<p><strong>ನವದೆಹಲಿ: </strong>ವಿಶ್ವಸಂಸ್ಥೆಯ ಸುಧಾರಣಾ ಕ್ರಮಗಳು, ಭಯೋತ್ಪಾದನೆ ನಿಗ್ರಹ, ಶಾಂತಿಪಾಲನಾ ಪಡೆ ಮತ್ತು ಹವಾಮಾನ ಬದಲಾವಣೆ ಕುರಿತು ಭಾರತ ಮತ್ತು ಬ್ರಿಟನ್ ವಿದೇಶಾಂಗ ಸಚಿವರು ಲಂಡನ್ನಲ್ಲಿ ಚರ್ಚೆ ನಡೆಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.</p>.<p>ಭಾರತ – ಬ್ರಿಟನ್ ರಾಷ್ಟ್ರಗಳ ನಡುವೆ ಸೋಮವಾರ ನಡೆದ ಎರಡನೇ ಬಹುಪಕ್ಷೀಯ ಸಂವಾದದ ಅಡಿಯಲ್ಲಿ ಉಭಯ ರಾಷ್ಟ್ರಗಳ ಅಧಿಕಾರಿಗಳು ಈ ವಿಷಯಗಳ ಕುರಿತು ಚರ್ಚೆ ನಡೆಸಿದರು.</p>.<p>ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಕಾಶ್ ಗುಪ್ತಾ ಭಾರತದ ನಿಯೋಗದ ನೇತೃತ್ವವಹಿಸಿದ್ದರು. ಬ್ರಿಟನ್ ಪರವಾಗಿ ವಿಶ್ವಸಂಸ್ಥೆಯಲ್ಲಿರುವ ಬ್ರಿಟನ್ ವಿದೇಶಾಂಗ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ(ಎಫ್ಸಿಡಿಒ)ಯ ರಾಜಕೀಯ ಉಪ ನಿರ್ದೇಶಕ ಹ್ಯಾರಿಯೇಟ್ ಮ್ಯಾಥ್ಯೂ ಹಾಜರಿದ್ದರು.</p>.<p>ಉಭಯ ರಾಷ್ಟ್ರಗಳ ಅಧಿಕಾರಿಗಳು ಕಾಮನ್ವೆಲ್ತ್ ಯೋಜನೆಯ ಕಾರ್ಯತಂತ್ರ ಮತ್ತು ಆದ್ಯತೆಗಳ ಕುರಿತು ಅಭಿಪ್ರಾಯಗಳನ್ನು ವಿನಿಯಮ ಮಾಡಿಕೊಂಡರು.</p>.<p>ಇದೇ ವೇಳೆ ಕಳೆದ ಆಗಸ್ಟ್ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಭಾರತವನ್ನು ಬ್ರಿಟನ್ ಅಧಿಕಾರಿ ಅಭಿನಂದಿಸಿದರು.</p>.<p>ಭಾರತೀಯ ನಿಯೋಗದ ನೇತೃತ್ವವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಕಾಶ್ ಗುಪ್ತಾ ನೇತೃತ್ವ ವಹಿಸಿದ್ದರು, ಯುಕೆ ಪರ ಯುಎನ್, ಯುಕೆ ವಿದೇಶಿ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್ಸಿಡಿಒ) ಉಪ ರಾಜಕೀಯ ನಿರ್ದೇಶಕ ಹ್ಯಾರಿಯೆಟ್ ಮ್ಯಾಥ್ಯೂಸ್ ನೇತೃತ್ವ ವಹಿಸಿದ್ದರು.</p>.<p>ಎರಡೂ ರಾಷ್ಟ್ರಗಳ ನಿಯೋಗಗಳು, ಬಹುಪಕ್ಷೀಯ ವಿಷಯಗಳಲ್ಲಿ ತಮ್ಮ ಸಹಕಾರವನ್ನು ಮತ್ತಷ್ಟು ಬಲವರ್ಧನೆ ಗೊಳಿಸಲು ನಿಕಟವಾಗಿ ಕಾರ್ಯನಿರ್ವಹಿಸಲು ಒಪ್ಪಿಕೊಂಡಿವೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿಶ್ವಸಂಸ್ಥೆಯ ಸುಧಾರಣಾ ಕ್ರಮಗಳು, ಭಯೋತ್ಪಾದನೆ ನಿಗ್ರಹ, ಶಾಂತಿಪಾಲನಾ ಪಡೆ ಮತ್ತು ಹವಾಮಾನ ಬದಲಾವಣೆ ಕುರಿತು ಭಾರತ ಮತ್ತು ಬ್ರಿಟನ್ ವಿದೇಶಾಂಗ ಸಚಿವರು ಲಂಡನ್ನಲ್ಲಿ ಚರ್ಚೆ ನಡೆಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.</p>.<p>ಭಾರತ – ಬ್ರಿಟನ್ ರಾಷ್ಟ್ರಗಳ ನಡುವೆ ಸೋಮವಾರ ನಡೆದ ಎರಡನೇ ಬಹುಪಕ್ಷೀಯ ಸಂವಾದದ ಅಡಿಯಲ್ಲಿ ಉಭಯ ರಾಷ್ಟ್ರಗಳ ಅಧಿಕಾರಿಗಳು ಈ ವಿಷಯಗಳ ಕುರಿತು ಚರ್ಚೆ ನಡೆಸಿದರು.</p>.<p>ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಕಾಶ್ ಗುಪ್ತಾ ಭಾರತದ ನಿಯೋಗದ ನೇತೃತ್ವವಹಿಸಿದ್ದರು. ಬ್ರಿಟನ್ ಪರವಾಗಿ ವಿಶ್ವಸಂಸ್ಥೆಯಲ್ಲಿರುವ ಬ್ರಿಟನ್ ವಿದೇಶಾಂಗ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ(ಎಫ್ಸಿಡಿಒ)ಯ ರಾಜಕೀಯ ಉಪ ನಿರ್ದೇಶಕ ಹ್ಯಾರಿಯೇಟ್ ಮ್ಯಾಥ್ಯೂ ಹಾಜರಿದ್ದರು.</p>.<p>ಉಭಯ ರಾಷ್ಟ್ರಗಳ ಅಧಿಕಾರಿಗಳು ಕಾಮನ್ವೆಲ್ತ್ ಯೋಜನೆಯ ಕಾರ್ಯತಂತ್ರ ಮತ್ತು ಆದ್ಯತೆಗಳ ಕುರಿತು ಅಭಿಪ್ರಾಯಗಳನ್ನು ವಿನಿಯಮ ಮಾಡಿಕೊಂಡರು.</p>.<p>ಇದೇ ವೇಳೆ ಕಳೆದ ಆಗಸ್ಟ್ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಭಾರತವನ್ನು ಬ್ರಿಟನ್ ಅಧಿಕಾರಿ ಅಭಿನಂದಿಸಿದರು.</p>.<p>ಭಾರತೀಯ ನಿಯೋಗದ ನೇತೃತ್ವವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಕಾಶ್ ಗುಪ್ತಾ ನೇತೃತ್ವ ವಹಿಸಿದ್ದರು, ಯುಕೆ ಪರ ಯುಎನ್, ಯುಕೆ ವಿದೇಶಿ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್ಸಿಡಿಒ) ಉಪ ರಾಜಕೀಯ ನಿರ್ದೇಶಕ ಹ್ಯಾರಿಯೆಟ್ ಮ್ಯಾಥ್ಯೂಸ್ ನೇತೃತ್ವ ವಹಿಸಿದ್ದರು.</p>.<p>ಎರಡೂ ರಾಷ್ಟ್ರಗಳ ನಿಯೋಗಗಳು, ಬಹುಪಕ್ಷೀಯ ವಿಷಯಗಳಲ್ಲಿ ತಮ್ಮ ಸಹಕಾರವನ್ನು ಮತ್ತಷ್ಟು ಬಲವರ್ಧನೆ ಗೊಳಿಸಲು ನಿಕಟವಾಗಿ ಕಾರ್ಯನಿರ್ವಹಿಸಲು ಒಪ್ಪಿಕೊಂಡಿವೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>