<p><strong>ನವದೆಹಲಿ:</strong> ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯನ್ನು ಜೂನ್ 1 ರಂದು ಪ್ರಾರಂಭಿಸಲಾಯಿತು. ಪ್ರಾರಂಭವಾದಮೊದಲ ತಿಂಗಳಿಂದಲೇ ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿಗಳು ಬರಲು ಪ್ರಾರಂಭಿಸಿದವು. ಭಾರತದಲ್ಲಿ ಯೋಜನೆಯೊಂದು ಇದೇ ಮೊದಲ ಬಾರಿಗೆ ವೇಗವಾಗಿ ಜನರನ್ನು ತಲುಪುತ್ತಿರುವುದನ್ನು ಕಾಣಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.</p>.<p>ಜೂನ್ 1ರಂದು ಪಿಎಂ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಜುಲೈ 2ರಿಂದಲೇ ಇದಕ್ಕಾಗಿ ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿಗಳು ಬರಲಾರಂಭಿಸಿದವು. ಇದೇ ಮೊದಲ ಬಾರಿಗೆ ದೇಶವು ಯೋಜನೆಯೊಂದಕ್ಕೆ ಈ ರೀತಿಯ ವೇಗವನ್ನು ನೋಡುತ್ತಿದೆ. ಬಡವರಿಗಾಗಿ ಘೋಷಣೆಯಾದ ಯೋಜನೆಗಳು ಇಷ್ಟು ವೇಗವಾಗಿ ಅವರನ್ನು ತಲುಪುತ್ತವೆ ಎಂದು ಯಾರೂ ಊಹಿಸಿರಲಿಲ್ಲ. ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆಟುಕುವ ಸಾಲವನ್ನು ಒದಗಿಸಲು ಇಂತಹ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.</p>.<p>ಕೊರೊನಾ ವೈರಸ್ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡ ಬೀದಿಬದಿ ವ್ಯಾಪಾರಿಗಳಿಗೆ ನೆರವಾಗುವಂತೆ ಸರ್ಕಾರ ಜೂನ್ 1ರಂದು 'ಪಿಎಂ ಸ್ವನಿಧಿ' ಯೋಜನೆಯನ್ನು ಪ್ರಾರಂಭಿಸಿತ್ತು.</p>.<p>ಕೆಲಸವನ್ನು ಕಾಗದರಹಿತವನ್ನಾಗಿಸಲು ಈ ಯೋಜನೆಗೆ ತಂತ್ರಜ್ಞಾನವನ್ನು ಬಳಸಲು ನಿರ್ಧರಿಸಲಾಗಿದೆ. ಉತ್ತರ ಪ್ರದೇಶದ ಆರ್ಥಿಕತೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಪಾತ್ರ ಬಹಳ ದೊಡ್ಡದಿದೆ ಎಂದು ತಿಳಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರಿಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ಸ್ವನಿಧಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಈ ಯೋಜನೆಯ ಸಹಾಯದಿಂದ ಬೀದಿ ಬದಿ ವ್ಯಾಪಾರಿಗಳು ಈಗ 'ಆತ್ಮನಿರ್ಭರ್' ಆಗುತ್ತಿದ್ದಾರೆ ಎಂದು ಹೇಳಿದರು.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.</p>.<p>ಪಿಎಂ ಸ್ವನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸುತ್ತಿರುವಾಗ, ಯೋಜನೆಯಿಂದಾಗಿ ಅವರು ಸಂತೋಷವಾಗಿದ್ದಾರೆ ಎಂಬುದನ್ನು ನಾನು ಅರಿತುಕೊಂಡೆ. ಈ ಮೊದಲು ಜನರು ಸಾಲ ಪಡೆಯಲು ಅನೇಕ ಬಾರಿ ಬ್ಯಾಂಕುಗಳಿಗೆ ಭೇಟಿ ನೀಡಬೇಕಾಗಿತ್ತು. ಬಡ ಜನರು ಬ್ಯಾಂಕಿನೊಳಗೆ ಹೆಜ್ಜೆ ಹಾಕುವುದನ್ನು ಕೂಡ ಊಹಿಸಲು ಸಾಧ್ಯವಾಗಿರಲಿಲ್ಲ. ಆದರೆ ಇಂದು ಜನರು ತಮ್ಮ ಕೆಲಸವನ್ನು ಪ್ರಾರಂಭಿಸಲು ಸುಲಭವಾಗಿ ಸಾಲ ಪಡೆಯುತ್ತಿದ್ದಾರೆ ಎಂದರು.</p>.<p>'ಆತ್ಮನಿರ್ಭರ್ ಭಾರತ್'ಗೆ ಇದು ಮಹತ್ವದ ದಿನ ಎಂದು ಹೇಳಿದ ಪ್ರಧಾನಿ, ₹1.7 ಲಕ್ಷ ಕೋಟಿ ಮೌಲ್ಯದ' ಗರೀಬ್ ಕಲ್ಯಾಣ ಯೋಜನೆ' ಪ್ರಾರಂಭಿಸುವ ಮೂಲಕ ಕೇಂದ್ರವು ಬಡವರಿಗೆ ಸಹಾಯ ಮಾಡುವ ದಿಕ್ಕಿನಲ್ಲಿ ಕೆಲಸ ಮಾಡಿದೆ. ಬಡ ಜನರ ಕಲ್ಯಾಣಕ್ಕೆ ಆದ್ಯತೆ ನೀಡಲು ₹20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಬಿಡುಗಡೆ ಮಾಡಲಾಯಿತು. ನಮ್ಮ ಬೀದಿ ಬದಿ ವ್ಯಾಪಾರಿಗಳು ಆತ್ಮನಿರ್ಭರ್ ಆಗುತ್ತಿದ್ದಾರೆ ಮತ್ತು ಮುಂದೆ ಸಾಗುತ್ತಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯನ್ನು ಜೂನ್ 1 ರಂದು ಪ್ರಾರಂಭಿಸಲಾಯಿತು. ಪ್ರಾರಂಭವಾದಮೊದಲ ತಿಂಗಳಿಂದಲೇ ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿಗಳು ಬರಲು ಪ್ರಾರಂಭಿಸಿದವು. ಭಾರತದಲ್ಲಿ ಯೋಜನೆಯೊಂದು ಇದೇ ಮೊದಲ ಬಾರಿಗೆ ವೇಗವಾಗಿ ಜನರನ್ನು ತಲುಪುತ್ತಿರುವುದನ್ನು ಕಾಣಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.</p>.<p>ಜೂನ್ 1ರಂದು ಪಿಎಂ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಜುಲೈ 2ರಿಂದಲೇ ಇದಕ್ಕಾಗಿ ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿಗಳು ಬರಲಾರಂಭಿಸಿದವು. ಇದೇ ಮೊದಲ ಬಾರಿಗೆ ದೇಶವು ಯೋಜನೆಯೊಂದಕ್ಕೆ ಈ ರೀತಿಯ ವೇಗವನ್ನು ನೋಡುತ್ತಿದೆ. ಬಡವರಿಗಾಗಿ ಘೋಷಣೆಯಾದ ಯೋಜನೆಗಳು ಇಷ್ಟು ವೇಗವಾಗಿ ಅವರನ್ನು ತಲುಪುತ್ತವೆ ಎಂದು ಯಾರೂ ಊಹಿಸಿರಲಿಲ್ಲ. ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆಟುಕುವ ಸಾಲವನ್ನು ಒದಗಿಸಲು ಇಂತಹ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.</p>.<p>ಕೊರೊನಾ ವೈರಸ್ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡ ಬೀದಿಬದಿ ವ್ಯಾಪಾರಿಗಳಿಗೆ ನೆರವಾಗುವಂತೆ ಸರ್ಕಾರ ಜೂನ್ 1ರಂದು 'ಪಿಎಂ ಸ್ವನಿಧಿ' ಯೋಜನೆಯನ್ನು ಪ್ರಾರಂಭಿಸಿತ್ತು.</p>.<p>ಕೆಲಸವನ್ನು ಕಾಗದರಹಿತವನ್ನಾಗಿಸಲು ಈ ಯೋಜನೆಗೆ ತಂತ್ರಜ್ಞಾನವನ್ನು ಬಳಸಲು ನಿರ್ಧರಿಸಲಾಗಿದೆ. ಉತ್ತರ ಪ್ರದೇಶದ ಆರ್ಥಿಕತೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಪಾತ್ರ ಬಹಳ ದೊಡ್ಡದಿದೆ ಎಂದು ತಿಳಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರಿಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ಸ್ವನಿಧಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಈ ಯೋಜನೆಯ ಸಹಾಯದಿಂದ ಬೀದಿ ಬದಿ ವ್ಯಾಪಾರಿಗಳು ಈಗ 'ಆತ್ಮನಿರ್ಭರ್' ಆಗುತ್ತಿದ್ದಾರೆ ಎಂದು ಹೇಳಿದರು.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.</p>.<p>ಪಿಎಂ ಸ್ವನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸುತ್ತಿರುವಾಗ, ಯೋಜನೆಯಿಂದಾಗಿ ಅವರು ಸಂತೋಷವಾಗಿದ್ದಾರೆ ಎಂಬುದನ್ನು ನಾನು ಅರಿತುಕೊಂಡೆ. ಈ ಮೊದಲು ಜನರು ಸಾಲ ಪಡೆಯಲು ಅನೇಕ ಬಾರಿ ಬ್ಯಾಂಕುಗಳಿಗೆ ಭೇಟಿ ನೀಡಬೇಕಾಗಿತ್ತು. ಬಡ ಜನರು ಬ್ಯಾಂಕಿನೊಳಗೆ ಹೆಜ್ಜೆ ಹಾಕುವುದನ್ನು ಕೂಡ ಊಹಿಸಲು ಸಾಧ್ಯವಾಗಿರಲಿಲ್ಲ. ಆದರೆ ಇಂದು ಜನರು ತಮ್ಮ ಕೆಲಸವನ್ನು ಪ್ರಾರಂಭಿಸಲು ಸುಲಭವಾಗಿ ಸಾಲ ಪಡೆಯುತ್ತಿದ್ದಾರೆ ಎಂದರು.</p>.<p>'ಆತ್ಮನಿರ್ಭರ್ ಭಾರತ್'ಗೆ ಇದು ಮಹತ್ವದ ದಿನ ಎಂದು ಹೇಳಿದ ಪ್ರಧಾನಿ, ₹1.7 ಲಕ್ಷ ಕೋಟಿ ಮೌಲ್ಯದ' ಗರೀಬ್ ಕಲ್ಯಾಣ ಯೋಜನೆ' ಪ್ರಾರಂಭಿಸುವ ಮೂಲಕ ಕೇಂದ್ರವು ಬಡವರಿಗೆ ಸಹಾಯ ಮಾಡುವ ದಿಕ್ಕಿನಲ್ಲಿ ಕೆಲಸ ಮಾಡಿದೆ. ಬಡ ಜನರ ಕಲ್ಯಾಣಕ್ಕೆ ಆದ್ಯತೆ ನೀಡಲು ₹20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಬಿಡುಗಡೆ ಮಾಡಲಾಯಿತು. ನಮ್ಮ ಬೀದಿ ಬದಿ ವ್ಯಾಪಾರಿಗಳು ಆತ್ಮನಿರ್ಭರ್ ಆಗುತ್ತಿದ್ದಾರೆ ಮತ್ತು ಮುಂದೆ ಸಾಗುತ್ತಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>