<p><strong>ವಿಶ್ವಸಂಸ್ಥೆ</strong>: ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದೆ. ಕೂಡಲೇ ಪಾಕ್ ಆಕ್ರಮಿತ ಕಾಶ್ಮಿರವನ್ನು ತೆರವುಗೊಳಿಸಲೇಬೇಕು ಎಂದು ಹೇಳಿದೆ.</p><p>ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಗಳಲ್ಲಿ ಹೊಂದಾಣಿಕೆಯನ್ನು ಹೆಚ್ಚಿಸುವ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ.</p><p>‘ಜಮ್ಮು ಮತ್ತು ಕಾಶ್ಮೀರವು ಹಿಂದೆ, ಇಂದು ಮತ್ತು ನಾಳೆ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ. ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ, ಅದನ್ನು ತೆರವುಗೊಳಿಸಲೇಬೇಕು’ ಎಂದು ಹರೀಶ್ ಹೇಳಿದ್ದಾರೆ.</p><p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಕೆಣಕಿದ ನಂತರ ಹರೀಶ್ ಅವರ ಬಲವಾದ ಪ್ರತಿಕ್ರಿಯೆ ಬಂದಿದೆ.</p><p>ಪಾಕಿಸ್ತಾನದ ಪ್ರತಿನಿಧಿಯು ಭಾರತದ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೇಲೆ ಅನಗತ್ಯ ಹೇಳಿಕೆಗಳನ್ನು ನೀಡಿರುವುದನ್ನು ಭಾರತ ಗಮನಿಸಬೇಕಾಗಿದೆ ಎಂದು ಹರೀಶ್ ಹೇಳಿದ್ದಾರೆ.</p><p>‘ಇಂತಹ ಪುನರಾವರ್ತಿತ ಉಲ್ಲೇಖಗಳು ಅವರ ಕಾನೂನುಬಾಹಿರ ಹಕ್ಕುಗಳನ್ನು ದೃಢೀಕರಿಸುವುದಿಲ್ಲ ಅಥವಾ ಅವರ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ’ ಎಂದು ಕಿಡಿಕಾರಿದ್ದಾರೆ.</p><p>ತಮ್ಮ ಸಂಕುಚಿತ ಮತ್ತು ವಿಭಜಕ ಕಾರ್ಯಸೂಚಿಯನ್ನು ಸಾಧಿಸಲು ಈ ವೇದಿಕೆಯ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬೇಡಿ ಎಂದು ನಾವು ಪಾಕಿಸ್ತಾನಕ್ಕೆ ಸಲಹೆ ನೀಡುತ್ತೇವೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದೆ. ಕೂಡಲೇ ಪಾಕ್ ಆಕ್ರಮಿತ ಕಾಶ್ಮಿರವನ್ನು ತೆರವುಗೊಳಿಸಲೇಬೇಕು ಎಂದು ಹೇಳಿದೆ.</p><p>ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಗಳಲ್ಲಿ ಹೊಂದಾಣಿಕೆಯನ್ನು ಹೆಚ್ಚಿಸುವ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ.</p><p>‘ಜಮ್ಮು ಮತ್ತು ಕಾಶ್ಮೀರವು ಹಿಂದೆ, ಇಂದು ಮತ್ತು ನಾಳೆ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ. ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ, ಅದನ್ನು ತೆರವುಗೊಳಿಸಲೇಬೇಕು’ ಎಂದು ಹರೀಶ್ ಹೇಳಿದ್ದಾರೆ.</p><p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಕೆಣಕಿದ ನಂತರ ಹರೀಶ್ ಅವರ ಬಲವಾದ ಪ್ರತಿಕ್ರಿಯೆ ಬಂದಿದೆ.</p><p>ಪಾಕಿಸ್ತಾನದ ಪ್ರತಿನಿಧಿಯು ಭಾರತದ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೇಲೆ ಅನಗತ್ಯ ಹೇಳಿಕೆಗಳನ್ನು ನೀಡಿರುವುದನ್ನು ಭಾರತ ಗಮನಿಸಬೇಕಾಗಿದೆ ಎಂದು ಹರೀಶ್ ಹೇಳಿದ್ದಾರೆ.</p><p>‘ಇಂತಹ ಪುನರಾವರ್ತಿತ ಉಲ್ಲೇಖಗಳು ಅವರ ಕಾನೂನುಬಾಹಿರ ಹಕ್ಕುಗಳನ್ನು ದೃಢೀಕರಿಸುವುದಿಲ್ಲ ಅಥವಾ ಅವರ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ’ ಎಂದು ಕಿಡಿಕಾರಿದ್ದಾರೆ.</p><p>ತಮ್ಮ ಸಂಕುಚಿತ ಮತ್ತು ವಿಭಜಕ ಕಾರ್ಯಸೂಚಿಯನ್ನು ಸಾಧಿಸಲು ಈ ವೇದಿಕೆಯ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬೇಡಿ ಎಂದು ನಾವು ಪಾಕಿಸ್ತಾನಕ್ಕೆ ಸಲಹೆ ನೀಡುತ್ತೇವೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>