<p><strong>ನವದೆಹಲಿ</strong>: ಎಲ್–ನಿನೊ ಪರಿಣಾಮದಿಂದ ಈ ಬಾರಿ ಬೇಸಿಗೆಯ ಆರಂಭವೇ ಹೆಚ್ಚು ಸೆಕೆಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ. </p><p>ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಉತ್ತರ ಒಳನಾಡು, ಮಹಾರಾಷ್ಟ್ರ ಮತ್ತು ಒಡಿಶಾದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ತಾಪಮಾನ ಹೆಚ್ಚಿರಲಿದೆ ಎಂದು ಇಲಾಖೆ ಹೇಳಿದೆ.</p><p>ಮಾರ್ಚ್ನಲ್ಲಿ ಸೆಕೆಯ ಜತೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ. </p><p>ಉತ್ತರ ಮತ್ತು ಮಧ್ಯ ಭಾರತದಲ್ಲಿ ಮಾರ್ಚ್ನಲ್ಲಿ ಬಿಸಿಗಾಳಿ ಪರಿಸ್ಥಿತಿ ಇರುವ ಲಕ್ಷಣಗಳು ಕಡಿಮೆ ಇದೆ. </p><p>ಮಾರ್ಚ್ನಿಂದ ಮೇ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೊಹಪಾತ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p><p>ಎಲ್–ನಿನೊ ಪರಿಣಾಮದಿಂದ ಮಧ್ಯ ಪೆಸಿಫಿಕ್ ಸಾಗರದಲ್ಲಿ ನೀರಿನ ಮೇಲ್ಮೈ ತಾಪಮಾನ ಬೇಸಿಗೆ ಮುಗಿಯುವವರೆಗೂ ಇರಲಿದೆ. ಬಳಿಕ ತಟಸ್ತವಾಗಲಿದೆ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎಲ್–ನಿನೊ ಪರಿಣಾಮದಿಂದ ಈ ಬಾರಿ ಬೇಸಿಗೆಯ ಆರಂಭವೇ ಹೆಚ್ಚು ಸೆಕೆಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ. </p><p>ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಉತ್ತರ ಒಳನಾಡು, ಮಹಾರಾಷ್ಟ್ರ ಮತ್ತು ಒಡಿಶಾದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ತಾಪಮಾನ ಹೆಚ್ಚಿರಲಿದೆ ಎಂದು ಇಲಾಖೆ ಹೇಳಿದೆ.</p><p>ಮಾರ್ಚ್ನಲ್ಲಿ ಸೆಕೆಯ ಜತೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ. </p><p>ಉತ್ತರ ಮತ್ತು ಮಧ್ಯ ಭಾರತದಲ್ಲಿ ಮಾರ್ಚ್ನಲ್ಲಿ ಬಿಸಿಗಾಳಿ ಪರಿಸ್ಥಿತಿ ಇರುವ ಲಕ್ಷಣಗಳು ಕಡಿಮೆ ಇದೆ. </p><p>ಮಾರ್ಚ್ನಿಂದ ಮೇ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೊಹಪಾತ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p><p>ಎಲ್–ನಿನೊ ಪರಿಣಾಮದಿಂದ ಮಧ್ಯ ಪೆಸಿಫಿಕ್ ಸಾಗರದಲ್ಲಿ ನೀರಿನ ಮೇಲ್ಮೈ ತಾಪಮಾನ ಬೇಸಿಗೆ ಮುಗಿಯುವವರೆಗೂ ಇರಲಿದೆ. ಬಳಿಕ ತಟಸ್ತವಾಗಲಿದೆ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>