<p><strong>ಗುವಾಹಟಿ</strong>: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಜತೆಗಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯ ಅಥವಾ ದೇಶದ ಹಸ್ತಕ್ಷೇಪವನ್ನು ಭಾರತ ಅನುಮತಿಸುವುದಿಲ್ಲ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ತಿಳಿಸಿದ್ದಾರೆ.</p><p>ಪಾಕಿಸ್ತಾನ ಜತೆಗಿನ ಮಾತುಕತೆ ಕೇವಲ ಭಯೋತ್ಪಾದನೆ ಮತ್ತು ಭಾರತಕ್ಕೆ ಸೇರಿದ ಪಾಕ್ ಆಕ್ರಮಿತ ಕಾಶ್ಮೀರ ಕುರಿತ ಎರಡು ವಿಷಯಗಳಿಗೆ ಸಂಬಂಧಿಸಿರುತ್ತದೆ ಎಂದು ಚೌಹಾಣ್ ಪುನರುಚ್ಚರಿಸಿದ್ದಾರೆ.</p><p>ಭಾರತ ಯಾವಾಗಲೂ ಶಾಂತಿಯನ್ನು ಪ್ರತಿಪಾದಿಸುತ್ತದೆ. ಆದರೆ ಪ್ರಚೋದನೆ ನೀಡದರೆ ಅದರ ವಿರುದ್ಧ ಸಮರ ಸಾರಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಚೌಹಾಣ್ ಹೇಳಿದ್ದಾರೆ.</p>.ಪಾಕ್ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ರಾಣಿ ಬಂಧನ.ಕಾಂಗ್ರೆಸ್ ನಾಯಕರು ಪಾಕಿಸ್ತಾನ ಏಜೆಂಟರು: ಯತ್ನಾಳ. <p>'ನಾವು ಇತರರ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಆದರೆ ಯಾರಾದರೂ ನಮ್ಮನ್ನು ಕೆಣುಕಲು ಪ್ರಯತ್ನಿಸಿದರೆ, ನಾವು ಅವರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಚೌಹಾಣ್ ತಿಳಿಸಿದ್ದಾರೆ.</p><p>ಪಹಲ್ಗಾಮ್ ದಾಳಿಯ ನಂತರ ಭಾರತ, ಪಾಕಿಸ್ತಾನಿ ಜನರಿಗೆ ಅಥವಾ ಸೈನ್ಯಕ್ಕೆ ಹಾನಿ ಮಾಡದಿರಲು ನಿರ್ಧರಿಸಿತು. ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಿತ್ತು. ಈ ಮೂಲಕ ಭಾರತ ಜಗತ್ತಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂದು ಚೌಹಾಣ್ ಹೇಳಿದ್ದಾರೆ.</p><p>'ನಾವು ಶಾಂತಿಯನ್ನು ಬಯಸುತ್ತೇವೆ. ಆದರೆ, ಅಗತ್ಯವಿದ್ದಾಗಲೆಲ್ಲಾ ನಾವು ನಮ್ಮ ಶಕ್ತಿಯನ್ನು ಪ್ರದರ್ಶಿಸುತ್ತೇವೆ. ನಮ್ಮ ಸಶಸ್ತ್ರ ಪಡೆಗಳು ಮತ್ತು ಕಾರ್ಯಾಚರಣೆಗೆ ಕಾರ್ಯತಂತ್ರ ರೂಪಿಸಿದ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ' ಎಂದು ಚೌಹಾಣ್ ತಿಳಿಸಿದ್ದಾರೆ.</p>.ಇಸ್ರೇಲ್ ದಾಳಿ: ಗಾಜಾದಲ್ಲಿ 58 ಮಂದಿ ಸಾವು.ಮಧುಮೇಹದ ಜಾಗೃತಿ ಮೂಡಿಸುವ ಫಲಕ ಸ್ಥಾಪಿಸಿ: ಶಾಲೆಗಳಿಗೆ ಸಿಬಿಎಸ್ಇ.'ಆಪರೇಷನ್ ಸಿಂಧೂರ', ಬಿನ್ ಲಾಡೆನ್ ಕೊಲೆಗೆ ಸಾಮ್ಯತೆಯಿದೆ: ಉಪರಾಷ್ಟ್ರಪತಿ ಧನಕರ್ .ವಿದೇಶಕ್ಕೆ ನಿಯೋಗ | ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ಕಳುಹಿಸಬೇಕೆ?: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಜತೆಗಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯ ಅಥವಾ ದೇಶದ ಹಸ್ತಕ್ಷೇಪವನ್ನು ಭಾರತ ಅನುಮತಿಸುವುದಿಲ್ಲ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ತಿಳಿಸಿದ್ದಾರೆ.</p><p>ಪಾಕಿಸ್ತಾನ ಜತೆಗಿನ ಮಾತುಕತೆ ಕೇವಲ ಭಯೋತ್ಪಾದನೆ ಮತ್ತು ಭಾರತಕ್ಕೆ ಸೇರಿದ ಪಾಕ್ ಆಕ್ರಮಿತ ಕಾಶ್ಮೀರ ಕುರಿತ ಎರಡು ವಿಷಯಗಳಿಗೆ ಸಂಬಂಧಿಸಿರುತ್ತದೆ ಎಂದು ಚೌಹಾಣ್ ಪುನರುಚ್ಚರಿಸಿದ್ದಾರೆ.</p><p>ಭಾರತ ಯಾವಾಗಲೂ ಶಾಂತಿಯನ್ನು ಪ್ರತಿಪಾದಿಸುತ್ತದೆ. ಆದರೆ ಪ್ರಚೋದನೆ ನೀಡದರೆ ಅದರ ವಿರುದ್ಧ ಸಮರ ಸಾರಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಚೌಹಾಣ್ ಹೇಳಿದ್ದಾರೆ.</p>.ಪಾಕ್ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ರಾಣಿ ಬಂಧನ.ಕಾಂಗ್ರೆಸ್ ನಾಯಕರು ಪಾಕಿಸ್ತಾನ ಏಜೆಂಟರು: ಯತ್ನಾಳ. <p>'ನಾವು ಇತರರ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಆದರೆ ಯಾರಾದರೂ ನಮ್ಮನ್ನು ಕೆಣುಕಲು ಪ್ರಯತ್ನಿಸಿದರೆ, ನಾವು ಅವರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಚೌಹಾಣ್ ತಿಳಿಸಿದ್ದಾರೆ.</p><p>ಪಹಲ್ಗಾಮ್ ದಾಳಿಯ ನಂತರ ಭಾರತ, ಪಾಕಿಸ್ತಾನಿ ಜನರಿಗೆ ಅಥವಾ ಸೈನ್ಯಕ್ಕೆ ಹಾನಿ ಮಾಡದಿರಲು ನಿರ್ಧರಿಸಿತು. ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಿತ್ತು. ಈ ಮೂಲಕ ಭಾರತ ಜಗತ್ತಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂದು ಚೌಹಾಣ್ ಹೇಳಿದ್ದಾರೆ.</p><p>'ನಾವು ಶಾಂತಿಯನ್ನು ಬಯಸುತ್ತೇವೆ. ಆದರೆ, ಅಗತ್ಯವಿದ್ದಾಗಲೆಲ್ಲಾ ನಾವು ನಮ್ಮ ಶಕ್ತಿಯನ್ನು ಪ್ರದರ್ಶಿಸುತ್ತೇವೆ. ನಮ್ಮ ಸಶಸ್ತ್ರ ಪಡೆಗಳು ಮತ್ತು ಕಾರ್ಯಾಚರಣೆಗೆ ಕಾರ್ಯತಂತ್ರ ರೂಪಿಸಿದ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ' ಎಂದು ಚೌಹಾಣ್ ತಿಳಿಸಿದ್ದಾರೆ.</p>.ಇಸ್ರೇಲ್ ದಾಳಿ: ಗಾಜಾದಲ್ಲಿ 58 ಮಂದಿ ಸಾವು.ಮಧುಮೇಹದ ಜಾಗೃತಿ ಮೂಡಿಸುವ ಫಲಕ ಸ್ಥಾಪಿಸಿ: ಶಾಲೆಗಳಿಗೆ ಸಿಬಿಎಸ್ಇ.'ಆಪರೇಷನ್ ಸಿಂಧೂರ', ಬಿನ್ ಲಾಡೆನ್ ಕೊಲೆಗೆ ಸಾಮ್ಯತೆಯಿದೆ: ಉಪರಾಷ್ಟ್ರಪತಿ ಧನಕರ್ .ವಿದೇಶಕ್ಕೆ ನಿಯೋಗ | ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ಕಳುಹಿಸಬೇಕೆ?: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>