಸ್ತಾನಕ್ಕೆ ಹೋಗಿರುವವರು ಆದಷ್ಟು ತ್ವರಿತಗತಿಯಲ್ಲಿ ದೇಶಕ್ಕೆ ಮರಳಬೇಕು ಎಂದು ಸಲಹೆ ಮಾಡಿದೆ.</p>.<p>ಉಗ್ರರ ದಾಳಿ ಕೃತ್ಯಕ್ಕೆ ಪಾಕಿಸ್ತಾನದ ನೇರ ಸಹಕಾರವಿದೆ ಎಂದು ಪ್ರತಿಪಾದಿಸಿರುವ ಭಾರತ, ಪ್ರತಿಕ್ರಿಯೆಯಾಗಿ ಬುಧವಾರ ಐದು ಕಠಿಣ ಕ್ರಮಗಳನ್ನು ಪ್ರಕಟಿಸಿತ್ತು. ವಾಘಾ ಗಡಿ ಬಂದ್, ಸಿಂಧೂ ನದಿ ನೀರಿನ ಹಂಚಿಕೆ ಒಪ್ಪಂದ ಅಮಾನತು ಇದರಲ್ಲಿ ಸೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>