ನವದೆಹಲಿ: ‘ಇಂಡಿಯಾ‘ ಎಂಬ ಹೆಸರನ್ನು ‘ಭಾರತ್‘ ಎಂದು ಬಳಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪರ ಹಾಗೂ ವಿರೋಧದ ಚರ್ಚೆಗಳು ನಡೆದ ಬೆನ್ನಲ್ಲೇ, ಇದೇ ವಿಷಯವಾಗಿ ಹಲವು ವರ್ಷಗಳ ಹಿಂದೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ವಿಡಿಯೊ ಒಂದು ಈಗ ಎಲ್ಲೆಡೆ ಹರಿದಾಡುತ್ತಿದೆ.
ಜಿ20 ಶೃಂಗದಲ್ಲಿ ಪಾಲ್ಗೊಳ್ಳಲಿರುವ ವಿಶ್ವದ ಪ್ರಮುಖ ನಾಯಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೋಜನಕೂಟಕ್ಕೆ ಆಹ್ವಾನಿಸಿದ್ದಾರೆ. ಅವರ ಆಹ್ವಾನ ಪತ್ರಿಕೆ ವಾಡಿಕೆಯಂತಿರದೆ, ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ನಮೂದಿಸಿರುವುದು ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರ ವಾಕ್ ಸಮರಕ್ಕೆ ಕಾರಣವಾಗಿದೆ.