ದೇಗುಲ ಟ್ರಸ್ಟ್ನ ಅಧ್ಯಕ್ಷ, ಹಿರಿಯ ಮುಖಂಡ ಹಿಮ೦ತ ಬಿಸ್ವ ಶರ್ಮ ನೇತೃತ್ವದ ಸಮಿತಿಯು ಪ್ರತಿಷ್ಠಾಪನಾ ಕಾರ್ಯ ನೆರವೇರಿಸಲಿದೆ. ಶತಚಂಡಿ ಹವನ, ಹತ್ತು ಲಕ್ಷ ಮೃತ್ಯುಂಜಯ ಮಂತ್ರ ಜಪ, ಸಹಸ್ರ ಕಲಶಾಭಿಷೇಕ, ಮಹಾರುದ್ರ ಮತ್ತು ಚತುರ್ವೇದ ಪಾರಾಯಣ ಇತ್ಯಾದಿಗಳು ನೆರವೇರಲಿದೆ. ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಡಾ. ಕೆ.ಎನ್. ನರಸಿಂಹ ಅಡಿಗ ಅವರು ಶತಚಂಡಿ ಹವನ ನೆರವೇರಿಸಲಿದ್ದಾರೆ. ತಿರುವನಂತಪುರದ ಅನಂತಶಯನ ದೇವಾಲಯದ ಪ್ರಧಾನ ಅರ್ಚಕರ ಪುತ್ರ ವಿನೀತ ಪಟ್ಟೇರಿ ಅವರು ಪ್ರತಿಷ್ಠಾಂಗ ಕರ್ಮಗಳನ್ನು ನೆರವೇರಿಸುತ್ತಾರೆ.