<p><strong>ಮುಂಬೈ:</strong> ಭಾರತ ಹಾಗೂ ಬ್ರಿಟನ್ ನಡುವೆ ರಕ್ಷಣಾ ವ್ಯವಹಾರಗಳ ಸಹಕಾರ ವೃದ್ಧಿಪಡಿಸುವ ಮಾರ್ಗಗಳ ಕುರಿತು ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಥ್ ಹಾಗೂ ಬ್ರಿಟನ್ನ ರಕ್ಷಣಾ ಖಾತೆ ರಾಜ್ಯ ಸಚಿವ ವೆರ್ನ್ ಕೊಕರ್ ಶುಕ್ರವಾರ ವಿಸ್ತೃತ ಚರ್ಚೆ ನಡೆಸಿದರು. </p>.<p>ಬ್ರಿಟನ್ನ ಕ್ಯಾರಿಯರ್ ಸ್ಟ್ರೈಕ್ ಗ್ರೂಪ್ (ಸಿಎಸ್ಜಿ) ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಇಲ್ಲಿ ನಡೆದ ಸಭೆಯಲ್ಲಿ ಉಭಯ ನಾಯಕರು ಹಲವು ವಿಚಾರಗಳ ಕುರಿತು ಚರ್ಚಿಸಿದರು.</p>.<p>‘ಬ್ರಿಟನ್ ಹಾಗೂ ಭಾರತ ನಡುವಿನ ರಕ್ಷಣಾ ವ್ಯವಹಾರದಲ್ಲಿನ ಸಹಕಾರವನ್ನು ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು’ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ಮುಂಬೈನಲ್ಲಿ ಸಶಸ್ತ್ರ ಪಡೆಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ವಿಸ್ತೃತ ಚರ್ಚೆ ನಡೆಸಿದ ಮರುದಿನವೇ ಈ ಸಭೆಯೂ ನಡೆದಿದೆ. </p>.<p>‘ಬ್ರಿಟನ್ನ ರಾಜ ವೇಲ್ಸ್ ನೇತೃತ್ವದ ಸಿಎಸ್ಜಿ ಭಾರತದ ಪಶ್ಚಿಮ ಕರಾವಳಿಯಲ್ಲಿ ಭಾರತೀಯ ನೌಕಾಪಡೆಯ ಜೊತೆಗೆ ದ್ವಿಪಕ್ಷೀಯ ಕಡಲಾಭ್ಯಾಸ ಕೊಂಕಣ್–25 ಯಶಸ್ವಿಯಾಗಿ ಪೂರ್ಣಗೊಳಿಸಿದೆ’ ಎಂದು ಸಂಜಯ್ ಸೇಥ್ ತಿಳಿಸಿದರು.</p>.<p>‘ಸದ್ಯ ಈ ಪಡೆಯು ಮುಂಬೈ ಹಾಗೂ ಗೋವಾದಲ್ಲಿ ಸಮುದ್ರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ. ಇಂತಹ ಕಾರ್ಯಾಚರಣಾ ಸಂವಹನಗಳು ಪರಸ್ಪರ ತಿಳಿವಳಿಕೆ ಹೆಚ್ಚಿಸಿ, ಎರಡು ನೌಕಾಪಡೆಗಳ ಕಾರ್ಯಸಾಧ್ಯತೆಗೆ ಗಮನಾರ್ಹ ಕೊಡುಗೆ ನೀಡುತ್ತವೆ’ ಎಂದು ತಿಳಿಸಿದರು.</p>.<p>ಆತ್ಮನಿರ್ಭರತೆಯ ಪರಿಕಲ್ಪನೆಯ ಅಡಿಯಲ್ಲಿ ರಕ್ಷಣಾ ಸಲಕರಣೆಗಳ ತಯಾರಿಕೆಯಲ್ಲಿ ಭಾರತವು ಸಾಮರ್ಥ್ಯ ವೃದ್ಧಿಸಿಕೊಳ್ಳುತ್ತಿದ್ದು, ದೇಶೀಯ ವ್ಯವಸ್ಥೆಗಳನ್ನು ಬಲಪಡಿಸಿಕೊಂಡಿದೆ. ಈ ದಿಸೆಯಲ್ಲಿ ಉಭಯ ರಾಷ್ಟ್ರಗಳು ರಕ್ಷಣಾ ಸಹಕಾರದ ವಿವಿಧ ಆಯಾಮಗಳ ಕುರಿತು ಸಭೆಯಲ್ಲಿ ಅಭಿಪ್ರಾಯಗಳು ವ್ಯಕ್ತವಾಯಿತು. </p>.<p>‘ಜಾಗತಿಕ ರಕ್ಷಣಾ ಪೂರೈಕೆ ಸರಪಳಿಯಲ್ಲಿ ಲಭ್ಯವಾಗುವ ಅವಕಾಶ ಹಾಗೂ ಸಹಯೋಗದ ಕುರಿತು ಎರಡು ರಾಷ್ಟ್ರಗಳು ಬದ್ಧತೆ ವ್ಯಕ್ತಪಡಿಸಿದವು. ಇಂಡೋ– ಫೆಸಿಫಿಕ್ ಹಾಗೂ ಹಿಂದೂ ಮಹಾಸಾಗರದಲ್ಲಿ ಸಹಕಾರ ವೃದ್ಧಿಪಡಿಸಲು ಒಪ್ಪಿವೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p>.<p>ಸಭೆಯ ಬಳಿಕ ಮಾತನಾಡಿದ ವೆರ್ನ್ ಕೊಕರ್, ‘ಹಿಂದೂ ಮಹಾಸಾಗರದಲ್ಲಿ ಭದ್ರತೆಯನ್ನು ಕಾಪಾಡಿ, ಸಿಎಸ್ಜಿಗೆ ಭಾರತದ ಬಂದರುಗಳಲ್ಲಿ ಅಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟ ಭಾರತಕ್ಕೆ ಧನ್ಯವಾದಗಳು. ಈ ಪ್ರದೇಶದ ಭದ್ರತೆ ಹಾಗೂ ಸ್ಥಿರತೆ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳು ಜೊತೆಗೂಡಿ ಕೆಲಸ ಮಾಡಲಿವೆ. ಈ ವಿಚಾರದಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸಲಿದ್ದು, ಮಿತ್ರ ರಾಷ್ಟ್ರದೊಂದಿಗಿನ ಜೊತೆಗೂಡಿ ಕೆಲಸ ಮಾಡುವ ಬದ್ಧತೆಯೂ ಮುಂದುವರಿಯಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭಾರತ ಹಾಗೂ ಬ್ರಿಟನ್ ನಡುವೆ ರಕ್ಷಣಾ ವ್ಯವಹಾರಗಳ ಸಹಕಾರ ವೃದ್ಧಿಪಡಿಸುವ ಮಾರ್ಗಗಳ ಕುರಿತು ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಥ್ ಹಾಗೂ ಬ್ರಿಟನ್ನ ರಕ್ಷಣಾ ಖಾತೆ ರಾಜ್ಯ ಸಚಿವ ವೆರ್ನ್ ಕೊಕರ್ ಶುಕ್ರವಾರ ವಿಸ್ತೃತ ಚರ್ಚೆ ನಡೆಸಿದರು. </p>.<p>ಬ್ರಿಟನ್ನ ಕ್ಯಾರಿಯರ್ ಸ್ಟ್ರೈಕ್ ಗ್ರೂಪ್ (ಸಿಎಸ್ಜಿ) ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಇಲ್ಲಿ ನಡೆದ ಸಭೆಯಲ್ಲಿ ಉಭಯ ನಾಯಕರು ಹಲವು ವಿಚಾರಗಳ ಕುರಿತು ಚರ್ಚಿಸಿದರು.</p>.<p>‘ಬ್ರಿಟನ್ ಹಾಗೂ ಭಾರತ ನಡುವಿನ ರಕ್ಷಣಾ ವ್ಯವಹಾರದಲ್ಲಿನ ಸಹಕಾರವನ್ನು ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು’ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ಮುಂಬೈನಲ್ಲಿ ಸಶಸ್ತ್ರ ಪಡೆಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ವಿಸ್ತೃತ ಚರ್ಚೆ ನಡೆಸಿದ ಮರುದಿನವೇ ಈ ಸಭೆಯೂ ನಡೆದಿದೆ. </p>.<p>‘ಬ್ರಿಟನ್ನ ರಾಜ ವೇಲ್ಸ್ ನೇತೃತ್ವದ ಸಿಎಸ್ಜಿ ಭಾರತದ ಪಶ್ಚಿಮ ಕರಾವಳಿಯಲ್ಲಿ ಭಾರತೀಯ ನೌಕಾಪಡೆಯ ಜೊತೆಗೆ ದ್ವಿಪಕ್ಷೀಯ ಕಡಲಾಭ್ಯಾಸ ಕೊಂಕಣ್–25 ಯಶಸ್ವಿಯಾಗಿ ಪೂರ್ಣಗೊಳಿಸಿದೆ’ ಎಂದು ಸಂಜಯ್ ಸೇಥ್ ತಿಳಿಸಿದರು.</p>.<p>‘ಸದ್ಯ ಈ ಪಡೆಯು ಮುಂಬೈ ಹಾಗೂ ಗೋವಾದಲ್ಲಿ ಸಮುದ್ರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ. ಇಂತಹ ಕಾರ್ಯಾಚರಣಾ ಸಂವಹನಗಳು ಪರಸ್ಪರ ತಿಳಿವಳಿಕೆ ಹೆಚ್ಚಿಸಿ, ಎರಡು ನೌಕಾಪಡೆಗಳ ಕಾರ್ಯಸಾಧ್ಯತೆಗೆ ಗಮನಾರ್ಹ ಕೊಡುಗೆ ನೀಡುತ್ತವೆ’ ಎಂದು ತಿಳಿಸಿದರು.</p>.<p>ಆತ್ಮನಿರ್ಭರತೆಯ ಪರಿಕಲ್ಪನೆಯ ಅಡಿಯಲ್ಲಿ ರಕ್ಷಣಾ ಸಲಕರಣೆಗಳ ತಯಾರಿಕೆಯಲ್ಲಿ ಭಾರತವು ಸಾಮರ್ಥ್ಯ ವೃದ್ಧಿಸಿಕೊಳ್ಳುತ್ತಿದ್ದು, ದೇಶೀಯ ವ್ಯವಸ್ಥೆಗಳನ್ನು ಬಲಪಡಿಸಿಕೊಂಡಿದೆ. ಈ ದಿಸೆಯಲ್ಲಿ ಉಭಯ ರಾಷ್ಟ್ರಗಳು ರಕ್ಷಣಾ ಸಹಕಾರದ ವಿವಿಧ ಆಯಾಮಗಳ ಕುರಿತು ಸಭೆಯಲ್ಲಿ ಅಭಿಪ್ರಾಯಗಳು ವ್ಯಕ್ತವಾಯಿತು. </p>.<p>‘ಜಾಗತಿಕ ರಕ್ಷಣಾ ಪೂರೈಕೆ ಸರಪಳಿಯಲ್ಲಿ ಲಭ್ಯವಾಗುವ ಅವಕಾಶ ಹಾಗೂ ಸಹಯೋಗದ ಕುರಿತು ಎರಡು ರಾಷ್ಟ್ರಗಳು ಬದ್ಧತೆ ವ್ಯಕ್ತಪಡಿಸಿದವು. ಇಂಡೋ– ಫೆಸಿಫಿಕ್ ಹಾಗೂ ಹಿಂದೂ ಮಹಾಸಾಗರದಲ್ಲಿ ಸಹಕಾರ ವೃದ್ಧಿಪಡಿಸಲು ಒಪ್ಪಿವೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p>.<p>ಸಭೆಯ ಬಳಿಕ ಮಾತನಾಡಿದ ವೆರ್ನ್ ಕೊಕರ್, ‘ಹಿಂದೂ ಮಹಾಸಾಗರದಲ್ಲಿ ಭದ್ರತೆಯನ್ನು ಕಾಪಾಡಿ, ಸಿಎಸ್ಜಿಗೆ ಭಾರತದ ಬಂದರುಗಳಲ್ಲಿ ಅಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟ ಭಾರತಕ್ಕೆ ಧನ್ಯವಾದಗಳು. ಈ ಪ್ರದೇಶದ ಭದ್ರತೆ ಹಾಗೂ ಸ್ಥಿರತೆ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳು ಜೊತೆಗೂಡಿ ಕೆಲಸ ಮಾಡಲಿವೆ. ಈ ವಿಚಾರದಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸಲಿದ್ದು, ಮಿತ್ರ ರಾಷ್ಟ್ರದೊಂದಿಗಿನ ಜೊತೆಗೂಡಿ ಕೆಲಸ ಮಾಡುವ ಬದ್ಧತೆಯೂ ಮುಂದುವರಿಯಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>