<p><strong>ನವದೆಹಲಿ: </strong>ಭಾರತ ತನ್ನ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ತನ್ನ ರಕ್ಷಣಾ ಕ್ಷೇತ್ರವನ್ನು ‘ಆತ್ಮನಿರ್ಭರ‘ದ ಮೂಲಕ ಸ್ವಾವಲಂಬಿಯಾಗಿಸಲು ವೇಗವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>‘ಸ್ಥಳೀಯವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸುವ ಕಾರ್ಖಾನೆ ಆರಂಭಿಸಲು ನಿರ್ಧರಿಸಿದ್ದೇವೆ. ಇಂಥ ಒಂದು ನಿರ್ಧಾರದ ಮೂಲಕ 130 ಕೋಟಿ ಭಾರತೀಯರನ್ನು ‘ವೋಕಲ್ ಫಾರ್ ಲೋಕಲ್‘ನತ್ತ ಆಕರ್ಷಿಸುತ್ತಿದೆ‘ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.</p>.<p>ಜೈಸಲ್ಮೇರ್ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಿರುವ ಪ್ರಧಾನಿಯವರು ಯೋಧರ ಶೌರ್ಯ ಮತ್ತು ಶ್ರೇಷ್ಠತೆಯನ್ನು ಶ್ಲಾಗಿಸಿದರು. ‘ಹಿಮಾಲಯದ ಶಿಖರಗಳು, ಮರುಭೂಮಿ, ದಟ್ಟಕಾಡುಗಳು, ಸಮುದ್ರದ ಆಳ ಎಲ್ಲೇ ಸಂಘರ್ಷಗಳು, ಸವಾಲುಗಳು ಎದುರಾದರೂ, ಅಲ್ಲೆಲ್ಲ ನೀವು ಜಯ ಸಾಧಿಸುತ್ತೀರಿ‘ ಎಂದು ಹೇಳಿದರು.</p>.<p>‘ನೀವು ಹಿಮಚ್ಛಾದಿತ ಪರ್ವತಗಳಲ್ಲಿ ಅಥವಾ ಮರುಭೂಮಿಗಳಲ್ಲಿರಬಹುದು. ನಾನು ನಿಮ್ಮ ನಡುವೆ ಇದ್ದಾಗ ಮಾತ್ರ ನನ್ನ ದೀಪಾವಳಿ ಆಚರಣೆ ಪೂರ್ಣಗೊಳ್ಳುತ್ತದೆ. ನಿಮ್ಮ ಮುಖದ ಮೇಲೆ ಮೂಡುವ ಮಂದಹಾಸವನ್ನು ಕಂಡಾಗ, ನನ್ನ ಸಂತೋಷ ದ್ವಿಗುಣಗೊಳ್ಳುತ್ತದೆ‘ ಎಂದು ಮೋದಿ ಹೇಳಿದ್ದಾರೆ.</p>.<p>‘ನಮ್ಮ ಸೈನಿಕರು ಗಡಿಗಳನ್ನು ರಕ್ಷಿಸುವುದನ್ನು ತಡೆಯಲು ಜಗತ್ತಿನ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ‘ ಎಂದು ಪ್ರತಿಪಾದಿಸಿದ ಅವರು, ‘ಪ್ರತಿಯೊಬ್ಬ ಭಾರತೀಯನು ನಿಮ್ಮ ಬಗ್ಗೆ ಹೆಮ್ಮೆಪಡುತ್ತಾನೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತ ತನ್ನ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ತನ್ನ ರಕ್ಷಣಾ ಕ್ಷೇತ್ರವನ್ನು ‘ಆತ್ಮನಿರ್ಭರ‘ದ ಮೂಲಕ ಸ್ವಾವಲಂಬಿಯಾಗಿಸಲು ವೇಗವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>‘ಸ್ಥಳೀಯವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸುವ ಕಾರ್ಖಾನೆ ಆರಂಭಿಸಲು ನಿರ್ಧರಿಸಿದ್ದೇವೆ. ಇಂಥ ಒಂದು ನಿರ್ಧಾರದ ಮೂಲಕ 130 ಕೋಟಿ ಭಾರತೀಯರನ್ನು ‘ವೋಕಲ್ ಫಾರ್ ಲೋಕಲ್‘ನತ್ತ ಆಕರ್ಷಿಸುತ್ತಿದೆ‘ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.</p>.<p>ಜೈಸಲ್ಮೇರ್ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಿರುವ ಪ್ರಧಾನಿಯವರು ಯೋಧರ ಶೌರ್ಯ ಮತ್ತು ಶ್ರೇಷ್ಠತೆಯನ್ನು ಶ್ಲಾಗಿಸಿದರು. ‘ಹಿಮಾಲಯದ ಶಿಖರಗಳು, ಮರುಭೂಮಿ, ದಟ್ಟಕಾಡುಗಳು, ಸಮುದ್ರದ ಆಳ ಎಲ್ಲೇ ಸಂಘರ್ಷಗಳು, ಸವಾಲುಗಳು ಎದುರಾದರೂ, ಅಲ್ಲೆಲ್ಲ ನೀವು ಜಯ ಸಾಧಿಸುತ್ತೀರಿ‘ ಎಂದು ಹೇಳಿದರು.</p>.<p>‘ನೀವು ಹಿಮಚ್ಛಾದಿತ ಪರ್ವತಗಳಲ್ಲಿ ಅಥವಾ ಮರುಭೂಮಿಗಳಲ್ಲಿರಬಹುದು. ನಾನು ನಿಮ್ಮ ನಡುವೆ ಇದ್ದಾಗ ಮಾತ್ರ ನನ್ನ ದೀಪಾವಳಿ ಆಚರಣೆ ಪೂರ್ಣಗೊಳ್ಳುತ್ತದೆ. ನಿಮ್ಮ ಮುಖದ ಮೇಲೆ ಮೂಡುವ ಮಂದಹಾಸವನ್ನು ಕಂಡಾಗ, ನನ್ನ ಸಂತೋಷ ದ್ವಿಗುಣಗೊಳ್ಳುತ್ತದೆ‘ ಎಂದು ಮೋದಿ ಹೇಳಿದ್ದಾರೆ.</p>.<p>‘ನಮ್ಮ ಸೈನಿಕರು ಗಡಿಗಳನ್ನು ರಕ್ಷಿಸುವುದನ್ನು ತಡೆಯಲು ಜಗತ್ತಿನ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ‘ ಎಂದು ಪ್ರತಿಪಾದಿಸಿದ ಅವರು, ‘ಪ್ರತಿಯೊಬ್ಬ ಭಾರತೀಯನು ನಿಮ್ಮ ಬಗ್ಗೆ ಹೆಮ್ಮೆಪಡುತ್ತಾನೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>