<p><strong>ನವದೆಹಲಿ:</strong> ಕೋವಿಡ್–19 ಸೋಂಕಿತರ ಚಿಕಿತ್ಸೆಯಲ್ಲಿ ಬಳಸುವ ರೆಮ್ಡಿಸಿವಿರ್ ಚುಚ್ಚುಮದ್ದಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.</p>.<p>ರೆಮ್ಡಿಸಿವಿರ್ ಉತ್ಪಾದನೆಗೆ ಬಳಸುವ ಔಷಧೀಯ ಪದಾರ್ಥಗಳ ಮೇಲಿನ ಆಮದು ಸುಂಕವನ್ನೂ ರದ್ದುಪಡಿಸಲಾಗಿದೆ. ರೆಮ್ಡಿಸಿವಿರ್ ಪೂರೈಕೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.</p>.<p><strong>ಓದಿ:</strong><a href="https://www.prajavani.net/india-news/2200-remdesivir-vials-stocked-by-exporters-seized-in-mumbai-823942.html" target="_blank">ಮುಂಬೈನ ಎರಡು ಸ್ಥಳಗಳಲ್ಲಿ ದಾಳಿ; 2,200 ರೆಮ್ಡಿಸಿವಿರ್ ವಶಕ್ಕೆ</a></p>.<p>ದೇಶದಲ್ಲಿ ರೆಮ್ಡಿಸಿವಿರ್ ಕೊರತೆ ಇದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.</p>.<p>ಆದರೆ ಭಾರತವು ರೆಮ್ಡಿಸಿವಿರ್ ಅನ್ನು ರಫ್ತು ಮಾಡುವುದೇ ಹೆಚ್ಚು. ಕೆಲ ದಿನಗಳ ಹಿಂದಿನವರೆಗೂ ಸುಮಾರು 100 ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಉಲ್ಬಣಿಸಿರುವುದರಿಂದ ಇತ್ತೀಚೆಗೆ ರಫ್ತು ನಿಷೇಧಿಸಲಾಗಿತ್ತು.</p>.<p><strong>ಓದಿ:</strong><a href="https://www.prajavani.net/india-news/covid-shiv-sena-bjp-in-war-of-words-over-remdesivir-issue-823861.html" target="_blank">ರೆಮ್ಡಿಸಿವಿರ್ ದಾಸ್ತಾನು: ಬಿಜೆಪಿ–ಸೇನಾ ವಾಕ್ಸಮರ ತೀವ್ರ</a></p>.<p>ಈ ಮಧ್ಯೆ, ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ ರಾಜ್ಯಗಳಿಗೆ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಲೂ ಕೇಂದ್ರ ನಿರ್ಧರಿಸಿದೆ.</p>.<p>‘ವೈದ್ಯಕೀಯ ಆಮ್ಲಜನಕ ಅಗತ್ಯವೂ ಇರುವಂಥ ಸಂದರ್ಭಗಳಲ್ಲಿ ರೆಮ್ಡೆಸಿವಿರ್ ಬಳಸಬೇಕೆಂದು ವೈದ್ಯಕೀಯ ಮಾರ್ಗದರ್ಶನ ಇದೆ. ಹೀಗಾಗಿ ವಿವಿಧ ರಾಜ್ಯಗಳಿಗೆ ಮಾಡಲಾದ ಆಮ್ಲಜನಕ ಹಂಚಿಕೆಯನ್ನು ಆಧರಿಸಿ ರೆಮ್ಡೆಸಿವಿರ್ ಪೂರೈಸಲಾಗುವುದು’ ಎಂದೂ ಹರ್ಷವರ್ಧನ್ ತಿಳಿಸಿದ್ದಾರೆ.</p>.<p>ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಔಷಧ ಕಾರ್ಯದರ್ಶಿ ಎಸ್.ಅಪರ್ಣಾ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/crime-against-humanity-priyanka-accuses-fadnavis-of-hoarding-remdesivir-823645.html" target="_blank">ಮಹಾರಾಷ್ಟ್ರದಲ್ಲಿ ಬಿಜೆಪಿಯವರಿಂದ ರೆಮ್ಡಿಸಿವಿರ್ ದಾಸ್ತಾನು: ಪ್ರಿಯಾಂಕಾ ಆಕ್ಷೇಪ</a></p>.<p>ದೇಶದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿದ್ದು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಪರಿಣಾಮವಾಗಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯುಂಟಾಗಿದೆ. ರೆಮ್ಡೆಸಿವಿರ್ ಸಹ ಸಾಕಷ್ಟು ಪ್ರಮಾಣದಲ್ಲಿ ದೊರೆಯುತ್ತಿಲ್ಲ ಎಂದು ರಾಜ್ಯ ಸರ್ಕಾರಗಳು ದೂರಿವೆ.</p>.<p>ದೇಶದಾದ್ಯಂತ ಮಂಗಳವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 2,59,170 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 1,761 ಮಂದಿ ಸೋಂಕಿತರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಸೋಂಕಿತರ ಚಿಕಿತ್ಸೆಯಲ್ಲಿ ಬಳಸುವ ರೆಮ್ಡಿಸಿವಿರ್ ಚುಚ್ಚುಮದ್ದಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.</p>.<p>ರೆಮ್ಡಿಸಿವಿರ್ ಉತ್ಪಾದನೆಗೆ ಬಳಸುವ ಔಷಧೀಯ ಪದಾರ್ಥಗಳ ಮೇಲಿನ ಆಮದು ಸುಂಕವನ್ನೂ ರದ್ದುಪಡಿಸಲಾಗಿದೆ. ರೆಮ್ಡಿಸಿವಿರ್ ಪೂರೈಕೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.</p>.<p><strong>ಓದಿ:</strong><a href="https://www.prajavani.net/india-news/2200-remdesivir-vials-stocked-by-exporters-seized-in-mumbai-823942.html" target="_blank">ಮುಂಬೈನ ಎರಡು ಸ್ಥಳಗಳಲ್ಲಿ ದಾಳಿ; 2,200 ರೆಮ್ಡಿಸಿವಿರ್ ವಶಕ್ಕೆ</a></p>.<p>ದೇಶದಲ್ಲಿ ರೆಮ್ಡಿಸಿವಿರ್ ಕೊರತೆ ಇದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.</p>.<p>ಆದರೆ ಭಾರತವು ರೆಮ್ಡಿಸಿವಿರ್ ಅನ್ನು ರಫ್ತು ಮಾಡುವುದೇ ಹೆಚ್ಚು. ಕೆಲ ದಿನಗಳ ಹಿಂದಿನವರೆಗೂ ಸುಮಾರು 100 ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಉಲ್ಬಣಿಸಿರುವುದರಿಂದ ಇತ್ತೀಚೆಗೆ ರಫ್ತು ನಿಷೇಧಿಸಲಾಗಿತ್ತು.</p>.<p><strong>ಓದಿ:</strong><a href="https://www.prajavani.net/india-news/covid-shiv-sena-bjp-in-war-of-words-over-remdesivir-issue-823861.html" target="_blank">ರೆಮ್ಡಿಸಿವಿರ್ ದಾಸ್ತಾನು: ಬಿಜೆಪಿ–ಸೇನಾ ವಾಕ್ಸಮರ ತೀವ್ರ</a></p>.<p>ಈ ಮಧ್ಯೆ, ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ ರಾಜ್ಯಗಳಿಗೆ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಲೂ ಕೇಂದ್ರ ನಿರ್ಧರಿಸಿದೆ.</p>.<p>‘ವೈದ್ಯಕೀಯ ಆಮ್ಲಜನಕ ಅಗತ್ಯವೂ ಇರುವಂಥ ಸಂದರ್ಭಗಳಲ್ಲಿ ರೆಮ್ಡೆಸಿವಿರ್ ಬಳಸಬೇಕೆಂದು ವೈದ್ಯಕೀಯ ಮಾರ್ಗದರ್ಶನ ಇದೆ. ಹೀಗಾಗಿ ವಿವಿಧ ರಾಜ್ಯಗಳಿಗೆ ಮಾಡಲಾದ ಆಮ್ಲಜನಕ ಹಂಚಿಕೆಯನ್ನು ಆಧರಿಸಿ ರೆಮ್ಡೆಸಿವಿರ್ ಪೂರೈಸಲಾಗುವುದು’ ಎಂದೂ ಹರ್ಷವರ್ಧನ್ ತಿಳಿಸಿದ್ದಾರೆ.</p>.<p>ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಔಷಧ ಕಾರ್ಯದರ್ಶಿ ಎಸ್.ಅಪರ್ಣಾ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/crime-against-humanity-priyanka-accuses-fadnavis-of-hoarding-remdesivir-823645.html" target="_blank">ಮಹಾರಾಷ್ಟ್ರದಲ್ಲಿ ಬಿಜೆಪಿಯವರಿಂದ ರೆಮ್ಡಿಸಿವಿರ್ ದಾಸ್ತಾನು: ಪ್ರಿಯಾಂಕಾ ಆಕ್ಷೇಪ</a></p>.<p>ದೇಶದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿದ್ದು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಪರಿಣಾಮವಾಗಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯುಂಟಾಗಿದೆ. ರೆಮ್ಡೆಸಿವಿರ್ ಸಹ ಸಾಕಷ್ಟು ಪ್ರಮಾಣದಲ್ಲಿ ದೊರೆಯುತ್ತಿಲ್ಲ ಎಂದು ರಾಜ್ಯ ಸರ್ಕಾರಗಳು ದೂರಿವೆ.</p>.<p>ದೇಶದಾದ್ಯಂತ ಮಂಗಳವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 2,59,170 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 1,761 ಮಂದಿ ಸೋಂಕಿತರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>